Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕೊಪ್ಪಳದಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ : ಕಾಮುಕನನ್ನು ಬಂಧಿಸಿದ ಪೊಲೀಸರು

21/05/2025 9:25 PM

Watch Video: ಆಲಿಕಲ್ಲು ಮಳೆಗೆ ಸಿಕ್ಕ ದೆಹಲಿ-ಶ್ರೀನಗರ ಇಂಡಿಗೋ ವಿಮಾನ: ಬೆಚ್ಚಿ ಬಿದ್ದ ಪ್ರಯಾಣಿಕರ ವೀಡಿಯೋ ನೋಡಿ | IndiGo Flight Hit By Hailstorm

21/05/2025 9:14 PM

ಸಾಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದಲೇ ಅತ್ಯಾಚಾರ: ರೇಪ್, ಪೋಕ್ಸೋ ಕೇಸ್ ದಾಖಲು

21/05/2025 9:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ರಾಜ್ಯಾದ್ಯಂತ `ಬಿಸಿಲಿನ ತಾಪಮಾನ’ ಹೆಚ್ಚಳ : ಜನರ ಅನಾರೋಗ್ಯ ತಡೆಗೆ ಸರ್ಕಾರದಿಂದ `ಗೈಡ್ ಲೈನ್ಸ್’ ಪ್ರಕಟ | Heat Wave
KARNATAKA

ALERT : ರಾಜ್ಯಾದ್ಯಂತ `ಬಿಸಿಲಿನ ತಾಪಮಾನ’ ಹೆಚ್ಚಳ : ಜನರ ಅನಾರೋಗ್ಯ ತಡೆಗೆ ಸರ್ಕಾರದಿಂದ `ಗೈಡ್ ಲೈನ್ಸ್’ ಪ್ರಕಟ | Heat Wave

By kannadanewsnow5721/03/2025 6:26 AM

ಬೆಂಗಳೂರು : ರಾಜ್ಯಾದ್ಯಂತ ಬಿಸಿಲಿನ ತಾಪಮಾನ (heat wave) ಹೆಚ್ಚಾಗಿದ್ದು, ಸಾರ್ವಜನಿಕರ ಅನಾರೋಗ್ಯ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಸಲಹೆ/ಸೂಚನೆಗಳನ್ನು ನೀಡಿದೆ.

ಭಾರತ ಹವಾಮಾನ ಇಲಾಖೆ (IMD) ಯು ಉಲ್ಲೇಖಿತ ಪತ್ರಿಕಾ ಪ್ರಕಟಣೆಯಲ್ಲಿ 2025ರ ಬಿಸಿ ವಾತಾವರಣ ಅವಧಿಯಲ್ಲಿ (ಮಾರ್ಚ್‌ನಿಂದ ಮೇ (MAM)), ಉತ್ತರ ಒಳನಾಡು ಜಿಲ್ಲೆಗಳಿಗೆ ಹೆಚ್ಚಿನ ಭಾಗಗಳಲ್ಲಿ ಮತ್ತು ಕರಾವಳಿ ಕೆಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಸಾಧ್ಯತೆಗಳಿದೆ. ಆದರೆ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಬಹುತೇಕ ಭಾಗಗಳಲ್ಲಿ ಮತ್ತು ಮಲೆನಾಡು ಕೆಲವು ಜಿಲ್ಲೆಗಳಲ್ಲಿ ಸಾಧಾರಣ ತಾಪಮಾನದಿಂದ ಗರಿಷ್ಠ ತಾಪಮಾನದ ಸಾಧ್ಯತೆಗಳಿದೆ ಎಂದು. ಹಾಗೂ ಬಿಸಿಗಾಳಿ ದಿನಗಳ ಬಗ್ಗೆ 2025ರ ಬೇಸಿಗೆ (ಮಾರ್ಚ್ – ಮೇ) ಅವಧಿಗೆ ರಾಜ್ಯದ ಹಲವೆಡೆ 2 ರಿಂದ 14 ದಿನಗಳು ಬಿಸಿಗಾಳಿ ದಿನಗಳು ಕಾಣಬರುವ ಸಾಧ್ಯತೆಗಳಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಂಭವಿಸುವ ಸಾಧ್ಯತೆಯಿದೆ ಎಂದು ತಿಳಿಸಿರುತ್ತಾರೆ. ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಆದುದರಿಂದ, ಅತೀ ಹೆಚ್ಚು ತಾಪಮಾನ (heat wave) ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಮತ್ತು ತಗ್ಗಿಸಲು ಸಲಹೆಗಳನ್ನು ನೀಡುವುದು ಅವಶ್ಯವಿರುತ್ತದೆಂದು ತೀರ್ಮಾನಿಸಿ, ಈ ಕೆಳಕಂಡ ಸಲಹೆ/ಸೂಚನೆಗಳನ್ನು ನೀಡಲಾಗಿದೆ:

I ಅತೀ ಹೆಚ್ಚು ತಾಪಮಾನದಿಂದ(heat wave) ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ಸೂಚನೆಗಳು:

ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ 12.00 ರಿಂದ 3.00 ರವರೆಗೆ).
i. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯುವುದು.

ii. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸುವುದು.

iii. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು.

iv. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು).

V. ಪೂರ್ವಾಹ್ನ 11 ಗಂಟೆಯಿಂದ ಸಂಜೆ 4 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು /ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ / ಪೆಂಡಾಲ್‌ನ ವ್ಯವಸ್ಥೆ ಮಾಡುವುದು, ಉತ್ತಮ ಗಾಳಿಯ (Air Circulation) ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳುವುದು. ಹಾಗೂ ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡುವುದು.

vi. ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ಒಯ್ಯುವುದು.

vii. ದೇಹವನ್ನು ನಿರ್ಜಲೀಕರಣಗೊಳಿಸುವ ಆಲೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು.

viii. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು.

ix. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು.

x. ಮೂರ್ಛ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡುವುದು.

xi. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ORS ಅನ್ನು ಬಳಸುವುದು.

xii. ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.

xiii. ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು.

xiv. ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸುವುದು.

XV. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ / ಟೋಪಿ ಅಥವಾ ಕ್ಯಾಪ್/ಹೆಡ್ ಕವರ್, ಹ್ಯಾಂಡ್ ಟವೆಲ್, ಹ್ಯಾಂಡ್ ಫ್ಯಾನ್, ಎಲೆಕ್ಟೋಲೈಟ್/ಗ್ಲೋಕೋಸ್/ ORS ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು (heat wave) ತಡೆಗಟ್ಟುವ ಕಿಟ್ ಅನ್ನು ಒಯ್ಯಲು ನಾಗರಿಕರನ್ನು ಪ್ರೋತ್ಸಾಹಿಸುವುದು.

xvi. ಅತೀ ಹೆಚ್ಚು ತಾಪಮಾನ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಆಗಿಂದಾಗ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವುದು.

II ಅತೀ ಹೆಚ್ಚು ತಾಪಮಾನದಿಂದ(heat wave) ಆರೋಗ್ಯದ ಮೇಲಾಗುವ ಪರಿಣಾಮಗಳು ಹಾಗೂ ಗುರುತಿಸುವಿಕೆ:

ಅತೀ ಹೆಚ್ಚು ತಾಪಮಾನದಿಂದ(heat wave) ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳತ, ಶಾಖದ ಬಳಲಿಕೆ ಮತ್ತು / ಅಥವಾ ಶಾಖದ ಅಘಾತದಂತಹ (sun stroke) ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಅವುಗಳ ರೋಗ ಲಕ್ಷಣಗಳು ಈ ಕೆಳಕಂಡಂತಿವೆ:

i. ಶಾಖ ಸೆಳತಗಳು (Heat cramps): ಎಡೆರ್ನಾ (ಊತ) ಮತ್ತು ಮೂರ್ಛ ಸಾಮಾನ್ಯವಾಗಿ 39 ° C ಅಂದರ 102 °F ಗಿಂತ ಕಡಿಮೆ ಜ್ವರದಿಂದ ಕೂಡಿರುತ್ತದೆ.

ii. ಶಾಖದ ಬಳಲಿಕೆ: ಆಯಾಸ, ದೌರ್ಭಲ್ಯ, ತಲೆತಿರುಗುವಿಕೆ, ತಲೆನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು.

iii. ಶಾಖಾಘಾತ (Sun Stroke): ದೇಹದ ಉಷ್ಣತೆಯು 40 ° C ಅಂದರೆ 104 ° F ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವುದು.

III ಅತೀ ಹೆಚ್ಚು ತಾಪಮಾನ(heat wave)ಕ್ಕೆ ಸಂಬಂಧಿತ ಕಾಯಿಲೆಗೆ ಪ್ರಥಮ ಚಿಕಿತ್ಸೆ:

i. ಅತೀ ಹೆಚ್ಚು ತಾಪಮಾನದಿಂದ(heat wave) ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸುವುದು. ಒದ್ದೆಯಾದ ಬಟ್ಟೆಯಿಂದ ಮೈಒರಸುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕುವುದು.

ii. ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓಆರ್‌ಎಸ್. ನಿಂಬೆಪಾನಕ ನೀಡುವುದು (ವ್ಯಕ್ತಿ ಇನ್ನೂ ಪ್ರಜ್ಞೆ ಹೊಂದಿದ್ದರೆ)

iii. ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡುವುದು.

iv. ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಸಂಪರ್ಕಿಸುವುದು.

v. ಮದ್ಯಪಾನ, ಕಾಫಿ, ಶೇಖರಿಸಿದ ಪಾನೀಯವನ್ನು ನೀಡಬಾರದು.

vi. ಅತೀ ಹೆಚ್ಚು ತಾಪಮಾನದಿಂದ(heat wave)ತುತ್ತಾದವರ ಮೇಲೆ ತಂಪಾದ ಒದ್ದೆ ಬಟ್ಟೆಯನ್ನು ಹಾಕುವ ಮೂಲಕ ವ್ಯಕ್ತಿಯನ್ನು ತಂಪಾಗಿಸುವುದು.

vii. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸುವುದು.

viii. ಅತೀ ಹೆಚ್ಚು ತಾಪಮಾನದಿಂದ ಉದ್ಭವಿಸಬಹುದಾದ ರೋಗಲಕ್ಷಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಆಗಿಂದಾಗ್ಗೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವುದು.

IV ಅತೀ ಹೆಚ್ಚು ತಾಪಮಾನಕ್ಕೆ (heat wave) ಸಂಬಂಧಿತ ಅನಾರೋಗ್ಯವನ್ನು ತಡೆಗಟ್ಟಲು/ಕಡಿಮೆಗೊಳಿಸಲು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ನಿರ್ದಿಷ್ಟ ಕ್ರಮಗಳು:

i. ಅತೀ ಹೆಚ್ಚು ತಾಪಮಾನಕ್ಕೆ (heat wave) ಸಂಬಂಧಿಸಿದಂತೆ IMD ಮತ್ತು KSNDMC ಯಿಂದ ನೀಡಿದ ಮುನ್ಸೂಚನೆ/ ಎಚ್ಚರಿಕೆಗಳು/ಎಚ್ಚರಿಕೆಗಳನ್ನು ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವುದು.

ii. ಅತೀ ಹೆಚ್ಚು ತಾಪಮಾನದ(heat wave) ಪ್ರತಿಕೂಲ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅತೀ ಹೆಚ್ಚು ತಾಪಮಾನದ(heat wave) ಸಮಯದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ಮತ್ತು ಕಂದಾಯ ಇಲಾಖೆ (ವಿ.ನಿ) ಯಿಂದ ತಯಾರಿಸಿರುವ IEC ಸಕ್ರಿಯಗೊಳಿಸುವುದು.

ALERT: Increase in ``sunny temperature'' across the state: Government issues ``guidelines'' to prevent people from getting sick | Heat Wave
Share. Facebook Twitter LinkedIn WhatsApp Email

Related Posts

BIG NEWS : ಕೊಪ್ಪಳದಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ : ಕಾಮುಕನನ್ನು ಬಂಧಿಸಿದ ಪೊಲೀಸರು

21/05/2025 9:25 PM1 Min Read

ಸಾಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದಲೇ ಅತ್ಯಾಚಾರ: ರೇಪ್, ಪೋಕ್ಸೋ ಕೇಸ್ ದಾಖಲು

21/05/2025 9:13 PM1 Min Read

SHOCKING : ಶಿವಮೊಗ್ಗದಲ್ಲಿ ಘೋರ ದುರಂತ : ಬೇಟೆಗೆ ತೆರಳಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದು ಯುವಕ ಸಾವು!

21/05/2025 9:09 PM1 Min Read
Recent News

BIG NEWS : ಕೊಪ್ಪಳದಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ : ಕಾಮುಕನನ್ನು ಬಂಧಿಸಿದ ಪೊಲೀಸರು

21/05/2025 9:25 PM

Watch Video: ಆಲಿಕಲ್ಲು ಮಳೆಗೆ ಸಿಕ್ಕ ದೆಹಲಿ-ಶ್ರೀನಗರ ಇಂಡಿಗೋ ವಿಮಾನ: ಬೆಚ್ಚಿ ಬಿದ್ದ ಪ್ರಯಾಣಿಕರ ವೀಡಿಯೋ ನೋಡಿ | IndiGo Flight Hit By Hailstorm

21/05/2025 9:14 PM

ಸಾಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದಲೇ ಅತ್ಯಾಚಾರ: ರೇಪ್, ಪೋಕ್ಸೋ ಕೇಸ್ ದಾಖಲು

21/05/2025 9:13 PM

SHOCKING : ಶಿವಮೊಗ್ಗದಲ್ಲಿ ಘೋರ ದುರಂತ : ಬೇಟೆಗೆ ತೆರಳಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದು ಯುವಕ ಸಾವು!

21/05/2025 9:09 PM
State News
KARNATAKA

BIG NEWS : ಕೊಪ್ಪಳದಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ : ಕಾಮುಕನನ್ನು ಬಂಧಿಸಿದ ಪೊಲೀಸರು

By kannadanewsnow0521/05/2025 9:25 PM KARNATAKA 1 Min Read

ಕೊಪ್ಪಳ : ನಿನ್ನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಹಾಡಹಗಲೇ ಬಸ್ ನಿಲ್ದಾಣದ ಬಳಿ ಮಾನಸಿಕ ಅಸ್ವಸ್ಥೆಯನ್ನು ಕರೆದೋಯ್ದು ಅತ್ಯಾಚಾರಕ್ಕೆ…

ಸಾಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದಲೇ ಅತ್ಯಾಚಾರ: ರೇಪ್, ಪೋಕ್ಸೋ ಕೇಸ್ ದಾಖಲು

21/05/2025 9:13 PM

SHOCKING : ಶಿವಮೊಗ್ಗದಲ್ಲಿ ಘೋರ ದುರಂತ : ಬೇಟೆಗೆ ತೆರಳಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದು ಯುವಕ ಸಾವು!

21/05/2025 9:09 PM

BIG NEWS : ಚಿಕ್ಕಮಗಳೂರುಲ್ಲಿ ಗೂಗಲ್ ಮ್ಯಾಪ್ ನಂಬಿ ಗದ್ದೆಗೆ ನುಗ್ಗಿದ ಟಿಟಿ : ಪ್ರವಾಸಿಗರ ಪರದಾಟ!

21/05/2025 8:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.