Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಲ್ಲಿ ಜಾತಿಸಮೀಕ್ಷೆ, ಹೀಗಿದೆ ಜಾತಿ-ಉಪಜಾತಿಗಳ ಪಟ್ಟಿ

17/09/2025 1:48 PM

ಭಾರತದಲ್ಲಿ ತಯಾರಿಸಿದ ವಸ್ತುಗಳನ್ನು ಮಾತ್ರ ಖರೀದಿಸಿ: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

17/09/2025 1:42 PM

‘ಮಾ ವಂದೇ’: ಉನ್ನಿ ಮುಕುಂದನ್ ನಾಯಕತ್ವದಲ್ಲಿ ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರ ಘೋಷಣೆ

17/09/2025 1:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » AICC ಕಾಲ್ತುಳಿತ ದುರಂತದಲ್ಲಿ ತಲೆದಂಡದ ಬದಲು ಜಾತಿಗಣತಿ ಅಡ್ಡ ಇರಿಸಿದೆ: ಛಲವಾದಿ ನಾರಾಯಣಸ್ವಾಮಿ
KARNATAKA

AICC ಕಾಲ್ತುಳಿತ ದುರಂತದಲ್ಲಿ ತಲೆದಂಡದ ಬದಲು ಜಾತಿಗಣತಿ ಅಡ್ಡ ಇರಿಸಿದೆ: ಛಲವಾದಿ ನಾರಾಯಣಸ್ವಾಮಿ

By kannadanewsnow0911/06/2025 5:25 PM

ಬೆಂಗಳೂರು: ಆರ್‍ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಮತ್ತು 11 ಸಾವಿಗೆ ಸಂಬಂಧಿಸಿ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯಿಂದ (ಎಐಸಿಸಿ) ಸಿಎಂ, ಡಿಸಿಎಂ ತಲೆದಂಡದ ನಿರೀಕ್ಷೆಯಲ್ಲಿದ್ದೆವು. ಅದರ ಬದಲಾಗಿ ಜಾತಿಗಣತಿಯನ್ನು ಅಡ್ಡ ಇಟ್ಟು ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷ ಪ್ರಯತ್ನಿಸುತ್ತಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ.

ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರವು ಆರ್.ಸಿ.ಬಿ ಗೆಲುವಿನ ಪ್ರಯೋಜನ ಪಡೆಯಲು ಪಂದ್ಯಾಟವನ್ನು ಗೆಲ್ಲುವ ಮೊದಲೇ ಸಂಭ್ರಮಾಚರಣೆಗೆ ಅನುಮತಿ ಪಡೆದಿತ್ತು. ಬಳಿಕ ಸಂಭ್ರಮ ಆಚರಿಸಲು ಹೋಗಿ 11 ಜನರ ಸಾವಿಗೆ ಕಾರಣವಾದ ಘಟನೆ ಇಡೀ ದೇಶದಲ್ಲಿ ಸುದ್ದಿಯಾಗಿದೆ ಎಂದು ಗಮನ ಸೆಳೆದರು.

ನೂರಾರು ಜನರು ಗಾಯಗೊಂಡ ಈ ದುರ್ಘಟನೆಯ ಬಗ್ಗೆ ವಿರೋಧ ಪಕ್ಷ ಬಿಜೆಪಿ, ದುರಂತವನ್ನು ಎಳೆ ಎಳೆಯಾಗಿ ಬಿಡಿಸಿ ಖಂಡಿಸಿದೆ. ಈ ಹಿನ್ನೆಲೆಯಲ್ಲಿ ಎಐಸಿಸಿಯವರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆಸಿಕೊಂಡಿದ್ದರು. ಇವರು ಮಾಡಿದ ಅಪರಾಧಕ್ಕೆ ಇವರಿಬ್ಬರ ತಲೆದಂಡವಾಗುತ್ತದೆ ಅಂದುಕೊಂಡಿದ್ದೆವು ಎಂದ ಅವರು, ಬಿಜೆಪಿ ಯಾವುದೇ ಕಾರಣಕ್ಕೂ ಇವರ ವಿರುದ್ಧ ಹೋರಾಟ ನಿಲ್ಲಿಸುವುದಿಲ್ಲ, ಇವರಿಬ್ಬರೂ ಘಟನೆಯ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸುವವರೆಗೂ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಇಂದು ಜಾರಿ ನಿರ್ದೇಶನಾಲಯದ (ಇ.ಡಿ.) ದಾಳಿ ಆಗಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಣವನ್ನು ಕದ್ದು ತಿಂದಿದ್ದರು. ಶಾಸನ ಸಭೆಯಲ್ಲಿ ಮುಖ್ಯಮಂತ್ರಿಗಳು ಕೇವಲ 87 ಕೋಟಿ ಎಂದು ಒಪ್ಪಿಕೊಂಡಿದ್ದರು. ಭ್ರಷ್ಟಾಚಾರವನ್ನು ಒಪ್ಪಿಕೊಂಡ ನಂತರವೂ ಅಧಿಕಾರದಲ್ಲಿ ಮುಂದುವರೆದಿರುವುದು ನಾಚಿಕೆಗೇಡಿನ ಸಂಗತಿ ಎಂದು ಖಂಡಿಸಿದರು.
ಇ.ಡಿ ರೇಡ್ ಆಗಿರುವ ಜನನಾಯಕರು ಯಾರ್ಯಾರು ಎಷ್ಚು ಬಳಸಿದ್ದಾರೆ ಎಂಬ ವಿವರ ಸಿಕ್ಕಿದೆ, ಈ ಪ್ರಕರಣದಲ್ಲಿ ಅಧಿಕಾರಿ ಚಂದ್ರಶೇಖರ್ ಮರಣ ಹೊಂದಿದ್ದು ಇವರ ಸಾವಿನ ಬಗ್ಗೆ ಸರ್ಕಾರ ಒಂದು ದಿನವೂ ಪ್ರಸ್ತಾಪ ಮಾಡಿಲ್ಲ. ಯಾರ್ಯಾರು ಅಪರಾಧದಲ್ಲಿ ಪಾಲ್ಗೊಂಡಿದ್ದಾರೋ ಅವರೆಲ್ಲರ ಸದಸ್ಯತ್ವವು ರದ್ದಾಗುತ್ತದೆ ಎಂದರು.
ನಿನ್ನೆ ಇ.ಡಿ. ಪತ್ರ ಬಿಡುಗಡೆ ಮಾಡಿದ್ದು ಮೂಡಾದಲ್ಲಿ 400 ಕೋಟಿ ರೂಗಳ ಆಸ್ತಿಯನ್ನು ವಶಪಡಿಸಿಕೊಂಡಿರುವ ಬಗ್ಗೆ ಪತ್ರ ಬಿಡುಗಡೆ ಮಾಡಿದೆ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರವನ್ನು ದೂರುತ್ತಿದ್ದು ಜನರ ಗಮನ ಬೇರೆಡೆಗೆ ಸೆಳೆಯಲು ಪ್ರಯತ್ನ ಮಾಡಬಾರದು. ಬಿಜೆಪಿ, ಈ ಕಾಲ್ತುಳಿತದ ಪ್ರಕರಣವನ್ನು ಬಿಡುವ ಪ್ರಶ್ನೆಯೇ ಇಲ್ಲ, ಸರ್ಕಾರವು ತಮ್ಮ ಭ್ರಷ್ಟಾಚಾರವನ್ನು ಮತ್ತು ಕಾಲ್ತುಳಿತದ ಪ್ರಕರಣವನ್ನು ಒಪ್ಪಿಕೊಂಡು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರವು ದಿನಕ್ಕೊಂದು ಹಗರಣವಲ್ಲ; ಒಂದೇ ದಿನಕ್ಕೆ ಮೂರು ಹಗರಣಗಳನ್ನು ಮಾಡುತ್ತಿದೆ. ಸರ್ಕಾರದಲ್ಲಿರುವವರು ಮುಖಭಂಗ, ಅವಮಾನವನ್ನೆಲ್ಲ ಗಾಳಿಗೆ ತೂರಿ, ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ಸರ್ಕಾರ ಎಲ್ಲ ಥರದ ತಪ್ಪುಗಳನ್ನು ಮಾಡಿ, ನಾಚಿಕೆ, ಮಾನ-ಮರ್ಯಾದೆ ಬಿಟ್ಟು ಏನೂ ಆಗಿಲ್ಲವೆಂದು ವರ್ತಿಸುತ್ತಿದೆ. ಇವರು ತಪ್ಪು ಮಾಡಿದ್ದಕ್ಕೆ ತಾನೇ ಇ.ಡಿ. ಮತ್ತು ಸಿ.ಬಿ.ಐ ತನಿಖೆ ಮಾಡಲು ಬರುವುದು? ಇವರು ತಪ್ಪು ಮಾಡಿಲ್ಲವೆಂದರೆ ತನಿಖಾ ಸಂಸ್ಥೆಗಳು ಏಕೆ ಬರುತ್ತವೆ? ಎಂದು ಪ್ರಶ್ನಿಸಿದರು.

BREAKING: ‘ಜಿಲ್ಲಾ ಆರೋಗ್ಯ ಮಂಡಳಿ’ಯ ಪ್ರಮಾಣ ಪತ್ರ ಪರಿಶೀಲನೆಗೆ ‘ರಾಜ್ಯ ಆರೋಗ್ಯ ಮಂಡಳಿ’ ರಚಿಸಿ ಸರ್ಕಾರ ಆದೇಶ

BIG NEWS : ಪ್ರಧಾನಿ ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ : CM ಸಿದ್ದರಾಮಯ್ಯ ವಾಗ್ದಾಳಿ

Share. Facebook Twitter LinkedIn WhatsApp Email

Related Posts

ಗಮನಿಸಿ: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಲ್ಲಿ ಜಾತಿಸಮೀಕ್ಷೆ, ಹೀಗಿದೆ ಜಾತಿ-ಉಪಜಾತಿಗಳ ಪಟ್ಟಿ

17/09/2025 1:48 PM2 Mins Read

`BPL ರೇಷನ್ ಕಾರ್ಡ್’ ರದ್ದು ಮಾಡಲ್ಲ : ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ

17/09/2025 1:06 PM1 Min Read

‘ಕಾಂಗ್ರೆಸ್ ಮಾತ್ರ ಭಾರತವನ್ನು ಒಗ್ಗಟ್ಟಾಗಿ ಹಿಡಿದಿಟ್ಟುಕೊಳ್ಳಬಲ್ಲದು ಎಂಬ ಮಿಥ್ಯೆಯನ್ನು ಮೋದಿ ಒಡೆದು ಹಾಕಿದ್ದಾರೆ’: ದೇವೇಗೌಡ

17/09/2025 1:05 PM1 Min Read
Recent News

ಗಮನಿಸಿ: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಲ್ಲಿ ಜಾತಿಸಮೀಕ್ಷೆ, ಹೀಗಿದೆ ಜಾತಿ-ಉಪಜಾತಿಗಳ ಪಟ್ಟಿ

17/09/2025 1:48 PM

ಭಾರತದಲ್ಲಿ ತಯಾರಿಸಿದ ವಸ್ತುಗಳನ್ನು ಮಾತ್ರ ಖರೀದಿಸಿ: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

17/09/2025 1:42 PM

‘ಮಾ ವಂದೇ’: ಉನ್ನಿ ಮುಕುಂದನ್ ನಾಯಕತ್ವದಲ್ಲಿ ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರ ಘೋಷಣೆ

17/09/2025 1:31 PM

BREAKING : ಆಂಧಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ : ಕಾರಿಗೆ ಟಿಪ್ಪರ್ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವು

17/09/2025 1:19 PM
State News
KARNATAKA

ಗಮನಿಸಿ: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಲ್ಲಿ ಜಾತಿಸಮೀಕ್ಷೆ, ಹೀಗಿದೆ ಜಾತಿ-ಉಪಜಾತಿಗಳ ಪಟ್ಟಿ

By kannadanewsnow0717/09/2025 1:48 PM KARNATAKA 2 Mins Read

* ಅವಿನಾಶ್‌ ಆರ್‌ ಭೀಮಸಂದ್ರ ಜೊತೆಗೆ ವಸಂತ್ ಬಿ ಈಶ್ವರಗೆರೆ ಕಲಬುರಗಿ: ರಾಜ್ಯದಲ್ಲಿ ಬೆಳೆಹಾನಿಯಾಗಿರುವುದಕ್ಕೆ ಪರಿಹಾರ ನೀಡಲು ಅನುಕೂಲವಾಗುವಂತೆ ಕಂದಾಯ…

`BPL ರೇಷನ್ ಕಾರ್ಡ್’ ರದ್ದು ಮಾಡಲ್ಲ : ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ

17/09/2025 1:06 PM

‘ಕಾಂಗ್ರೆಸ್ ಮಾತ್ರ ಭಾರತವನ್ನು ಒಗ್ಗಟ್ಟಾಗಿ ಹಿಡಿದಿಟ್ಟುಕೊಳ್ಳಬಲ್ಲದು ಎಂಬ ಮಿಥ್ಯೆಯನ್ನು ಮೋದಿ ಒಡೆದು ಹಾಕಿದ್ದಾರೆ’: ದೇವೇಗೌಡ

17/09/2025 1:05 PM
You should never make these mistakes when placing a photo of a deceased person at home and giving alms..!

ಮನೆಯಲ್ಲಿ ಮೃತ ವ್ಯಕ್ತಿಯ ಫೋಟೋ ಇಟ್ಟು ಏಡೆ ನೀಡುವಾಗ ನೀವು ಈ ತಪ್ಪುಗಳನ್ನು ಮಾಡಬೇಡಲೇ ಬಾರದು..!

17/09/2025 1:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.