Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

1 ಕಿಲೋ ಟೊಮೆಟೊ ಬೆಲೆ 600 ರೂಪಾಯಿ! ಚಿನ್ನಕ್ಕಿಂತ ಹೆಚ್ಚು ಡಿಮ್ಯಾಂಡ್, ಎಲ್ಲಿ ಗೊತ್ತಾ?

28/10/2025 10:07 PM

SHOCKING: ಒಂದು ವಾರದಲ್ಲಿ ಮಿಲಿಯನ್ ಜನರು ‘ChatGPT’ಯಲ್ಲಿ ‘ಆತ್ಮಹತ್ಯೆ’ ಬಗ್ಗೆ ವಿಚಾರಿಸುತ್ತಾರೆ: ಓಪನ್ ಎಐ

28/10/2025 10:03 PM

ವಾರದಲ್ಲಿ ಏನಿಲ್ಲವೆಂದ್ರು 1 ಮಿಲಿಯನ್ ಜನರು ‘ChatGPT’ ಬಳಿ ‘ಆತ್ಮಹತ್ಯೆ’ ಕುರಿತು ವಿಚಾರಿಸ್ತಾರೆ : OpenAI

28/10/2025 9:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಟ ದರ್ಶನ್ ಸೇರಿ 13 ಆರೋಪಿಗಳನ್ನು ನ್ಯಾಯಾಲಯದಿಂದ ಬಿಗಿ ಭದ್ರತೆಯಲ್ಲಿ ಕರೆದೊಯ್ದ ಪೊಲೀಸರು
KARNATAKA

ನಟ ದರ್ಶನ್ ಸೇರಿ 13 ಆರೋಪಿಗಳನ್ನು ನ್ಯಾಯಾಲಯದಿಂದ ಬಿಗಿ ಭದ್ರತೆಯಲ್ಲಿ ಕರೆದೊಯ್ದ ಪೊಲೀಸರು

By kannadanewsnow0911/06/2024 8:08 PM

ಬೆಂಗಳೂರು: ಬೆಂಗಳೂರಿಗೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದಂತ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಕೋರ್ಟ್ 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಈ ಹಿನ್ನಲೆಯಲ್ಲಿ ನ್ಯಾಯಾಲಯದಿಂದ ಬಿಗಿ ಭದ್ರತೆಯಲ್ಲಿ ಪೊಲೀಸರು 13 ಆರೋಪಿಗಳನ್ನು ಕೊರೆದೆಯ್ದರು.

ಅಶ್ಲೀಲ ಸಂದೇಶ ಕಳುಹಿಸಿದ ಒಂದೇ ಒಂದು ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಹತ್ಯೆಗೈದು, ಮೋರಿಗೆ ಶವವನ್ನು ಎಸೆಯಲಾಗಿತ್ತು. ಈ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್ ಸೇರಿ 13 ಮಂದಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಪೊಲೀಸರು ಹಾಜರುಪಡಿಸಿದರು. ಅವರಿಗೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬಾತ ನಟ ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಸ ಸಂದೇಶ ಕಳುಹಿಸುತ್ತಿದ್ದನಂತೆ. ಅಲ್ಲದೇ ನಟ ದರ್ಶನ್ ಬಗ್ಗೆಯೂ ಬಗ್ಗೆಯೂ ಕೆಟ್ಟದಾಗಿ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಕೂಡ ಹಾಕುತ್ತಿದ್ದನಂತೆ. ಇದೇ ಕಾರಣಕ್ಕೆ ಅನೇಕ ಬಾರಿ ನಟ ದರ್ಶನ್ ಸೇರಿದಂತೆ ಅವರ ಅಭಿಮಾನಿಗಳು ರೇಣುಕಾಸ್ವಾಮಿಗೆ ಎಚ್ಚರಿಸಿದ್ದರು.

ಆದ್ರೇ ರೇಣುಕಾಸ್ವಾಮಿ ಮಾತ್ರ ತನ್ನ ಚಾಳಿಯನ್ನು ಮುಂದುವರೆಸಿದ್ದನು ಎನ್ನಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಂತ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್ ಮಾಡಿಕೊಂಡು ಬಂದು, ಬೆಂಗಳೂರಿನ ಶೆಡ್ ಒಂದರಲ್ಲಿ ಕೂಡಿ ಹಾಕಿ. ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ರಾಡ್ ನಿಂದ ಬಲವಾಗಿ ತಲೆಗೆ ಹೊಡೆದ ಪರಿಣಾಮ, ಆತ ಶೆಡ್ ನಲ್ಲೇ ಸಾವನ್ನಪ್ಪಿದ್ದನಂತೆ.

ಮೃತ ಪಟ್ಟಿದ್ದಂತ ರೇಣುಕಾಸ್ವಾಮಿಯನ್ನು ಸಮೀಪದ ಮೋರಿಯೊಂದಕ್ಕೆ ಮೂಟೆಕಟ್ಟಿ ಆರೋಪಿಗಳು ಎಸೆದು ಹೋಗಿದ್ದರಂತೆ. ಮೋರಿಯಲ್ಲಿ ನಾಯಿಗಳು ಮೃತದೇಹವನ್ನು ಎಳೆದಾಡುತ್ತಿದ್ದದ್ದು ಕಂಡಂತ ಡಿಲಿವರಿ ಬಾಯ್ ಒಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವಿಷಯ ತಿಳಿದ ಬಳಿಕ ಕಾಮಾಕ್ಷಿ ಠಾಣೆಯ ಪೊಲೀಸರು ಮೋರಿ ಬಳಿಗೆ ತೆರಳಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು.

ಆರಂಭದಲ್ಲಿ ಆತ್ಮಹತ್ಯೆ ಎಂಬುದಾಗಿಯೇ ಭಾವಿಸಿದ್ದಂತ ಪೊಲೀಸರಿಗೆ ಮರಣೋತ್ತರ ಪರೀಕ್ಷೆಯಲ್ಲಿ ಹಲ್ಲೆ ಮಾಡಿ ಹತ್ಯೆ ಮಾಡಿರೋದು ತಿಳಿದು ಬಂದಿದೆ. ತನಿಖೆ ಚುರುಕುಗೊಳಿಸಿದಾಗ ಆತ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬುದಾಗಿ ಪತ್ತೆಯಾಗಿದೆ. ಜೊತೆಗೆ ಹತ್ಯೆ ಹಿಂದೆ ನಟ ದರ್ಶನ್ ಸೇರಿದಂತೆ 13 ಆರೋಪಿಗಳ ಕೈವಾಡ ಪತ್ತೆಯಾಗಿದೆ.

ದರ್ಶನ್ ಆಪ್ತರಾದ ವಿನಯ್, ಆನಂದ್ , ಕಿರಣ್ ಅವರುಗಳನ್ನು ಬಂಧಿಸಿ, ವಿಚಾರಣೆ ನಡೆಸಿದಾಗ, ನಟ ದರ್ಶನ್ ಹೇಳಿದ್ದರಿಂದ ರೇಣುಕಾಸ್ವಾಮಿ ಹತ್ಯೆ ಮಾಡಿರೋದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಈ ಬಳಿಕ ನಟ ದರ್ಶನ್, ಆತನ ಗೆಳತಿ ಪವಿತ್ರಾ ಗೌಡ, ವಿ.ವಿನಯ್, ಆರ್.ನಾಗರಾಜು, ಎಂ ಲಕ್ಷ್ಮಣ್, ಎಸ್ ಪ್ರದೋಶ್, ಕೆ.ಪವನ್, ದೀಪಕ್ ಕುಮಾರ್, ನಂದೀಶ್, ಕಾರ್ತಿಕ್, ನಿಖಿಲ್ ನಾಯಕ್, ಕೇಶವ ಮೂರ್ತಿ ಹಾಗೂ ರಾಘವೇಂದ್ರ ಆಲಿಯಾಸ್ ರಾಘು ಸೇರಿದಂತೆ 13 ಆರೋಪಿಗಳನ್ನು ಕಾಮಾಕ್ಷಿ ಠಾಣೆಯ ಪೊಲೀಸರು ಬಂಧಿಸಿದ್ದರು.

ಬಂಧಿತ ಆರೋಪಿಗಳನ್ನು ವೈದ್ಯಕೀಯ ತಪಾಸಣೆಯ ಬಳಿಕ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಮೂರ್ತಿಗಳು ನಿಮ್ಮನ್ನು ಎಷ್ಟು ಗಂಟೆಗೆ ಎಲ್ಲಿ ಬಂದಿಸಿದ್ದಾರೆ ಎಂದು ಪ್ರಶ್ನಿಸಿದರು. ಆಗ ಎ1 ಆರೋಪಿಯಾಗಿರುವಂತ ಪವಿತ್ರಾ ಗೌಡ ಅವರು, ಪೊಲೀಸ್ ಠಾಣೆಯಲ್ಲಿ ಮಧ್ಯಾಹ್ನ 3 ಗಂಟೆಗೆ ಬಂಧಿಸಿದ್ದಾರೆ ಎಂಬುದಾಗಿ ಪ್ರತಿಕ್ರಿಯಿಸಿದರು.

ಅಲ್ಲದೇ ನಟ ದರ್ಶನ್ ಅವರನ್ನು ಕೇಳಿದಾಗ ಅವರು 2.30ಕ್ಕೆ ಪೊಲೀಸ್ ಠಾಣೆಯಲ್ಲಿ ಇದ್ದಾಗ ಬಂದಿಸಿದ್ದಾರೆ ಎಂದು ಉತ್ತರಿಸಿದರು. ಅಲ್ಲದೇ ಪೊಲೀಸರು ಯಾವುದೇ ಕಿರುಕುಳ ನೀಡಿಲ್ಲ ಎಂಬುದಾಗಿ ಉತ್ತರಿಸಿದರು.

ಈ ವೇಳೆಯಲ್ಲಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಆರೋಪಿಗಳನ್ನು 14 ದಿನಗಳ ಕಾಲ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಕಿಡ್ನ್ಯಾಪ್ ಮಾಡಿ ಕರೆದೊಯ್ದಿದ್ದಾರೆ. ಎಲ್ಲಾ ಕಡೆ ಮಹಜರು ಮಾಡಬೇಕು. ಕೂಡಿ ಹಾಕಿದ ಜಾಗ, ಕೊಲೆ ಮಾಡಿದ ಸ್ಥಳ ಮಹಜರು ನಡೆಸಬೇಕು. ಕೊಲೆಯಾದ ಸ್ಥಳ, ಶವ ಎಸೆದ ಜಾಗ ಎಲ್ಲಾ ಮಹಜರು ಮಾಡಬೇಕು. ನಮ್ಮ ವಶಕ್ಕೆ 14 ದಿನ ನೀಡುವಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ನ ನ್ಯಾಯಮೂರ್ತಿಯನ್ನು ಕೋರಿದರು.

ಈ ಹಿನ್ನಲೆಯಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳಿಗೆ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಈ ಬೆನ್ನಲ್ಲೇ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ನ್ಯಾಯಾಲಯದಿಂದ ಪೊಲೀಸರು ಕರೆದೊಯ್ದರು.

BREAKING: ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ‘ಮೋಹನ್ ಚರಣ್ ಮಾಂಝಿ’ ಆಯ್ಕೆ | Mohan Charan Majhi

10 ದಿನಗಳ ‘ಯೋಗೋತ್ಸವ’ ಕಾರ್ಯಕ್ರಮಕ್ಕೆ ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ಚಾಲನೆ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರಿ ನೌಕರರಿಗೆ ‘ಜ್ಯೋತಿ ಸಂಜೀವಿನಿ ಯೋಜನೆ’ಗೆ ಅರ್ಜಿ ತುಂಬುವ ಕುರಿತು ಮಹತ್ವದ ಮಾಹಿತಿ

28/10/2025 9:22 PM2 Mins Read

ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಸಿದ್ಧರಾಮಯ್ಯ ಸ್ಪರ್ಧಿಸುವುದು ಖಚಿತ: ಸಚಿವ ಬೈರತಿ ಸುರೇಶ್

28/10/2025 9:03 PM1 Min Read

ರಾಜ್ಯ ಹೈಕೋರ್ಟಿನ ತೀರ್ಪಿನಿಂದ ಹಿನ್ನಡೆ, ಷಡ್ಯಂತ್ರಕ್ಕೆ ತಡೆ: ಬಿ.ವೈ ವಿಜಯೇಂದ್ರ

28/10/2025 8:48 PM1 Min Read
Recent News

1 ಕಿಲೋ ಟೊಮೆಟೊ ಬೆಲೆ 600 ರೂಪಾಯಿ! ಚಿನ್ನಕ್ಕಿಂತ ಹೆಚ್ಚು ಡಿಮ್ಯಾಂಡ್, ಎಲ್ಲಿ ಗೊತ್ತಾ?

28/10/2025 10:07 PM

SHOCKING: ಒಂದು ವಾರದಲ್ಲಿ ಮಿಲಿಯನ್ ಜನರು ‘ChatGPT’ಯಲ್ಲಿ ‘ಆತ್ಮಹತ್ಯೆ’ ಬಗ್ಗೆ ವಿಚಾರಿಸುತ್ತಾರೆ: ಓಪನ್ ಎಐ

28/10/2025 10:03 PM

ವಾರದಲ್ಲಿ ಏನಿಲ್ಲವೆಂದ್ರು 1 ಮಿಲಿಯನ್ ಜನರು ‘ChatGPT’ ಬಳಿ ‘ಆತ್ಮಹತ್ಯೆ’ ಕುರಿತು ವಿಚಾರಿಸ್ತಾರೆ : OpenAI

28/10/2025 9:54 PM

W,W,W,W,W,W,W.. 24 ಎಸೆತಗಳಲ್ಲಿ 7 ವಿಕೆಟ್’ಗಳು, ಹ್ಯಾಟ್ರಿಕ್ ಅಲ್ಲ ಟಿ20ಐಗಳಲ್ಲಿ ಬೃಹತ್ ದಾಖಲೆ

28/10/2025 9:37 PM
State News
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ‘ಜ್ಯೋತಿ ಸಂಜೀವಿನಿ ಯೋಜನೆ’ಗೆ ಅರ್ಜಿ ತುಂಬುವ ಕುರಿತು ಮಹತ್ವದ ಮಾಹಿತಿ

By kannadanewsnow0928/10/2025 9:22 PM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಜ್ಯೋತಿ ಸಂಜೀವಿನಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಅರ್ಜಿ ತುಂಬಲು ಈ ಕೆಳಕಂಡಂತೆ ವಿಶೇಷ ಸೂಚನೆಗಳನ್ನು…

ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಸಿದ್ಧರಾಮಯ್ಯ ಸ್ಪರ್ಧಿಸುವುದು ಖಚಿತ: ಸಚಿವ ಬೈರತಿ ಸುರೇಶ್

28/10/2025 9:03 PM

ರಾಜ್ಯ ಹೈಕೋರ್ಟಿನ ತೀರ್ಪಿನಿಂದ ಹಿನ್ನಡೆ, ಷಡ್ಯಂತ್ರಕ್ಕೆ ತಡೆ: ಬಿ.ವೈ ವಿಜಯೇಂದ್ರ

28/10/2025 8:48 PM

ಮಲಬದ್ಧತೆ ಕುರಿತು ಜಾಗೃತಿ ಮೂಡಿಸಲು ಅಭಿಯಾನ ಪ್ರಾರಂಭಿಸಿದ ‘ಡಲ್ಕೋಫ್ಲೆಕ್ಸ್’ ಸಂಸ್ಥೆ

28/10/2025 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.