ಜೈಪುರ: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಶಿರಚ್ಛೇದ ಮಾಡಿ ತಂದರೆ ಅವರಿಗೆ ತನ್ನ ಮನೆಯನ್ನು ಉಡುಗೊರೆಯಾಗಿ ನೀಡುವುದಾಗಿ ಆಫರ್ ನೀಡಿದ ಆರೋಪದ ಮೇಲೆ ರಾಜಸ್ಥಾನದ ಅಜ್ಮೀರ್ ದರ್ಗಾದ ಧರ್ಮಗುರು ಮೌಲ್ವಿ ಸಲ್ಮಾನ್‌ ಚಿಸ್ತಿ ಅವರನ್ನು ಬಂಧಿಸಲಾಗಿದೆ.

ಪ್ರವಾದಿ ಮೊಹಮ್ಮದ್‌ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರ ಶಿರಚ್ಛೇದ ಮಾಡಿ ತಂದರೆ ಅವರಿಗೆ ತನ್ನ ಮನೆಯನ್ನು ಉಡುಗೊರೆಯಾಗಿ ನೀಡುವುದಾಗಿ ಹೇಳಿಕೆ ನೀಡಿದ್ದ ವಿಡಿಯೋವನ್ನು ಧರ್ಮಗುರು ಮೌಲ್ವಿ ಸಲ್ಮಾನ್‌ ಚಿಸ್ತಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದರು.

ಅಷ್ಟೇ ಅಲ್ಲದೇ, ಈ ವಿಡಿಯೋದಲ್ಲಿ ʻಪ್ರವಾದಿಯನ್ನು ಅವಹೇಳನ ಮಾಡಿದ್ದಕ್ಕಾಗಿ ಆಕೆಯನ್ನು ಗುಂಡಿಟ್ಟು ಸಾಯಿಸುತ್ತೇನೆʼ ಎಂದಿದ್ದಾನೆ.

ಈ ವಿಡಿಯೋಗೆ ಸಂಬಂಧಿಸಿದಂತೆ ಧರ್ಮಗುರು ಮೌಲ್ವಿ ಸಲ್ಮಾನ್‌ ಚಿಸ್ತಿ ವಿರುದ್ಧ ದೂರು ದಾಖಲಾಗಿದ್ದು, ರಾಜಸ್ಥಾನ ಪೊಲೀಸರು ಸೋಮವಾರ ಎಫ್‌ಐಆರ್ ದಾಖಲಿಸಿದ್ದರು. ಇದೀಗ ಮೌಲ್ವಿಯನ್ನು ಬಂಧಿಸಲಾಗಿದೆ.

Big news:‌ ಬ್ರಿಟನ್ ಸಚಿವ ಸ್ಥಾನಕ್ಕೆ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ʻರಿಷಿ ಸುನಕ್ʼ ರಾಜೀನಾಮೆ

BIGG NEWS : ದಾವಣಗೆರೆಯಲ್ಲಿ ಆಗಸ್ಟ್ 3 ರಂದು `ಸಿದ್ದರಾಮೋತ್ಸವ’ ಕಾರ್ಯಕ್ರಮ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಾಗಿ

Share.
Exit mobile version