Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ

07/03/2026 8:26 PM

ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ: ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

07/03/2026 8:14 PM

‘ಎಲ್ಲಾ ಮಿತಿಗಳನ್ನ ಮೀರಿದೆ’ : ರಾಷ್ಟ್ರಪತಿ ಮುರ್ಮು ಅವಮಾನಿಸಿದ ಟಿಎಂಸಿ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ಧಾಳಿ

07/03/2026 8:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿತ್ರಕಲಾ ಪರಿಷತ್ತು ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು- ಮುಖ್ಯಮಂತ್ರಿ ಸಿದ್ದರಾಮಯ್ಯ
KARNATAKA

ಚಿತ್ರಕಲಾ ಪರಿಷತ್ತು ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು- ಮುಖ್ಯಮಂತ್ರಿ ಸಿದ್ದರಾಮಯ್ಯ

By kannadanewsnow0707/01/2024 7:20 PM

ಬೆಂಗಳೂರು: ಚಿತ್ರಕಲಾ ಪರಿಷತ್ತು ಚಿತ್ರಸಂತೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಚಿತ್ರಕಲಾ ಪರಿಷತ್ತು ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ನಗರದ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತು ಹಾಗೂ ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ 21ನೇ ಚಿತ್ರಸಂತೆ ಕಾರ್ಯಕ್ರಮಕ್ಕೆ ಸಹಿ ಮಾಡುವ ಮೂಲಕ ಚಾಲನೆ ನೀಡಿ, ನಂತರ ಮಾತನಾಡಿದ ಮುಖ್ಯಮಂತ್ರಿಗಳು, ಎಲ್ಲಾ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ಸರ್ಕಾರ ಸಹಕಾರ ನೀಡಲಿದೆ. ಈ ಬಾರಿ ಚಿತ್ರಕಲಾ ಪರಿಷತ್ತಿಗೆ 50 ಲಕ್ಷ ರೂ.ಗಳ ಅನುದಾನವನ್ನು ನೀಡಲಾಗುವುದು ಎಂದರು.

2003 ರಿಂದ ಚಿತ್ರಕಲಾ ಪರಿಷತ್ತು ವತಿಯಿಂದ ಪ್ರತಿ ವರ್ಷ ಚಿತ್ರಸಂತೆಯನ್ನು ಆಚರಣೆ ಮಾಡಿಕೊಂಡು ಬರುತ್ತಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತಿ ವರ್ಷ ನಡೆದ ಚಿತ್ರಸಂತೆಯನ್ನು ಉದ್ಘಾಟಿಸಿದ್ದೇನೆ. ಇಂದು 6ನೇ ಬಾರಿ ಚಿತ್ರಸಂತೆಯನ್ನು ಉದ್ಘಾಟನೆ ಮಾಡುತ್ತಿರುವುದು ಅತ್ಯಂತ ಸಂತೋಷ ತಂದಿದೆ ಎಂದರು.

ಚಿತ್ರಸಂತೆಯು ಸಂಜೆಯವರೆಗೂ ನಡೆಯಲಿದ್ದು, 22 ರಾಜ್ಯಗಳಿಂದ ಸುಮಾರು 1682 ಕಲಾವಿದರು ಈ ಚಿತ್ರಸಂತೆಯಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಸುಮಾರು 3 ರಿಂದ 4 ಲಕ್ಷ ಜನರು ಚಿತ್ರಸಂತೆಯನ್ನು ವೀಕ್ಷಿಸಲಿದ್ದಾರೆ. ಈ ಬಾರಿಯ ಚಿತ್ರಸಂತೆಯನ್ನು ಬಾಹ್ಯಾಕಾಶ ವಿಜ್ಞಾನಿಗಳಿಗೆ ಸಮರ್ಪಣೆ ಮಾಡಿರುವುದು ಅವರಿಗೆ ಸಲ್ಲಿಸಿರುವ ವಿಷೇಷ ಗೌರವವನ್ನು ಸೂಚಿಸುತ್ತದೆ ಎಂದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, 21 ವರ್ಷಗಳಿಂದ ಚಿತ್ರಸಂತೆಯನ್ನು ಸತತವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿಯೊಂದು ಜಿಲ್ಲೆಯಲ್ಲೂ ಬಹಳಷ್ಟು ಕಲಾವಿದರಿದ್ದಾರೆ. ಅವರ ಕಲೆಯನ್ನು ಪ್ರದರ್ಶನ ಮಾಡಲು ಅವಕಾಶ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಕಲೆ ಮತ್ತು ಸಂಸ್ಕøತಿಯ ಭವ್ಯಪರಂಪರೆಯನ್ನು ಉಳಿಸಿಕೊಂಡು ಹೋಗುವಂತಹ ಕೆಲಸವನ್ನು ಚಿತ್ರಕಲಾ ಪರಿಷತ್ತು ಮಾಡುತ್ತಿದೆ. ಕಲಾವಿದರನ್ನು ಪ್ರೋತ್ಸಾಹಿಸಲು ಉತ್ತಮ ವೇದಿಕೆಯನ್ನು ನಿರ್ಮಿಸಿದೆ. ಇಂದು ನಡೆಯುವ ಚಿತ್ರಸಂತೆಯು ಯಶಸ್ವಿಯಾಗಲಿ. ಮುಂದಿನ ದಿನಗಳಲ್ಲಿ ಚಿತ್ರಕಲಾ ಕಾಲೇಜನ್ನು ಸರ್ಕಾರದ ಅನುದಾನಕ್ಕೆ ಒಳಪಡಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣ ಮಾಡಿದ ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾದ ಡಾ.ಬಿ.ಎಲ್.ಶಂಕರ್, ಕರ್ನಾಟಕ ಚಿತ್ರಕಲಾ ಪರಿಷತ್‍ನಲ್ಲಿ 21 ನೇ ಬಾರಿಗೆ ಚಿತ್ರಸಂತೆಯನ್ನು ಹಮ್ಮಿಕೊಳ್ಳÀಲಾಗಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಜ್ಞಾನಿಗಳಿಗೆ ಈ ಬಾರಿಯ ಚಿತ್ರಸಂತೆಯನ್ನು ಸಮರ್ಪಣೆ ಮಾಡಲಾಗುತ್ತಿದೆ. ಸಾಂಪ್ರದಾಯಿಕ ಚಿತ್ರಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಈ ಬಾರಿ ಚಿತ್ರಸಂತೆಯಲ್ಲಿ ಭಾಗವಹಿಸಲು ಸುಮಾರು 2900 ಅರ್ಜಿಗಳು ಬಂದಿದ್ದು, ಕೇವಲ 1682 ಜನರಿಗೆ ಮಾತ್ರ ಅವಕಾಶವನ್ನು ಕಲ್ಪಿಸÀಲಾಗಿದೆ. ಮಳಿಗೆಗಳಿಗೆ ಕುಮಾರ ಕೃಪಾ ರಸ್ತೆ, ಕ್ರೆಸೆಂಟ್ ರಸ್ತೆ, ಗಾಂಧಿ ಭವನ ರಸ್ತೆ, ಸ್ಟೀಲ್ ಬ್ರಿಡ್ಜ್ ಸಮೀಪದಲ್ಲಿಯೂ ಸ್ಥಳಾವಕಾಶ ನೀಡಲಾಗಿದೆ. ವಿಶೇಷ ಚೇತನರಿಂದ ಸುಮಾರು 205 ಅರ್ಜಿಗಳು ಬಂದಿದ್ದು, ಎಲ್ಲರಿಗೂ ಅವಕಾಶವನ್ನು ಕಲ್ಪಿಸಲಾಗಿದೆ. ಅರ್ಜಿ ಹಾಕಿದ ಎಲ್ಲಾ ಹಿರಿಯ ನಾಗರಿಕರಿಗೂ ಕೂಡ ಅವಕಾಶ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ಶಾಸಕರಾದ ರಿಜ್ವಾನ್ ಅರ್ಷದ್, ಶಾಸಕರು ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ.ಅಜಯ್‍ಸಿಂಗ್, ಚಿತ್ರಕಲಾ ಪರಿಷತ್ತಿನ ಉಪಾಧ್ಯಕ್ಷರಾದ ಪ್ರಭಾಕರ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

All cooperation will be extended for the development of Chitrakala Parishad: CM Siddaramaiah ಚಿತ್ರಕಲಾ ಪರಿಷತ್ತು ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು- ಮುಖ್ಯಮಂತ್ರಿ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ

07/03/2026 8:26 PM1 Min Read

ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ: ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

07/03/2026 8:14 PM1 Min Read

ಮಹಾತ್ಮ ಗಾಂಧೀಜಿಯವರ ಗ್ರಾಮ ರಾಜ್ಯ ಪರಿಕಲ್ಪನೆಯನ್ನು ಕಾಂಗ್ರೆಸ್ ಮೂಲೆಗುಂಪು ಮಾಡಿದೆ: ತೀ.ನ.ಶ್ರೀನಿವಾಸ್ ಕಿಡಿ

07/03/2026 7:57 PM2 Mins Read
Recent News

ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ

07/03/2026 8:26 PM

ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ: ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

07/03/2026 8:14 PM

‘ಎಲ್ಲಾ ಮಿತಿಗಳನ್ನ ಮೀರಿದೆ’ : ರಾಷ್ಟ್ರಪತಿ ಮುರ್ಮು ಅವಮಾನಿಸಿದ ಟಿಎಂಸಿ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ಧಾಳಿ

07/03/2026 8:11 PM

ಮಹಾತ್ಮ ಗಾಂಧೀಜಿಯವರ ಗ್ರಾಮ ರಾಜ್ಯ ಪರಿಕಲ್ಪನೆಯನ್ನು ಕಾಂಗ್ರೆಸ್ ಮೂಲೆಗುಂಪು ಮಾಡಿದೆ: ತೀ.ನ.ಶ್ರೀನಿವಾಸ್ ಕಿಡಿ

07/03/2026 7:57 PM
State News
KARNATAKA

ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ

By kannadanewsnow0907/03/2026 8:26 PM KARNATAKA 1 Min Read

ಶಿವಮೊಗ್ಗ : ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವುದರ ಬಗ್ಗೆ ನನಗೆ ನಂಬಿಕೆ ಇಲ್ಲ. ಬದಲಾದ ದಿನಮಾನಗಳಿಗೆ ತಕ್ಕಂತೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು…

ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ: ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

07/03/2026 8:14 PM

ಮಹಾತ್ಮ ಗಾಂಧೀಜಿಯವರ ಗ್ರಾಮ ರಾಜ್ಯ ಪರಿಕಲ್ಪನೆಯನ್ನು ಕಾಂಗ್ರೆಸ್ ಮೂಲೆಗುಂಪು ಮಾಡಿದೆ: ತೀ.ನ.ಶ್ರೀನಿವಾಸ್ ಕಿಡಿ

07/03/2026 7:57 PM

ಅಭಿವೃದ್ಧಿಗಾಗಿ ಸಿದ್ಧರಾಮಯ್ಯ ಮಾತ್ರವಲ್ಲ, ಪ್ರಧಾನಿ ಮೋದಿ ಸಹ ಸಾಲ ಮಾಡಿದ್ದಾರೆ: ಶಾಸಕ ಗೋಪಾಲಕೃಷ್ಣ ಬೇಳೂರು

07/03/2026 7:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.