ಬೆಂಗಳೂರು: ನಟ ದುನಿಯಾ ವಿಜಯ್ ಅವರು ವಿಚ್ಛೇಧನ ಕೋರಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯವು ವಜಾಗೊಳಿಸಿದೆ.
ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಾಲಯಕ್ಕೆ ನಟ ದುನಿಯಾ ವಿಜಯ್ ವಿಚ್ಛೇಧನ ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಕೌಟುಂಬಿಕ ನ್ಯಾಯಾಲಯವು, ಅರ್ಜಿಯನ್ನು ವಜಾಗೊಳಿಸಿರೋದಾಗಿ ತಿಳಿದು ಬಂದಿದೆ.
ಅಂದಹಾಗೇ ನಟ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ ಪತ್ನಿ ನಾಗರತ್ನರಿಂದ ವಿಚ್ಛೇಧನ ನೀಡುವಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೇ ಆರೋಪ ಸಾಭೀತು ಪಡಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ನಟ ದುನಿಯಾ ವಿಜಯ್ ಸಲ್ಲಿಸಿದ್ದಂತ ವಿಚ್ಛೇಧನ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಸಂಬಂಧ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
ರಾಜ್ಯದಲ್ಲಿ ಇರೋದು ತಾಲಿಬಾನ್ ಸರ್ಕಾರ, ಹಿಂದೂಗಳಿಗೆ ಪೊಲೀಸರಿಂದ ಮಾನಸಿಕ ಕಿರುಕುಳ: ಆರ್.ಅಶೋಕ್