ಬೆಂಗಳೂರು: ರೇಣುಕಸ್ವಾಮಿ ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿದಂತೆ ಹಲವರ ಪೊಲೀಸ್ ಕಸ್ಟಡಿ ಅವಧಿ ಇಂದು ಮುಕ್ತಾಯಗೊಳ್ಳಲಿದೆ. ಈ ನಡುವೆ ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ, ಜೂನ್ 20ರ ಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಈ ನಡುವೆ ನಟ ದರ್ಶನ್ (Darshan) ಮತ್ತು ಗ್ಯಾಂಗ್ ವಿರುದ್ಧ ಪೊಲೀಸರು ಒಟ್ಟು 9 ಸೆಕ್ಷನ್ಗಳ (IPC Sections) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದ್ದು, ಈ ನಡುವೆ ಯಾವೆಲ್ಲ ಸೆಕ್ಷನ್ಗಳಲ್ಲಿ ಎನು ಇದೇ ಎನ್ನುವುದನ್ನು ನೋಡುವುದಾದರೆ ಅದರ ವಿವರ.
ಸೆಕ್ಷನ್ 302 – ಕೊಲೆಗೆ ದಂಡನೆ
ಸೆಕ್ಷನ್ 201 – ಅಪರಾಧಿಯನ್ನು ರಕ್ಷಿಸುವುದಕ್ಕಾಗಿ ತಪ್ಪು ಮಾಹಿತಿ ಕೊಡುವುದು, ಸಾಕ್ಷ್ಯ ನಾಶ
ಸೆಕ್ಷನ್ 120(ಬಿ) – ಕೊಲೆ ಮಾಡಲು ಮಾಡಿಕೊಂಡ ಅಪರಾಧಿಕ ಒಳ ಸಂಚು. ಕೃತ್ಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರಿಗೂ ಶಿಕ್ಷೆ ವಿಧಿಸಬೇಕು
ಸೆಕ್ಷನ್ 355 – ತೀವ್ರ ಉದ್ರೇಕದಿಂದಲ್ಲದೇ ವ್ಯಕ್ತಿಗೆ ಅವಮಾನ ಮಾಡಲು ಅವನ ಮೇಲೆ ಹಲ್ಲೆ, ಅಥವಾ ಅಪರಾಧಿಕ ಬಲಪ್ರಯೋಗ ಮಾಡುವುದು
ಸೆಕ್ಷನ್ 384 – ಬಲಾಗ್ದ್ರ ಹಣಕ್ಕಾಗಿ ದಂಡನೆ / ಸುಲಿಗೆ
ಸೆಕ್ಷನ್ 143 – ಕಾನೂನು ಬಾಹಿರ ಕೃತ್ಯ ಎಸಗಿದವರಿಗೆ 6 ತಿಂಗಳ ವರೆಗೆ ಜೈಲು ಅಥವಾ ಸಮಾನಾಂತರ ದಂಡ ವಿಧಿಸಬಹುದಾದ ದಂಡನೆ
ಸೆಕ್ಷನ್ 147 – ದೊಂಬಿ ಗಲಾಟೆ ಮಾಡಿದರೆ ದಂಡನೆ
ಸೆಕ್ಷನ್ 148 – ಮಾರಕ ಆಯುಧಗಳನ್ನು ಬಳಸಿ ದೊಂಬಿ ಮಾಡುವುದು
ಸೆಕ್ಷನ್ 149 – ಒಂದೇ ಉದ್ದೇಶ ಈಡೇರಿಸಲು ಮಾಡಲಾದ ಅಪರಾಧಗಳ ಬಗ್ಗೆ ವಿಧಿಸಿರುವ ಕೂಟದ ಪ್ರತಿಯೊಬ್ಬ ಸದಸ್ಯನೂ ತಪ್ಪಿತಸ್ಥನಾಗುವುದು / ಕೃತ್ಯಕ್ಕೆ ಒಳ ಸಂಚು