ಬೆಂಗಳೂರು: ನಟ ದರ್ಶನ್‌ ಜಮಾಯಿಸಿ ಇಟ್ಟುಕೊಂಡಿದ್ದ 40 ಲಕ್ಷ ರೂ. ನಗದನ್ನು ಪೊಲೀಸರು ಜಪ್ತಿ ಮಾಡಿದ್ದು, ಈ ನಡುವೆ ಹಣದ ಬಗ್ಗೆ ಪೊಲೀಸರು ಆದಾಯ ತೆರಿಗೆ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಚಾವಾಗಲು ಹಾಗೂ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಎದುರಿಸಲು ಆರೋಪಿ ದರ್ಶನ್‌ ಹಣವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಎನ್ನಲಾಗಿದೆ. ಸ್ನೇಹಿತ ಮೋಹನ್‌ರಾಜ್‌ ಎಂಬುವವರಿಂದ ಈ ಹಣ ಪಡೆದು ದರ್ಶನ್‌, ಐಡಿಯಲ್‌ ಹೋಮ್ಸ್‌ನ ಮನೆಯಲ್ಲಿ ಇಟ್ಟುಕೊಂಡಿದ್ದ ಎನ್ನಲಾಗಿದ್ದು, ಈ ನಡುವೆ ತನಿಖಾಧಿಕಾರಿಗಳು ಜೂ.19ರಂದು ದಾಳಿ ನಡೆಸಿ 37.40. ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.

Share.
Exit mobile version