Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಎನ್ಕೌಂಟರ್, ಮೂವರು ಉಗ್ರರ ಹತ್ಯೆ | Terrorist killed

15/05/2025 1:16 PM

ಪಾಕಿಸ್ತಾನದ ಅಣ್ವಸ್ತ್ರಗಳ ಉಸ್ತುವಾರಿಯನ್ನು IAEA ವಹಿಸಿಕೊಳ್ಳಬೇಕು: ರಕ್ಷಣಾ ಸಚಿವ ರಾಜನಾಥ್ ಸಿಂಗ್

15/05/2025 1:09 PM

BIG NEWS : ಹಕ್ಕುಪತ್ರ ವಿತರಣೆಯಲ್ಲಿ ವಿಳಂಬ ಸಲ್ಲದು, ಜೂನ್‍ನಿಂದ ಹಳೇ ಕಂದಾಯ ದಾಖಲೆಗಳು ಅಂಗೈನಲ್ಲಿ.!

15/05/2025 1:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಟಿ ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್: ಬೆಂಕಿ ಇಲ್ಲದೆ ಹೊಗೆ ಆಡುವುದು ಹೇಗೆ?: ಬಿವೈ ವಿಜಯೇಂದ್ರ ಪ್ರಶ್ನೆ
KARNATAKA

ನಟಿ ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್: ಬೆಂಕಿ ಇಲ್ಲದೆ ಹೊಗೆ ಆಡುವುದು ಹೇಗೆ?: ಬಿವೈ ವಿಜಯೇಂದ್ರ ಪ್ರಶ್ನೆ

By kannadanewsnow0911/03/2025 7:58 PM

ಚಿಕ್ಕಮಗಳೂರು: ರಾಜ್ಯವು ಅಭಿವೃದ್ಧಿಯೇ ಕಾಣದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ; ಈ ಸರಕಾರದ ಆಡಳಿತವೈಖರಿಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.

ಬಾಳೆಹೊನ್ನೂರಿನಲ್ಲಿ ಇಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ಸರಕಾರವು ಅಧಿಕಾರ ವಹಿಸಿಕೊಂಡು 20 ತಿಂಗಳಾಗಿದೆ. ರಸ್ತೆಗಳು, ಆಸ್ಪತ್ರೆಗಳು, ಶಾಲಾ ಕೊಠಡಿಗಳನ್ನೂ ಕೊಡದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ ಎಂದು ಆಕ್ಷೇಪಿಸಿದರು.

ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳು ಅನುದಾನ ನೀಡದ ಕಾರಣ ಶಾಸಕರು ಒಂದುರೀತಿ ಅಸಹಾಯಕರಾಗಿದ್ದಾರೆ. ಕ್ಷೇತ್ರಗಳಲ್ಲಿ ಓಡಾಡಲಾಗದ ಸ್ಥಿತಿ ಇದೆ ಎಂಬ ಭಾವನೆಯನ್ನು ಆಡಳಿತ ಪಕ್ಷದ ಶಾಸಕರೂ ತೋಡಿಕೊಂಡಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಬಗೆಗಿನ ಪ್ರಶ್ನೆಗೆ ಉತ್ತರ ನೀಡಿದ ಅವರು, ಬಹಳ ಪ್ರಮುಖ ಪತ್ರಿಕೆಗಳಲ್ಲೂ ಈ ವಿಷಯ ಪ್ರಕಟಗೊಂಡಿದೆ. ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಎಂದು ಹಿರಿಯರು ಹೇಳುತ್ತಾರೆ. ಇಂಥ ಗಂಭೀರ ಪ್ರಕರಣವು ಯಾರದೋ ಬೆಂಬಲ ಇಲ್ಲದೆ ಆಗಲು ಸಾಧ್ಯ ಇಲ್ಲ ಎಂದು ತಿಳಿಸಿದರು.

ಒಬ್ಬ ಹಿರಿಯ ಐಪಿಎಸ್ ಅಧಿಕಾರಿಯ ಮಗಳು ಎಂಬುದು ಒಂದು ಕಡೆಯಾದರೆ, ಸಚಿವರ ಬೆಂಬಲದ ವಿಷಯವೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸತ್ಯಾಂಶ ತನಿಖೆ ನಂತರ ಹೊರಕ್ಕೆ ಬರಲಿದೆ ಎಂದು ಹೇಳಿದರು.

ವಿಜಯೇಂದ್ರ ಬಗ್ಗೆ ಸಾಕಷ್ಟು ನಿರೀಕ್ಷೆ, ಅಪೇಕ್ಷೆ..

ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳು ಎಲ್ಲ ಸಂದರ್ಭದಲ್ಲೂ ಯಡಿಯೂರಪ್ಪ ಅವರ ಪರವಾಗಿ ಧ್ವನಿ ಎತ್ತಿದವರು. ಈ ಪುಣ್ಯಕ್ಷೇತ್ರದ ಕಾರ್ಯಕ್ರಮ ನಿಮಿತ್ತ ಬಂದಿದ್ದೇನೆ ಎಂದ ಅವರು, ಜಗದ್ಗುರುಗಳಿಗೆ ವಿಜಯೇಂದ್ರ ಬಗ್ಗೆ ಸಾಕಷ್ಟು ನಿರೀಕ್ಷೆ, ಅಪೇಕ್ಷೆ ಇದೆ. ವಿಜಯೇಂದ್ರ ಅವರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಬೇಕೆಂಬ ಸಂದೇಶವನ್ನು ಜಗದ್ಗುರುಗಳು ನೀಡಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ಜಗದ್ಗುರುಗಳ ಆಶೀರ್ವಾದ ಪಡೆಯುವುದು ನಮ್ಮ ಸೌಭಾಗ್ಯ. ರಾಜಕಾರಣ ಮಾತನಾಡಿಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಕೇಂದ್ರದ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಎಲ್ಲವೂ ತಾರ್ಕಿಕ ಅಂತ್ಯಕ್ಕೆ ಬರುವ ಸಂದರ್ಭದಲ್ಲಿ ಸಮಾಜದ ಸಭೆಗಳನ್ನು ಮಾಡುವುದು ಸರಿಯಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು. ಇದು ಬೂಟಾಟಿಕೆಯ ಮಾತಲ್ಲ; ನಾನು ರಾಜ್ಯಾಧ್ಯಕ್ಷನಾಗಿರುವ ಈ ಸಂದರ್ಭದಲ್ಲಿ ಈ ರೀತಿಯ ಜಾತಿ ಸಮಾವೇಶ ಮಾಡುವುದು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಲಾಭ ತರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

‘ಕೆಂಪು ಮೆಣಸಿನಕಾಯಿ’ ಬೆಳೆಗಾರರ ಹಿತರಕ್ಷಣೆಗೆ ಧಾವಿಸಿದ ‘ರಾಜ್ಯ ಸರ್ಕಾರ’

BREAKING: ಬೆಂಗಳೂರಲ್ಲಿ ‘ವರುಣನ ಸಿಂಚನ’: ಬೇಸಿಗೆಯ ಬಿಸಿಲಿಗೆ ತತ್ತರಿಸಿದ್ದ ಜನರಿಗೆ ತಂಪೆರೆದ ‘ಮಳೆರಾಯ’ | Rain in Bengaluru

Share. Facebook Twitter LinkedIn WhatsApp Email

Related Posts

BIG NEWS : ಹಕ್ಕುಪತ್ರ ವಿತರಣೆಯಲ್ಲಿ ವಿಳಂಬ ಸಲ್ಲದು, ಜೂನ್‍ನಿಂದ ಹಳೇ ಕಂದಾಯ ದಾಖಲೆಗಳು ಅಂಗೈನಲ್ಲಿ.!

15/05/2025 1:06 PM3 Mins Read

ಉದ್ಯೋಗವಾರ್ತೆ: 9,970 ರೈಲ್ವೆ ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮೇ 19ರವರೆಗೆ ದಿನಾಂಕ ವಿಸ್ತರಣೆ | Railway Recruitment-2025

15/05/2025 12:05 PM3 Mins Read

BIG NEWS: ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ: ಸಚಿವ ದಿನೇಶ್ ಗುಂಡೂರಾವ್

15/05/2025 11:58 AM1 Min Read
Recent News

BREAKING: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಎನ್ಕೌಂಟರ್, ಮೂವರು ಉಗ್ರರ ಹತ್ಯೆ | Terrorist killed

15/05/2025 1:16 PM

ಪಾಕಿಸ್ತಾನದ ಅಣ್ವಸ್ತ್ರಗಳ ಉಸ್ತುವಾರಿಯನ್ನು IAEA ವಹಿಸಿಕೊಳ್ಳಬೇಕು: ರಕ್ಷಣಾ ಸಚಿವ ರಾಜನಾಥ್ ಸಿಂಗ್

15/05/2025 1:09 PM

BIG NEWS : ಹಕ್ಕುಪತ್ರ ವಿತರಣೆಯಲ್ಲಿ ವಿಳಂಬ ಸಲ್ಲದು, ಜೂನ್‍ನಿಂದ ಹಳೇ ಕಂದಾಯ ದಾಖಲೆಗಳು ಅಂಗೈನಲ್ಲಿ.!

15/05/2025 1:06 PM

BIG NEWS : ‘ಪಾಕ್ ಬಾಲ ಮುದುರಿಕೊಂಡು ಕದನ ವಿರಾಮಕ್ಕಾಗಿ ಬೇಡಿಕೊಂಡಿತು’ : ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ‘ಟೆರೊರಿಸ್ತಾನ್’

15/05/2025 12:58 PM
State News
KARNATAKA

BIG NEWS : ಹಕ್ಕುಪತ್ರ ವಿತರಣೆಯಲ್ಲಿ ವಿಳಂಬ ಸಲ್ಲದು, ಜೂನ್‍ನಿಂದ ಹಳೇ ಕಂದಾಯ ದಾಖಲೆಗಳು ಅಂಗೈನಲ್ಲಿ.!

By kannadanewsnow5715/05/2025 1:06 PM KARNATAKA 3 Mins Read

ದಾವಣಗೆರೆ : ದಾಖಲೆಗಳಿಲ್ಲದ ಜನವಸತಿ ಪ್ರದೇಶದಲ್ಲಿ ವಾಸಿಸುವವರಿಗೆ ಗ್ರಾಮಗಳನ್ನು ರಚನೆ ಮಾಡುವ ಮೂಲಕ ಅಲ್ಲಿನ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಕೆಲಸವನ್ನು…

ಉದ್ಯೋಗವಾರ್ತೆ: 9,970 ರೈಲ್ವೆ ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮೇ 19ರವರೆಗೆ ದಿನಾಂಕ ವಿಸ್ತರಣೆ | Railway Recruitment-2025

15/05/2025 12:05 PM

BIG NEWS: ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ: ಸಚಿವ ದಿನೇಶ್ ಗುಂಡೂರಾವ್

15/05/2025 11:58 AM

ಶ್ರೀಹರಿಯ ಈ 10 ಮಂತ್ರ ಪಠಿಸಿದರೆ 24 ಗಂಟೆಯಲ್ಲಿ ಇದರ ಪ್ರಭಾವದಿಂದ ಜೀವನವೇ ಬದಲಾಗುತ್ತೆ

15/05/2025 11:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.