ಬೆಂಗಳೂರು: ಕೊಲೆ ಪ್ರಕರಣದಲ್ಲಿ ಸದ್ಯ ಪೋಲಿಸರ ವಶದಲ್ಲಿರುವ ನಟ ದರ್ಶನ್ ಮೈಸೂರಿನಿಂದ ಬೆಂಗಳೂರಿಗೆ ಕರೆ ತರಲಾಗುತ್ತಿದೆ. ಈ ನಡುವೆ ದರ್ಶನ್ ಗೆಳತಿ ಪವಿತ್ರಗೌಡರಿಗೂ ಕೂಡ ಬಂಧನದ ಭೀತಿ ಎದುರಾಗಿದ್ದು, ಕೊಲೆ ಪ್ರಕರಣದಲ್ಲಿ ಆಕೆಯದ್ದು ಕೂಡ ಪಾರತ್ರವಿದೆ ಎನ್ನಲಾಗಿದೆ.
ಇನ್ಸ್ಟಾಗ್ರಾಮ್ನಲ್ಲಿ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಪವಿತ್ರಗೌಡರಿಗೆ ಅಶ್ಲೀಲವಾದ ಕಾಮೆಂಟ್ ಮತ್ತು ಮೇಸೆಜ್ ಹಾಕುತ್ತಿದ್ದ ಎನ್ನಲಾಗಿದೆ. ಇದರಿಂದ ಸಿಟ್ಟಾಗಿದ್ದ ಪವಿತ್ರ ಗೌಡ ದರ್ಶನ್ ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇನ್ನೂ ಇದಕ್ಕೆ ಸಂಬಂಧಪಟ್ಟಂಥೆ ಆತನನ್ನು ಕರೆ ತಂದು ಹಲ್ಲೆ ಮಾಡಿದ ಬಳಿಕ, ಕೊಲೆ ಮಾಡಿ ಬೆಂಗಳೂರಿನ ಕಾಮಾಕ್ಸಿ ಪಾಳ್ಯದಲ್ಲಿ ಶವನ್ನು ಎಸೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ಹಲ್ಲೆ ಮಾಡಿದ ವೇಳೆಯಲ್ಲಿ ದರ್ಶನ್ ಮತ್ತು ಪವಿತ್ರಗೌಡ ಇದ್ದರು ಎನ್ನಲಾಗಿದೆ. ಸದ್ಯ ದರ್ಶನ್ ರನ್ನು ಅವರ ಫಾರ್ಮ್ ಹೌಸ್ನಲ್ಲಿ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಸದ್ಯ ಅವರನ್ನು ಬೆಂಗಳೂರಿಗೆ ಕರೆ ತಂದಿದ್ದಾರೆ. ಸದ್ಯ ಘಟನೆ ಸಂಬಂಧ ಹತ್ತು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ಇದಲ್ಲದೇ ಪವಿತ್ರಗೌಡ ಕೂಡರನ್ನು ಕೂಡ ವಶಕ್ಕೆ ಪಡೆದುಕೊಳ್ಳಬಹುದು ಎನ್ನಲಾಗಿದೆ.