ಜೈಪುರ: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಶಿರಚ್ಛೇದ ಮಾಡಿ ತಂದರೆ ಅವರಿಗೆ ತನ್ನ ಮನೆಯನ್ನು ಉಡುಗೊರೆಯಾಗಿ ನೀಡುವುದಾಗಿ ಆಫರ್ ನೀಡಿದ ಆರೋಪದ ಮೇಲೆ ರಾಜಸ್ಥಾನದ ಅಜ್ಮೀರ್ ದರ್ಗಾದ ಧರ್ಮಗುರು ಮೌಲ್ವಿ ಸಲ್ಮಾನ್ ಚಿಸ್ತಿ ಅವರನ್ನು ಬಂಧಿಸಲಾಗಿದೆ.
ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರ ಶಿರಚ್ಛೇದ ಮಾಡಿ ತಂದರೆ ಅವರಿಗೆ ತನ್ನ ಮನೆಯನ್ನು ಉಡುಗೊರೆಯಾಗಿ ನೀಡುವುದಾಗಿ ಹೇಳಿಕೆ ನೀಡಿದ್ದ ವಿಡಿಯೋವನ್ನು ಧರ್ಮಗುರು ಮೌಲ್ವಿ ಸಲ್ಮಾನ್ ಚಿಸ್ತಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.
Rajasthan | Ajmer Police arrested Salman Chishti, Khadim of Ajmer Dargah last night for allegedly giving a provocative statement against suspended BJP leader Nupur Sharma: Additional Superintendent of Police, Vikas Sangwan pic.twitter.com/6U3WCjVar7
— ANI MP/CG/Rajasthan (@ANI_MP_CG_RJ) July 6, 2022
ಅಷ್ಟೇ ಅಲ್ಲದೇ, ಈ ವಿಡಿಯೋದಲ್ಲಿ ʻಪ್ರವಾದಿಯನ್ನು ಅವಹೇಳನ ಮಾಡಿದ್ದಕ್ಕಾಗಿ ಆಕೆಯನ್ನು ಗುಂಡಿಟ್ಟು ಸಾಯಿಸುತ್ತೇನೆʼ ಎಂದಿದ್ದಾನೆ.
ಈ ವಿಡಿಯೋಗೆ ಸಂಬಂಧಿಸಿದಂತೆ ಧರ್ಮಗುರು ಮೌಲ್ವಿ ಸಲ್ಮಾನ್ ಚಿಸ್ತಿ ವಿರುದ್ಧ ದೂರು ದಾಖಲಾಗಿದ್ದು, ರಾಜಸ್ಥಾನ ಪೊಲೀಸರು ಸೋಮವಾರ ಎಫ್ಐಆರ್ ದಾಖಲಿಸಿದ್ದರು. ಇದೀಗ ಮೌಲ್ವಿಯನ್ನು ಬಂಧಿಸಲಾಗಿದೆ.
BIGG NEWS : ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ 3,500 ಅತಿಥಿ ಉಪನ್ಯಾಸಕರ ನೇಮಕ
Breaking news: ಅಂಡಮಾನ್ & ನಿಕೋಬಾರ್ ದ್ವೀಪಗಳಲ್ಲಿ ಮತ್ತೆ ಕಂಪಿಸಿದ ಭೂಮಿ: 4.6 ತೀವ್ರತೆ ದಾಖಲು