Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವು!

09/11/2025 10:57 AM

ALERT : ದೀರ್ಘ ಕೆಲಸದ ಸಮಯ, ಸ್ಕ್ರೀನ್ ಸಮಯವು ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆಯೇ?

09/11/2025 10:54 AM

ಭಾರತ-ಪಾಕ್ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಕ್ಕಾಗಿ ಟ್ರಂಪ್ ಗೆ ಮತ್ತೊಮ್ಮೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ !

09/11/2025 10:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಹಾವು ಕಚ್ಚಿದಾಗ ಗಾಬರಿ ಬೇಡ : ಈ ಮುನ್ನೆಚ್ಚರಿಕೆ ಕ್ರಮಗಳನ್ನು ಫಾಲೋ ಮಾಡಿ.!
KARNATAKA

ALERT : ಹಾವು ಕಚ್ಚಿದಾಗ ಗಾಬರಿ ಬೇಡ : ಈ ಮುನ್ನೆಚ್ಚರಿಕೆ ಕ್ರಮಗಳನ್ನು ಫಾಲೋ ಮಾಡಿ.!

By kannadanewsnow5724/04/2025 1:23 PM

ಹಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಗಾಬರಿಗೊಳಿಸದೆ, ಅವರೊಂದಿಗೆ ಶಾಂತವಾಗಿ ವರ್ತಿಸಿ, ಹತ್ತಿರದ ಆಸ್ಪತ್ರೆಗೆ ತಕ್ಷಣವೇ ಕರೆದುಕೊಂಡು ಬಂದು ಚುಚ್ಚುಮದ್ದು ಕೊಡಿಸುವ ಮೂಲಕ ಜೀವ ಹಾನಿಯಾಗದಂತೆ ಮಾಡಲು ಕೈ ಜೋಡಿಸಿ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಗುಗ್ಗರಹಟ್ಟಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಮುಂಡ್ರಿಗಿ ಬಡಾವಣೆಯಲ್ಲಿ ಗುರುವಾರ ಏರ್ಪಡಿಸಿದ್ದ “ಹಾವು ಕಡಿತ ಕುರಿತು ಜಾಗೃತಿ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹಾವು ಕಚ್ಚಿದಾಗ ಗಾಬರಿಯಾಗುವುದು ಸಾಮಾನ್ಯವಾಗಿದ್ದು, ಇದರಿಂದ ವ್ಯಕ್ತಿಯ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಅದರಲ್ಲೂ ವಿಷಕಾರಿ ಹಾವು ಕಡಿತದ ಸಂದರ್ಭದಲ್ಲಿ ವ್ಯಕ್ತಿಯನ್ನು ಯಾವುದೇ ವಾಹನ ಅಥವಾ 108 ಅಂಬುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮೊದಲ ಆದ್ಯತೆ ನೀಡಬೇಕು ಎಂದರು.

ವೈದ್ಯಾಧಿಕಾರಿ ಡಾ.ಕಾಶೀಪ್ರಸಾದ್ ಮಾತನಾಡಿ, ಹಾವು ಕಚ್ಚಿದಾಗ ಕಚ್ಚಿದ ಜಾಗದ ಪಕ್ಕದಲ್ಲಿ ಬಟ್ಟೆಯನ್ನು ಕಟ್ಟುವುದು, ಬ್ಲೇಡ್ ಅಥವಾ ಚಾಕುವಿನಿಂದ ಗಾಯ ಮಾಡುವುದು, ಗಾಯವನ್ನು ಸುಡುವುದು, ನಾಟಿ ಔಷಧಿಗಳನ್ನು ನೀಡುವುದು ಮುಂತಾದವುಗಳನ್ನು ಮಾಡಬೇಡಿ ಎಂದು ಸಾರ್ವಜನಿಕರಲ್ಲಿ ವಿನಂತಿಸಿದರು.

ಹಾವು ಕಚ್ಚಿದಾಗ ತೆಗೆದುಕೊಳ್ಳಬೇಕಾದ ಕ್ರಮಗಳು:
ಹಾವು ಕಚ್ಚಿದಾಗ ರೋಗಿಯನ್ನು ಕೂರಿಸಿ ಹಾವು ಕಚ್ಚಿರುವ ಭಾಗ ಹೃದಯದ ಕೆಳಗೆ ಬರುವ ಹಾಗೆ ಇರಲಿ ರಕ್ತಪರಿಚಲನೆಗೆ ತಡೆಯಾಗುವಂತಹ ಕೈ ಗಡಿಯಾರ, ಬಳೆ, ಉಂಗುರ ಮುಂತಾದವುಗಳನ್ನು ತೆಗೆದು, ಕಚ್ಚಿದ ಭಾಗವು ಅಲುಗಾಡದಂತೆ ನೋಡಿಕೊಳ್ಳಬೇಕು.
ಮುಖ್ಯವಾಗಿ ಆಸ್ಪತ್ರೆಗೆ ಹೋಗುವಾಗ ವ್ಯಕ್ತಿಯ ರೋಗ ಲಕ್ಷಣಗಳಾದ ತೇಲುಗಣ್ಣು, ಕಣ್ಣು ಮುಚ್ಚುವುದು, ನಾಲಿಗೆ ತೊದಲುವಿಕೆ, ನುಂಗಲು ಕಷ್ಟವಾಗುವುದು, ಉಸಿರಾಟ ತೊಂದರೆ ಮುಂತಾದವುಗಳನ್ನು ಗಮನಿಸಬೇಕು.
ಹಾಗೆಯೇ ಗಾಯದ ಜಾಗದಲ್ಲಿ ತೀವ್ರ ಉರಿ, ನೋವು ಹರಡುವಿಕೆ ಅಥವಾ ಊದುವಿಕೆ ಗಾಯದ ಸುತ್ತ ಬಣ್ಣಹೀನವಾಗುವುದು, ಕೆಳಬೆನ್ನಿನಲ್ಲಿ ನೋವು ಮುಂತಾದ ಲಕ್ಷಣಗಳು ಅಂಗಾAಗಕ್ಕೆ ಹಾನಿ ಮಾಡುವ ವಿಷದ ಅಂಶವಾಗಿರುತ್ತದೆ.
ಈ ಲಕ್ಷಣಗಳನ್ನು ರೋಗಿಯಲ್ಲಿ ಕಂಡುಬAದರೆ ಜೊತೆಗಿರುವ ವ್ಯಕ್ತಿಯು ವೈದ್ಯರಿಗೆ ತಿಳಿಸುವ ಮೂಲಕ ವ್ಯಕ್ತಿಯ ಜೀವ ಕಾಪಾಡಲು ಸಾಧ್ಯವಾಗುವ ಚಿಕಿತ್ಸೆ ಒದಗಿಸಲು ಸಹಾಯಕವಾಗುತ್ತದೆ ಎಂದರು.
ಇದೇ ವೇಳೆಯಲ್ಲಿ ನಾಯಿ ಕಡಿತ, ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು, ಬೇಸಿಗೆ ಹಿನ್ನಲೆಯಲ್ಲಿ ಶುದ್ದ ನೀರಿನ ಮಹತ್ವ ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ನಮ್ಮ ಕ್ಲಿನಿಕ್ ನ ಡಾ.ಅಬ್ದುಲ್ಲಾ ಖಲೀಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಜಿಲ್ಲಾ ಎನ್‌ಸಿಡಿ ಸಲಹೆಗಾರ ಡಾ.ಜಬೀನ್ ತಾಜ್, ಜಿಲ್ಲಾ ಸಾಂಕ್ರಾಮಿಕ ರೋಗ ತಜ್ಞರಾದ ಡಾ.ವಿಶಾಲಾಕ್ಷಿ, ತಂಬಾಕು ನಿಯಂತ್ರಣಾ ವಿಭಾಗದ ಸರಸ್ವತಿ, ಎಮ್.ಸಿಂಧು, ನವೀನ್, ಆರೋಗ್ಯ ನೀರಿಕ್ಷಣಾಧಿಕಾರಿ ನಿರಂಜನ್ ಪತ್ತಾರ, ಮುದಸ್ಸರ್, ಆಶಾ ಕಾರ್ಯಕರ್ತೆ ಸಲ್ಮಾ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ALERT: Don't panic if bitten by a snake: Follow these precautions!
Share. Facebook Twitter LinkedIn WhatsApp Email

Related Posts

BREAKING : ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವು!

09/11/2025 10:57 AM1 Min Read

ಮಹಿಳಾ ಉದ್ಯೋಗಿ ದತ್ತು ಪುತ್ರನಿಗೆ, ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಿ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

09/11/2025 10:50 AM1 Min Read

ಗ್ರಾಹಕರೇ ಗಮನಿಸಿ : ಕಡಿಮೆ ಬಡ್ಡಿದರದಲ್ಲಿ `ಗೋಲ್ಡ್ ಲೋನ್’ ನೀಡುವ ಬ್ಯಾಂಕುಗಳಿವು | Gold Loan

09/11/2025 10:41 AM2 Mins Read
Recent News

BREAKING : ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವು!

09/11/2025 10:57 AM

ALERT : ದೀರ್ಘ ಕೆಲಸದ ಸಮಯ, ಸ್ಕ್ರೀನ್ ಸಮಯವು ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆಯೇ?

09/11/2025 10:54 AM

ಭಾರತ-ಪಾಕ್ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಕ್ಕಾಗಿ ಟ್ರಂಪ್ ಗೆ ಮತ್ತೊಮ್ಮೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ !

09/11/2025 10:53 AM

ಮಹಿಳಾ ಉದ್ಯೋಗಿ ದತ್ತು ಪುತ್ರನಿಗೆ, ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಿ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

09/11/2025 10:50 AM
State News
KARNATAKA

BREAKING : ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವು!

By kannadanewsnow0509/11/2025 10:57 AM KARNATAKA 1 Min Read

ಬೆಂಗಳೂರು : ಹಾರೋಬೆಲೆ ಡ್ಯಾಮ್ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವನಪ್ಪಿವೆ. ಕನಕಪುರ ತಾಲೂಕಿನ ಕೊನೂರು ಗ್ರಾಮದ ಬಳಿ ಈ…

ಮಹಿಳಾ ಉದ್ಯೋಗಿ ದತ್ತು ಪುತ್ರನಿಗೆ, ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಿ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

09/11/2025 10:50 AM

ಗ್ರಾಹಕರೇ ಗಮನಿಸಿ : ಕಡಿಮೆ ಬಡ್ಡಿದರದಲ್ಲಿ `ಗೋಲ್ಡ್ ಲೋನ್’ ನೀಡುವ ಬ್ಯಾಂಕುಗಳಿವು | Gold Loan

09/11/2025 10:41 AM

BREAKING : ಹಾಸನದಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಇಬ್ಬರು ಬಾಲಕರು ನೀರು ಪಾಲು

09/11/2025 10:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.