ಚಿತ್ರದುರ್ಗ: ಕರ್ನಾಟಕದಲ್ಲಿ ಡಿಸೆಂಬರ್ ನಂತ್ರ ಯಾವುದೇ ಸಂದರ್ಭದಲ್ಲೂ ಮಧ್ಯಂತರ ಚುನಾವಣೆ ಬರಲಿದೆ. ಕರ್ನಾಟಕದಲ್ಲಿ ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚಿಸಲಿದೆ ಎಂಬುದಾಗಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಅವರು ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಾದರೂ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಬರಬಹುದು ಎಂಬುದಾಗಿ ಭವಿಷ್ಯ ನುಡಿದರು.
2028ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆ ಬರುತ್ತದೆ ಎಂಬುದಾಗಿ ನಾನು ಹೇಳೋದಿಲ್ಲ. ಆದರೇ ಡಿಸೆಂಬರ್ ವೇಳೆಗೆ ಯಾವುದೇ ಸಂದರ್ಭದಲ್ಲಿಯಾದರೂ ಚುನಾವಣೆ ಬರಬಹುದು. ಬಿಜೆಪಿಯು 150 ಶಾಸಕರೊಂದಿಗೆ ಸರ್ಕಾರ ರಚಿಸುವ ಭರವಸೆ ಇದೆ ಎಂದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಒಂದೇ ಒಂದು ಅಭಿವೃದ್ಧಿ ಕೆಲಸವನ್ನೇ ಮಾಡಿಲ್ಲ. ಜನರು ಸಿಎಂ, ಡಿಸಿಎಂ, ಉಸ್ತುವಾರಿ ಸಚಿವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂಬುದಾಗಿ ತಿಳಿಸಿದರು.
ಮತ್ತೊಂದೆಡೆ ಬಿಜೆಪಿಯ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಕೂಡ ಕೆಲವೇ ದಿನಗಳಲ್ಲಿ ಈ ಸರ್ಕಾರ ಪತನವಾಗುತ್ತದೆ. 2026ರಲ್ಲೇ ವಿಧಾನಸಭಾ ಚುನಾವಣೆ ನಡೆಯುತ್ತದೆ ಎಂಬುದಾಗಿಯೂ ಭವಿಷ್ಯ ನುಡಿದಿದ್ದಾರೆ.
ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸೆಪ್ಟೆಂಬರ್ನಲ್ಲಿ ಸಿಎಂ ಕುರ್ಚಿ ಬದಲಾಗಲಿದೆ. ಕ್ರಾಂತಿ ನಡೆಯಲಿದೆ ಎಂದು ಸಚಿವರೇ ಹೇಳುತ್ತಿದ್ದು, ಇಡೀ ಕಾಂಗ್ರೆಸ್ ಒಡೆದ ಮನೆಯಾಗಿದೆ. ಈ ಬಾರಿಯ ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ ಎಂಬುದಾಗಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ರೈತರ ಆದಾಯ ಹೆಚ್ಚಳಕ್ಕೆ ಪಶುಪಾಲನಾ ಇಲಾಖೆಯಿಂದ ಈ ಎಲ್ಲವೂ ‘ಉಚಿತ ತರಬೇತಿ’: ಈಗಲೇ ಅರ್ಜಿ ಹಾಕಿ
BREAKING : ಬೆಂಗಳೂರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ‘PSI’ ಚಿಕಿತ್ಸೆ ಫಲಿಸದೇ ಸಾವು!