ಮಂಗಳೂರು:ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಪ್ರಮುಖ ಸಭೆ ನಡೆಸಲಿದ್ದಾರೆ. ಆರು ಜಿಲ್ಲೆಯ ಎಸ್ಪಿ,ಎನ್ ಐ ಎ ಅಧಿಕಾರಿಗಳೊಂದಿಗೆ ಎಡಿಜಿಪಿ ಸಭೆ ನಡೆಸಲಿದ್ದು, ಬೆಳ್ಳಾರೆ ಪ್ರವೀಣ್ ಕೊಲೆ ಕೇಸ್ ನಲ್ಲಿ ಮುಖ್ಯ ಆರೋಪಿಗಳ ಬಂಧನ ಆಗಬೇಕಿದೆ.ಆರೋಪಿಗಳ ದಸ್ತಗಿರಿಗೆ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

BIG NEWS: ಯಾವುದೇ ಕಾರಣಕ್ಕೂ ನಿಮ್ಮನ್ನು ಬದಲಾಯಿಸೋದಿಲ್ಲ; ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಅಭಯ.?!

 

ನಗರದಲ್ಲಿ ಮಾತನಾಡಿದ ಅವರು, ಪ್ರಮುಖ ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ಸಭೆ ಮಾಡಲಿದ್ದೇವೆ. ಮಂಗಳೂರಿನ ಕಾನೂನು ಸುವ್ಯವಸ್ಥೆ ಬಗ್ಗೆಯೂ ಸಭೆ ಮಾಡುತ್ತೇವೆ.ಮುಖ್ಯ ಆರೋಪಿಗಳಿಗೆ ಪ್ರತ್ಯಕ್ಷ ಪರೋಕ್ಷವಾಗಿ ಸಹಕಾರ ಮಾಡಿದವರಿಗೂ ಕ್ರಮ ಆಗಲಿದೆ.
ಎನ್ ಐ ಎ ಅಧಿಕಾರಿಗಳ‌ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ
ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಎನ್ ಐ ಎ ಅಧಿಕಾರಿಗಳ ಜೊತೆ ಕರ್ನಾಟಕ ತಂಡ ಈ ಕೆಲಸ ಮಾಡಲಿದೆ. ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಸಂಪೂರ್ಣ ಮಾಹಿತಿ ಇದೆ.

BIG NEWS: ಯಾವುದೇ ಕಾರಣಕ್ಕೂ ನಿಮ್ಮನ್ನು ಬದಲಾಯಿಸೋದಿಲ್ಲ; ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಅಭಯ.?!

 

ಅವರ ಫೋಟೋ,ಮನೆ ವಿಳಾಸ,ತಂದೆ-ತಾಯಿ,ಹೆಂಡತಿ ಮಾಹಿತಿ ಎಲ್ಲವೂ ಲಭ್ಯವಿದೆ. ಪ್ರಮುಖ ಆರೋಪಿಗಳನ್ನು ಬಚ್ಚಿಡುವ ಕೆಲಸ ನಡೆಯುತ್ತಿದೆ.
ಆವಾಗವಾಗ ಅವರ ಸ್ಥಳಬದಲಾವಣೆ ಮಾಡಲಾಗುತ್ತಿದೆ. ಪೊಲೀಸರ ದಾಳಿ ವೇಳೆ ಪ್ರಮುಖ ಆರೋಪಿಗಳು ಪರಾರಿಯಾಗುತ್ತಿದ್ದಾರೆ.
ಆರೋಪಿಗಳಿಗೆ ಪಿಎಫ್ಐ ಲಿಂಕ್ ವಿಚಾರವಾಗಿ ಮಾತನಾಡಿದ ಅವರು,ನಾವು ಯಾವುದೇ ದಾಖಲೆ ಇಲ್ಲದೇ ಮಾತನಾಡೋದಿಲ್ಲ.
ದಾಖಲೆ ಜೊತೆಗೆ ಮಾತನಾಡುತ್ತೇವೆ,ಸುಮ್ಮನೆ ಏನನ್ನೂ ಹೇಳೋದಿಲ್ಲ. ಕೆಲವು ಆರೋಪಿಗಳಿಗೆ ಪಿಎಫ್ ಐ ಲಿಂಕ್ ಇದೆ. ಈ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ.ತನಿಖೆಯ ಬಳಿಕ ಯಾರಿಗೆಲ್ಲಾ ಪಿಎಫ್ಐ ಲಿಂಕ್ ಇದೆ ಎಂಬುವುದರ ಬಗ್ಗೆ ಹೇಳುತ್ತೇವೆ.

BIGG NEWS: ಚೀನಾದಲ್ಲಿ ಹೊಸ ಲ್ಯಾಂಗ್ಯಾ ವೈರಸ್ ಪತ್ತೆ; ಇದು ಎಂದರೇನು? ಇದರ ಲಕ್ಷಣಗಳೇನು? ಇಲ್ಲಿದೆ ವಿವರ

 

ಈಗಾಗಲೇ ಪ್ರಕರಣ ತನಿಖೆಯ ಹಂತದಲ್ಲಿದೆ. ಈ ಸಂಧರ್ಭದಲ್ಲಿ ಪ್ರಕರಣಕ್ಕೆ ಕೇರಳ ಲಿಂಕ್ ಇರುವ ಬಗ್ಗೆ ಹೇಳಲು ಸಾಧ್ಯವಿಲ್ಲ.
ಈಗ ಬಂಧನವಾಗಿರುವ ಏಳು ಮಂದಿಯೂ ಸ್ಥಳೀಯರೇ ಆಗಿದ್ದಾರೆ. ಅವರಿಗೆ ನಿರ್ದೇಶನ ಕೊಟ್ಟಿರೋದು ಯಾರು ಎಂಬುವುದರ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ಮಾಡುತ್ತೇವೆ. ಬೆಳ್ಳಾರೆಯಲ್ಲಿ ಈ ಎಲ್ಲಾ ವಿಚಾರದ ಬಗ್ಗೆ ಸಭೆಯನ್ನು ಮಾಡುತ್ತೇವೆ
ಎನ್ ಐ ಎ ಅಧಿಕಾರಿಗಳು, ಮಂಡ್ಯ,ಚಾಮರಾಜನಗರ ಹಾಸನ,ಚಿಕ್ಕಮಗಳೂರು, ಉಡುಪಿ,ದಕ್ಷಿಣ ಕನ್ನಡ ಎಸ್ಪಿಗಳ ಜೊತೆ ಸಭೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Share.
Exit mobile version