ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪೊಲೀಸರಿಂದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಸಂಬಂಧ ಕೇಸ್ ದಾಖಲಿಸಿದ್ದರು. ಈ ದೂರಿನ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಇಂದು ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಂತ ಮಹಿಳೆಯ ಮೇಲೆಯೇ ವಕೀಲ ದೇವರಾಜೇಗೌಡ ಅವರು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ಇದೀಗ ದೇವರಾಜೇಗೌಡ ಅವರನ್ನು ಹಿರಿಯೂರು ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

BREAKING: ಪ್ರಜ್ವಲ್ ಅಶ್ಲೀಲ ವೀಡಿಯೋ ಕೇಸ್: ವಕೀಲ ದೇವರಾಜೇಗೌಡ ಆಜ್ಞಾತ ಸ್ಥಳದಿಂದ ‘3 ಆಡಿಯೋ ಕ್ಲಿಪ್’ ಬಿಡುಗಡೆ

BREAKING: ಪ್ರಜ್ವಲ್ ಅಶ್ಲೀಲ ವೀಡಿಯೋ ಕೇಸ್: ವಕೀಲ ದೇವರಾಜೇಗೌಡ ಆಜ್ಞಾತ ಸ್ಥಳದಿಂದ ‘3 ಆಡಿಯೋ ಕ್ಲಿಪ್’ ಬಿಡುಗಡೆ

Share.
Exit mobile version