ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿರುವ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಕರ್ನಾಟಕ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮತ್ತೊಬ್ಬ ಸಂಸದ ಶಶಿ ತರೂರು ವಿರುದ್ದ ನೇರ ಹಣಾಹಣಿ ಏರ್ಪಟ್ಟಿದೆ.
ದೇಶಾದ್ಯಂತ ಸುಮಾರು 9 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಕರ್ನಾಟಕದವರೇ ಆದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ಸಂಸದ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸೇರಿದಂತೆ ಗಾಂಧಿ ಕುಟುಂಬದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂಬ ನಿರ್ಧಾರದ ಬಳಿಕ ಚುನಾವಣೆ ಸ್ವರೂಪವೇ ಬದಲಾಗಿದೆ.
ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸ್ಪರ್ಧೆಯಿಂದ ಹಿಂದೆ ಸರಿದ ಕಾರಣ ಈ ಇಬ್ಬರು ನಾಯಕರ ನಡುವೆ ತೀವ್ರ ಪೈಪೋಟಿ ಕಂಡು ಬಂದಿದೆ.ಸರಿಸುಮಾರು 9000 ಕ್ಕೂ ಅಧಿಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳು ಮತ ಚಲಾವಣೆ ಮಾಡುವ ಅರ್ಹತೆ ಪಡೆದುಕೊಂಡಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಮತದಾನ ನಡೆಯಲಿದೆ. ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರು ಅವರು ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಮನ ಗೆಲ್ಲುವ ಕಸರತ್ತು ನಡೆಸಿದ್ದಾರೆ.
ಬಿಹಾರದಲ್ಲಿ ದೋಣಿ ಮುಳುಗಿ ಏಳು ಮಂದಿ ದುರ್ಮರಣ ; ಮೃತರ ಕುಟುಂಬಕ್ಕೆ 4 ಲಕ್ಷ ಪರಿಹಾರ ಘೋಷಣೆ
ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ ; ‘ಸ್ಟೇಟಸ್ ಅಪ್ಡೇಟ್ ರಿಯಾಕ್ಷನ್’ ಫೀಚರ್ ಬಿಡುಗಡೆ