Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಆನೆ’ ಸಸ್ಯಾಹಾರಿಯೋ.? ಮಾಂಸಾಹಾರಿಯೋ.? ಉತ್ತರ, ನೀವು ಊಹಿಸೋಕು ಆಸಾಧ್ಯ.!

29/10/2025 9:56 PM

ನೇರಗುತ್ತಿಗೆ ಮೂಲಕ ವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

29/10/2025 9:36 PM

ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರಗಳ ಕಾಲ ಕನ್ನಡ ಚಿತ್ರಗಳ ಪ್ರದರ್ಶನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

29/10/2025 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನಧಿಕೃತ ಔಷಧ ಅಂಗಡಿಗಳ ವಿರುದ್ದ ಕ್ರಮ: ಸಚಿವ ದಿನೇಶ್ ಗುಂಡೂರಾವ್
KARNATAKA

ಅನಧಿಕೃತ ಔಷಧ ಅಂಗಡಿಗಳ ವಿರುದ್ದ ಕ್ರಮ: ಸಚಿವ ದಿನೇಶ್ ಗುಂಡೂರಾವ್

By kannadanewsnow0909/12/2024 6:03 PM

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿ ಔಷಧ ಪರವಾನಗಿ ಇಲ್ಲದೆ ಅನಧಿಕೃತವಾಗಿ ಔಷಧ ಅಂಗಡಿಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ ಮತ್ತು ನಿಯಮಾವಳಿಗಳನ್ವಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ವಿಧಾನ ಪರಿಷತ್‌ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ ಪ್ರಸ್ತುತ 37,130 ಖಾಸಗಿ ಔಷಧ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 07 ಜತನಾ ಬಜಾರ್‌ಗಳು, 23 ಜನ ಸಂಜೀವಿನಿ ಕೇಂದ್ರಗಳು ಹಾಗೂ 178 ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

2023-24 ರಲ್ಲಿ ದೈನಂದಿನ ಪರಿವೀಕ್ಷಣೆಯಲ್ಲಿ ಇಲಾಖೆಯ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿದ 1245 ಪರವಾನಿಗೆಗಳನ್ನು ಅಮಾನತ್ತುಗೊಳಿಸಿದ್ದು, 292 ಪರವಾನಿಗೆಗಳನ್ನು ರದ್ದುಗೊಳಿಸಲಾಗಿದೆ.

ಇಲಾಖೆಯ ಅಧಿಕಾರಿಗಳು ಮಾದಕ ಔಷಧಿಗಳ ದಾಸ್ತಾನು ಮತ್ತು ಮಾರಾಟಗಳ ಬಗ್ಗೆ ನಿಗಾವಹಿಸುತ್ತಿದ್ದು ಮತ್ತು ಖಾಸಗಿ ಔಷಧ ಇದು ಮಳಿಗೆಗಳಲ್ಲಿ ಮಾದಕ ವಸ್ತುಗಳು ನಿಯಾಮಬಾಹಿರ ಮಾರಾಟಗಳ ಬಗ್ಗೆ ಪರಿವೀಕ್ಷಣೆಗಳನ್ನು ಕೈಗೊಂಡು ಉಲ್ಲಂಘನೆಗಳು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಇದಲ್ಲದೆ ಇಲಾಖೆಯಲ್ಲಿ ಪ್ರತಿ ವರ್ಷ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟಲು 3 ದಿನ ವಿಶೇಷ ಪರೀಕ್ಷಾರ್ಥ ಪರಿವೀಕ್ಷಣೆ ಕೈಗೊಂಡು ಉಲ್ಲಂಘನೆ ಕಂಡುಬಂದ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ ಎಂದರು.

ಔಷಧ ನಿಯಂತ್ರಣ ಇಲಾಖೆಯಲ್ಲಿ ಒಟ್ಟು 112 ಔಷಧ ಪರಿವೀಕ್ಷಕರ ಹುದ್ದೆಗಳಲ್ಲಿ 08 ಹುದ್ದೆಗಳು ಮಾತ್ರ ಭರ್ತಿಯಾಗಿರುತ್ತದೆ. ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಒಟ್ಟು 83 ಹುದ್ದೆಗಳನ್ನು ಭರ್ತಿ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ನೇಮಕಾತಿ ಸಂಬಂಧಿಸಿದ ಪ್ರಕರಣವು ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುತ್ತದೆ. ಪ್ರಕರಣದ ಇತ್ಯರ್ಥವಾದ ನಂತರ ಭರ್ತಿ ಮಾಡಲಾಗುವುದು ಎಂದರು.

ಔಷಧಗಳ – ಕಾಂತಿವರ್ಧಕ ತಯಾರಕರು ಔಷಧ ಮತ್ತು ಅಧಿನಿಯಮ ಮತ್ತು ನಿಯಮಾವಳಿಗಳ ಪ್ರಕಾರ ಔಷಧಗಳನ್ನು ತಯಾರಿಸಿ ಮಾರುಕಟ್ಟೆಗೆ ಸರಬರಾಜು ಮಾಡುವ ಮುಂಚಿತವಾಗಿ ಎಲ್ಲಾ ಔಷಧಗಳ ಗುಣಮಟ್ಟವನ್ನು ಖಾತ್ರಿಪಡಿಸಿಕೊಂಡ ನಂತರವೇ ಮಾರುಕಟ್ಟೆಗೆ ಸರಬರಾಜು ಮಾಡಬೇಕು.

ಇದಲ್ಲದೆ ಇಲಾಖಾ ಅಧಿಕಾರಿಗಳು ಮಾರುಕಟ್ಟೆಯಲ್ಲಿ ಲಭ್ಯವಿರುವ ಔಷಧಗಳ ಗುಣಮಟ್ಟದ ಬಗ್ಗೆ ನಿಗಾವಹಿಸಿ ಮತ್ತು ನಿಯಮಿತವಾಗಿ ನರ್ಸಿಂಗ್ ಹೋಂಗಳು, ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳನ್ನು ಒಳಗೊಂಡು ಮಾರುಕಟ್ಟೆಯಲ್ಲಿ ಲಭ್ಯವಿರುವ ಔಷಧಿಗಳನ್ನು ಮಾದರಿಗಳನ್ನಾಗಿ ಪಡೆದು ರಾಜ್ಯದ ಔಷಧ ಪರೀಕ್ಷಾ ಪ್ರಯೋಗಾಲಯಗಳಿಗೆ ಕಳುಹಿಸಿ ಗುಣಮಟ್ಟವನ್ನು ಖಾತರಿಪಡಿಸಿಕೊಳ್ಳುವ ಮೂಲಕ ಆಸ್ಪತ್ರೆ, ನರ್ಸಿಂಗ್ ಹೋಂ ಮತ್ತು ಕ್ಲಿನಿಕ್‌ಗಳಲ್ಲಿ ಲಭ್ಯವಿರುವ ಔಷಧಗಳ ಗುಣಮಟ್ಟವನ್ನು ಪರಿಶೀಲಿಸಲಾಗುತ್ತಿದೆ ಎಂದರು.

Good News : ‘ಬಿಮಾ ಸಖಿ ಯೋಜನೆ’ಗೆ ಮೋದಿ ಚಾಲನೆ ; ಮಹಿಳೆಯರಿಗೆ ತಿಂಗಳಿಗೆ 7,000 ರೂ. ಲಭ್ಯ, ನೀವೂ ಅರ್ಜಿ ಸಲ್ಲಿಸಿ! – Kannada News | India News | Breaking news | Live news | Kannada | Kannada News | Karnataka News | Karnataka News

ಕರ್ನಾಟಕದಲ್ಲಿ ‘ಪಿಎಂ ಸೂರ್ಯ ಘರ್ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: 5.14 ಲಕ್ಷ ನೋಂದಣಿ – Kannada News | India News | Breaking news | Live news | Kannada | Kannada News | Karnataka News | Karnataka News

Share. Facebook Twitter LinkedIn WhatsApp Email

Related Posts

ನೇರಗುತ್ತಿಗೆ ಮೂಲಕ ವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

29/10/2025 9:36 PM1 Min Read

ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರಗಳ ಕಾಲ ಕನ್ನಡ ಚಿತ್ರಗಳ ಪ್ರದರ್ಶನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

29/10/2025 9:33 PM1 Min Read

ಬೆಂಗಳೂರಲ್ಲಿ ವಸತಿ ಗೃಹಗಳ(PG) ಉದ್ದಿಮೆಗಳಿಗೆ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ: GBA ಆದೇಶ

29/10/2025 9:30 PM1 Min Read
Recent News

‘ಆನೆ’ ಸಸ್ಯಾಹಾರಿಯೋ.? ಮಾಂಸಾಹಾರಿಯೋ.? ಉತ್ತರ, ನೀವು ಊಹಿಸೋಕು ಆಸಾಧ್ಯ.!

29/10/2025 9:56 PM

ನೇರಗುತ್ತಿಗೆ ಮೂಲಕ ವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

29/10/2025 9:36 PM

ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರಗಳ ಕಾಲ ಕನ್ನಡ ಚಿತ್ರಗಳ ಪ್ರದರ್ಶನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

29/10/2025 9:33 PM

BREAKING ; ಗಾಜಾದಲ್ಲಿ ನಡೆದ ಬೃಹತ್ ದಾಳಿಯಲ್ಲಿ 104 ಜನ ಸಾವು ; ಆದ್ರೂ ‘ಕದನ ವಿರಾಮ ಮುಂದುವರೆದಿದೆ’ ಎಂದ ಇಸ್ರೇಲ್

29/10/2025 9:33 PM
State News
KARNATAKA

ನೇರಗುತ್ತಿಗೆ ಮೂಲಕ ವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

By kannadanewsnow0929/10/2025 9:36 PM KARNATAKA 1 Min Read

ಧಾರವಾಡ : ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26 ನೇ ಸಾಲಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ…

ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರಗಳ ಕಾಲ ಕನ್ನಡ ಚಿತ್ರಗಳ ಪ್ರದರ್ಶನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

29/10/2025 9:33 PM

ಬೆಂಗಳೂರಲ್ಲಿ ವಸತಿ ಗೃಹಗಳ(PG) ಉದ್ದಿಮೆಗಳಿಗೆ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ: GBA ಆದೇಶ

29/10/2025 9:30 PM

ಬೆಂಗಳೂರಿನ ಜಯನಗರದ RTO ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

29/10/2025 9:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.