Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶದ ನಂತ್ರ 1.53 ಲಕ್ಷ ಕೋಟಿ ಹೊಸ ಹೂಡಿಕೆ ಆಕರ್ಷಣೆ: ಸಚಿವ ಎಂ ಬಿ ಪಾಟೀಲ

17/01/2026 7:51 PM

ಮದ್ದೂರು ನ್ಯಾಯಾಲಯ ಸಂಕೀರ್ಣದ ಸ್ಥಳ ಪರಿಶೀಲನೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್

17/01/2026 7:48 PM

2 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಮದ್ದೂರು ಶಾಸಕ ಕೆ.ಎಂ.ಉದಯ್

17/01/2026 7:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : `ಮಧುಮೇಹ’ದಿಂದ ಹೃದಯಾಘಾತ, ಪಾರ್ಶ್ವವಾಯು ಸೇರಿ ಈ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!
KARNATAKA

ALERT : `ಮಧುಮೇಹ’ದಿಂದ ಹೃದಯಾಘಾತ, ಪಾರ್ಶ್ವವಾಯು ಸೇರಿ ಈ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!

By kannadanewsnow5715/11/2025 10:24 AM
Want to reduce your risk of diabetes and heart disease

ಮಧುಮೇಹವು ಸಾಂಕ್ರಾಮಿಕವಲ್ಲದ ಅತ್ಯಂತ ಅಪಾಯಕಾರಿ ಕಾಯಿಲೆಯಾಗಿದ್ದು, ಇದನ್ನು ನಿಯಂತ್ರಿಸಿಕೊಳ್ಳುವಲ್ಲಿ ನಿಯಮಿತ ತಪಾಸಣೆ ಮತ್ತು ಕಾಳಜಿಯ ಅಗತ್ಯವಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ನಾಗರಾಜನಾಯ್ಕ್ಅವರು ಹೇಳಿದರು.

ಅವರು ಇಂದು ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಪಂಚಾಯಿತಿ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಉಚಿತ ಮಧುಮೇಹ ತಪಾಸಣೆ ಮತ್ತು ಸಲಹಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

ಇನ್ಸುಲಿನ್ ಸಂಶೋಧಕ ಫ್ರೆಡೆರಿಕ್ ಬ್ಯಾಂಟಿಂಗ್ ಅವರ ಜನ್ಮದಿನದ ನೆನಪಿಗಾಗಿ ವಿಶ್ವ ಮಧುಮೇಹ ದಿನಾಚರಣೆ ಆಚರಿಸಲಾಗುತ್ತಿದೆ. ಈ ದಿನ ಸಾರ್ವಜನಿಕರಲ್ಲಿ ಮಧುಮೇಹದ ಬಗ್ಗೆ ಜಾಗೃತಿ ಮೂಡಿಸುವುದು, ಅದರ ಪರಿಣಾಮಗಳನ್ನು ತಿಳಿಸುವುದು ಮತ್ತು ತಡೆಗಟ್ಟುವಿಕೆ ಹಾಗೂ ನಿರ್ವಹಣೆಯ ಕುರಿತು ಮಾಹಿತಿಯನ್ನು ಒದಗಿಸುವುದು ಇದರ ಮುಖ್ಯ ಉದ್ದೇಶಗಳಲ್ಲೊಂದಾಗಿದೆ ಎಂದ ಅವರು, ಮಧುಮೇಹ ಹೊಂದಿರುವ ಅನೇಕ ಜನರಿಗೆ ತಮ್ಮ ಸ್ಥಿತಿಯ ಬಗ್ಗೆ ತಿಳಿದಿರುವುದಿಲ್ಲ, ಇದು ತೀವ್ರ ತೊಡಕುಗಳಿಗೆ ಕಾರಣವಾಗುತ್ತದೆ. ಆರಂಭಿಕ ಪತ್ತೆ ಮತ್ತು ನಿಯಮಿತ ಪರೀಕ್ಷೆಯ ಮೂಲಕ ನಿಯಂತ್ರಿಸಬಹುದಾಗಿದೆ ಎಂದವರು ತಿಳಿಸಿದರು.

ಮಧುಮೇಹ ಹೊಂದಿರುವ 50% ಕ್ಕಿಂತ ಹೆಚ್ಚು ಜನರಿಗೆ ತಮ್ಮ ಆರೋಗ್ಯದ ವಾಸ್ತವ ಸ್ಥಿತಿಯ ಬಗ್ಗೆ ತಿಳಿಯದಾಗಿದೆ. ಕುರುಡುತನ, ಮೂತ್ರಪಿಂಡ ವೈಫಲ್ಯ, ಹೃದಯಾಘಾತ, ಪಾರ್ಶ್ವವಾಯು ಮುಂತಾದ ಕಾಯಿಲೆಗಳಿಗೆ ಕಾರಣವಾಗಬಹುದಾದ ಮಧುಮೇಹಕ್ಕೆ ಜಾಗತಿಕವಾಗಿ ಸುಮಾರು 808 ಮಿಲಿಯನ್ ಜನರು ಬಳಲುತ್ತಿದ್ದಾರೆ ಅಲ್ಲದೆ ಪ್ರತಿ ವರ್ಷ ಎರಡು ಮಿಲಿಯನ್ ಜನರು ಮಧುಮೇಹದಿಂದ ಮರಣ ಹೊಂದುತ್ತಿದ್ದಾರೆ. ಏಷ್ಯಾದಲ್ಲಿ 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 246 ಮಿಲಿಯನ್ಗಿಂತಲೂ ಹೆಚ್ಚು ವಯಸ್ಕರು ಮಧುಮೇಹದಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಎಂದರು.

ಮಧುಮೇಹವು ಮಾನವ ದೇಹವನ್ನು ಕಡಿಮೆ ಸಮಯದಲ್ಲಿ ಹೆಚ್ಚು ದುರ್ಬಲಗೊಳಿಸುವ ಮತ್ತು ರೋಗಗಳಿಗೆ ಗುರಿಯಾಗಿಸುವ ಸೂಕ್ಷ್ಮ ಕಾಯಿಲೆಗಳಲ್ಲಿ ಒಂದಾಗಿದೆ. ಮಾನವ ದೇಹವನ್ನು ರೋಗಗಳಿಗೆ ಹೇಗೆ ಹೆಚ್ಚು ಒಳಗಾಗುವಂತೆ ಮಾಡುತ್ತದೆ ಅಲ್ಲದೇ ದೀರ್ಘಕಾಲದ ಅಥವಾ ತೀವ್ರವಾದ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚು ಎಂದರು.

ರಾಜ್ಯದಲ್ಲಿ 12-16% ಜನರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ 15.8% ಜನರು ಮಧುಮೇಹ ಹೊಂದಿರುವ ಬಗ್ಗೆ ಎನ್.ಎಫ್.ಹೆಚ್.ಎಸ್-5ನಿಂದ ವರದಿಯಾಗಿದೆ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಕ್ತ ತಪಾಸಣೆ ನಡೆಸಿದ 4,59,138 ಜನರ ಪೈಕಿ 64980ಜನರಿಗೆ ಮಧುಮೇಹ ಮತ್ತು 114327ಜನರಿಗೆ ರಕ್ತದೊತ್ತಡ ಇರುವುದನ್ನು ಗುರುತಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಡಾ|| ಸಂಗೀತಾ, ಡಾ|| ಅಫೀಫಾ, ಶಂಕರ್, ಬಸವರಾಜ್ಸೇರಿದಂತೆ ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಪಂಚಾಯಿತಿಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನೌಕರರು ಹಾಗೂ ಸಾರ್ವಜನಿಕರಿಗೆ ಉಚಿತ ಮಧುಮೇಹ ತಪಾಸಣೆ ನಡೆಸಿ, ವೈದ್ಯಕೀಯ ಸಲಹೆ ನೀಡಲಾಯಿತು.

ALERT: Diabetes can cause these serious problems including heart attacks!
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶದ ನಂತ್ರ 1.53 ಲಕ್ಷ ಕೋಟಿ ಹೊಸ ಹೂಡಿಕೆ ಆಕರ್ಷಣೆ: ಸಚಿವ ಎಂ ಬಿ ಪಾಟೀಲ

17/01/2026 7:51 PM2 Mins Read

ಮದ್ದೂರು ನ್ಯಾಯಾಲಯ ಸಂಕೀರ್ಣದ ಸ್ಥಳ ಪರಿಶೀಲನೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್

17/01/2026 7:48 PM2 Mins Read

2 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಮದ್ದೂರು ಶಾಸಕ ಕೆ.ಎಂ.ಉದಯ್

17/01/2026 7:46 PM2 Mins Read
Recent News

ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶದ ನಂತ್ರ 1.53 ಲಕ್ಷ ಕೋಟಿ ಹೊಸ ಹೂಡಿಕೆ ಆಕರ್ಷಣೆ: ಸಚಿವ ಎಂ ಬಿ ಪಾಟೀಲ

17/01/2026 7:51 PM

ಮದ್ದೂರು ನ್ಯಾಯಾಲಯ ಸಂಕೀರ್ಣದ ಸ್ಥಳ ಪರಿಶೀಲನೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್

17/01/2026 7:48 PM

2 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಮದ್ದೂರು ಶಾಸಕ ಕೆ.ಎಂ.ಉದಯ್

17/01/2026 7:46 PM

BREAKING : ‘RCB’ ಅಭಿಮಾನಿಗಳಿಗೆ ಗುಡ್ ನ್ಯೂಸ್ ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘ಅಂತರರಾಷ್ಟ್ರೀಯ, IPL’ ಆಯೋಜನೆಗೆ ಅನುಮತಿ!

17/01/2026 7:37 PM
State News
KARNATAKA

ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶದ ನಂತ್ರ 1.53 ಲಕ್ಷ ಕೋಟಿ ಹೊಸ ಹೂಡಿಕೆ ಆಕರ್ಷಣೆ: ಸಚಿವ ಎಂ ಬಿ ಪಾಟೀಲ

By kannadanewsnow0917/01/2026 7:51 PM KARNATAKA 2 Mins Read

ಬೆಂಗಳೂರು: ಕಳೆದ ವರ್ಷದ ಫೆಬ್ರುವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ…

ಮದ್ದೂರು ನ್ಯಾಯಾಲಯ ಸಂಕೀರ್ಣದ ಸ್ಥಳ ಪರಿಶೀಲನೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್

17/01/2026 7:48 PM

2 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಮದ್ದೂರು ಶಾಸಕ ಕೆ.ಎಂ.ಉದಯ್

17/01/2026 7:46 PM

BREAKING : ‘RCB’ ಅಭಿಮಾನಿಗಳಿಗೆ ಗುಡ್ ನ್ಯೂಸ್ ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘ಅಂತರರಾಷ್ಟ್ರೀಯ, IPL’ ಆಯೋಜನೆಗೆ ಅನುಮತಿ!

17/01/2026 7:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.