Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಪ್ರಧಾನಿ ಮೋದಿ ಮೇಲೆ ಅಮೇರಿಕಾ ಒತ್ತಡ ಹೇರುವುದು ವ್ಯರ್ಥ’: ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ ಪುಟಿನ್!

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

GOOD NEWS : `ರಾಜ್ಯ ಸರ್ಕಾರಿ ನೌಕರರಿಗೆ’ ಭರ್ಜರಿ ಗುಡ್ ನ್ಯೂಸ್ : ನಿವೃತ್ತಿ ಹಿಂದಿನ ದಿನ ‘ಕಾಲ್ಪನಿಕ ವೇತನ ಬಡ್ತಿ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹದಾಯಿಗೆ ಅನುಮತಿ, ಭದ್ರಾ ಮೇಲ್ದಂಡೆಗೆ ಹಣ ಕೊಡಿಸಿ: ಪ್ರಹ್ಲಾದ್ ಜೋಶಿಗೆ ಡಿಸಿಎಂ ಡಿಕೆಶಿ ಮನವಿ
KARNATAKA

ಮಹದಾಯಿಗೆ ಅನುಮತಿ, ಭದ್ರಾ ಮೇಲ್ದಂಡೆಗೆ ಹಣ ಕೊಡಿಸಿ: ಪ್ರಹ್ಲಾದ್ ಜೋಶಿಗೆ ಡಿಸಿಎಂ ಡಿಕೆಶಿ ಮನವಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : “ಮಾನ್ಯ ಸಂಸದರೇ ದರ್ಶನ್, ಮುಡಾ ವಿಚಾರ ಎಲ್ಲವನ್ನು ಬಿಟ್ಟುಬಿಡಿ. ಮಹದಾಯಿಗೆ ಅನುಮತಿ ಹಾಗೂ ಭದ್ರಾ ಮೇಲ್ದಂಡೆಗೆ ಹಣ ಕೊಡಿಸಿ ಎಂದು ಗಣೇಶ ಹಬ್ಬದ ದಿನ ಕೈ ಮುಗಿದು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ. ಈ ಎರಡು ಯೋಜನೆಗಳಿಗೆ ಇರುವ ವಿಘ್ನ ನಿವಾರಣೆ ಮಾಡಿಸಿ ಎಂದು ಇಲ್ಲಿಂದಲೇ ಪ್ರಹ್ಲಾದ ಜೋಶಿಯವರಿಗೆ ದೀರ್ಘ ದಂಡ ನಮಸ್ಕಾರ ಹಾಕುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಮುಡಾ, ವಾಲ್ಮೀಕಿ ಪ್ರಕರಣದ ಹಾದಿ ತಪ್ಪಿಸಲು ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜೈಲಿನ ಒಳಗಡೆ ಇರುವ ಫೋಟೋವನ್ನು ಸರ್ಕಾರವೇ ಬಿಡುಗಡೆ ಮಾಡಿದೆ ಎನ್ನುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಡಿಸಿಎಂ ಈ ರೀತಿ ಪ್ರತಿಕ್ರಿಯಿಸಿದರು.

ಸದಾಶಿವ ನಗರದ ನಿವಾಸದ ಬಳಿ ಮಾತನಾಡಿದ ಅವರು “ಮಹದಾಯಿ ವಿಚಾರವಾಗಿ ಸರ್ವ ಪಕ್ಷ ಸಭೆ ಅಥವಾ ನಿಯೋಗದ ಸಭೆ ನಡೆಸುವುದೋ ಎನ್ನುವ ಬಗ್ಗೆ 15 ದಿನಗಳಲ್ಲಿ ಮುಖ್ಯಮಂತ್ರಿಗಳ ಬಳಿ ಮಾತನಾಡಲಾಗುವುದು. ಹಾಗೂ ನಮ್ಮ ಹೋರಾಟದ ಸ್ವರೂಪದ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದರು.

ಜೋಶಿ ಅವರು ಸರ್ಕಾರದ ಮೇಲೆ ಮಾಡಿರುವ ಗಂಭೀರ ಆರೋಪದ ಬಗ್ಗೆ ಮರು ಪ್ರಶ್ನಿಸಿದಾಗ “ಅವರು ಮಾಡುತ್ತಿರಲಿ” ಎಂದರು.

ಪ್ರೀತಿಯಿಂದ ಸುಧಾಕರ್ ಸವಾಲನ್ನು ಸ್ವೀಕರಿಸುತ್ತೇನೆ

ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ಎರಡು ವರ್ಷಗಳಲ್ಲಿ ಹರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಭಗೀರಥ ಎಂದು ಕರೆಯುತ್ತೇನೆ ಎನ್ನುವ ಸಂಸದ ಸುಧಾಕರ್ ಅವರ ಹೇಳಿಕೆಯ ಬಗ್ಗೆ ಕೇಳಿದಾಗ “ಸಂಸದ ಡಾ. ಕೆ.ಸುಧಾಕರ್ ಅವರು ಸವಾಲು ಹಾಕಿದ್ದಾರೆ. ಈ ಸವಾಲನ್ನು ನಾನು ಪ್ರೀತಿ, ಗೌರವಗಳಿಂದ ಸ್ವೀಕರಿಸುತ್ತೇನೆ. ಇದು ನನ್ನ ಜವಾಬ್ದಾರಿ ಹಾಗೂ ಸಲಹೆ ಎಂದೂ ಭಾವಿಸುತ್ತೇನೆ. ಅವರೂ ಎತ್ತಿನಹೊಳೆ ಭೂಮಿ ಪೂಜೆಯಲ್ಲಿ ಅವರೂ ಇದ್ದರು. ಚಿಕ್ಕಬಳ್ಳಾಪುರ ಮತ್ತು ಕೋಲಾರ ಭಾಗಕ್ಕೆ ನೀರು ದೊರೆಯಲಿ ಎಂಬುದು ಅವರ ಆಸೆ. ಅವರ ಆಸೆ ಈಡೇರಿಸುವ ಕೆಲಸ ಮಾಡೋಣ” ಎಂದರು.

“ಕೋಲಾರ ಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ವೀರಪ್ಪ ಮೊಯಿಲಿ, ಕೆ.ಎಚ್.ಮುನಿಯಪ್ಪ, ಸುಬ್ಬಾರೆಡ್ಡಿ, ಶಿವಶಂಕರ್ ರೆಡ್ಡಿ, ರಮೇಶ್ ಕುಮಾರ್, ಕೃಷ್ಣಬೈರೇಗೌಡ ಹಾಗೂ ಸುಧಾಕರ್ ಸೇರಿದಂತೆ ಅನೇಕರು ಕುಡಿಯುವ ನೀರು ಹಾಗೂ ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದ್ದಾರೆ. ಕೋಲಾರ ಭಾಗದ ಜನರ ನೀರಿನ ಸಂಕಷ್ಟ ನನಗೆ ಅರಿವಿದೆ” ಎಂದರು.

“ಖಾಸಗಿ ಕಾರ್ಯಕ್ರಮದ ನಿಮಿತ್ತ ನಾನು ಊರಿನಲ್ಲಿ ಇರುವುದಿಲ್ಲ. ಆನಂತರ ಎತ್ತಿನಹೊಳೆ ಯೋಜನೆಯಲ್ಲಿ ತುಮಕೂರು, ದೊಡ್ಡಬಳ್ಳಾಪುರ ಭಾಗದ ಸಮಸ್ಯೆಗಳ ವಿವರಣೆ ಹಾಗೂ ಅರಣ್ಯ ಭೂಮಿ ಸ್ವಾಧೀನ ತೊಂದರೆಗಳನ್ನು ಮುಖ್ಯಮಂತ್ರಿಗಳ ಬಳಿ ಒಂದು ವಾರಗಳ ನಂತರ ಮಾತನಾಡಿ ಬಗೆಹರಿಸಲಾಗುವುದು” ಎಂದು ಹೇಳಿದರು.

ಇನ್ನು ಒಂದು ತಿಂಗಳಲ್ಲಿ ಕೋವಿಡ್ ವರದಿಯನ್ನು ನೀಡುವಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿರುವ ಕಾರಣಕ್ಕೆ ಸುಧಾಕರ್ ಅವರು ನಿಮ್ಮನ್ನು ಪದೇಪದೇ ಹೊಗಳುತ್ತಿದ್ದಾರೆಯೇ ಎಂದು ಕೇಳಿದಾಗ “ನನಗೆ ಕೋವಿಡ್ ವರದಿಯ ಬಗ್ಗೆ ಏನು ಗೊತ್ತಿಲ್ಲ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಾನು ಭಾಗವಹಿಸಿರಲಿಲ್ಲ. ಸಕಲೇಶಪುರದ ಎತ್ತಿನಹೊಳೆಯಲ್ಲಿದ್ದೆ” ಎಂದರು.

ಈಗ ಎಂಪಿ ಸುಧಾಕರ್ ಅಲ್ಲವೇ?

ಮಾತಿನ ಮಧ್ಯೆ ಡಿಸಿಎಂ ಅವರು “ಸುಧಾಕರ್ ಈಗ ಎಂಪಿ ಅಲ್ಲವೇ? ಎಂದು ಮಾಧ್ಯಮದವರ ಬಳಿ ಪ್ರಶ್ನಿಸಿದರು. ನಮ್ಮಲ್ಲಿ ಇಬ್ಬರು ಸುಧಾಕರ್ ಇದ್ದಾರೆ. ಇವರೂ ಸೇರಿ ಮೂರು ಜನ ಆಗುತ್ತಾರೆ. ನಮ್ಮವರು ಇಬ್ಬರೂ ಮಂತ್ರಿಗಳು. ಇವರು ಸಂಸದರು ಎಂದಾಗ, ಮಾಧ್ಯಮದವರು ‘ಮಾಜಿ ಸಚಿವರು ಆಗಿದ್ದರು’ ಎಂದು ಹೇಳಿದಾಗ ಮಾಜಿ ಸಚಿವ ಸುಧಾಕರ್” ಎಂದು ಎಂದರು.

ಬಯಲು ಸೀಮೆಯಲ್ಲಿ ಇನ್ನು ಕೆರೆಗಳು ತುಂಬಿಲ್ಲ

“ಗೌರಿ ಹಬ್ಬದ ದಿನ ಗಂಗೆಯನ್ನು ಪೂಜೆ ಮಾಡಿ ಸಂಭ್ರಮ ಪಟ್ಟಿದ್ದೇವೆ. ಇದನ್ನು ಒಂದು ಒಂದಷ್ಟು ಜನ ನೋಡಿ ಸಂಭ್ರಮಪಟ್ಟಿದ್ದಾರೆ ಟೀಕೆ ಮಾಡಿದ್ದಾರೆ. ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ. ಬರಗಾಲದ ಛಾಯೆ ದೂರವಾಗಿ, ಉತ್ತಮ ಮಳೆಬಿದ್ದು ಜಲಾಶಯಗಳು ತುಂಬಿವೆ. ಬಯಲು ಸೀಮೆಯಲ್ಲಿ ಒಂದಿಷ್ಟು ಕಡೆ ಮಳೆ ಕಡಿಮೆಯಾಗಿದೆ. ಮಂಡ್ಯ ಬೆಂಗಳೂರು ಗ್ರಾಮಾಂತರ ತುಮಕೂರು ಈ ಭಾಗದಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಬಿಜೆಪಿ ಆಡಳಿತಾವಧಿಯಲ್ಲಿ ಎತ್ತಿನಹೊಳೆ ಯೋಜನೆ ಪ್ರಗತಿ ಕಂಡಿರಲಿಲ್ಲ. ಇದಕ್ಕೆ ನಾನಾ ಕಾರಣಗಳು ಇರಬಹುದು” ಎಂದು ಹೇಳಿದರು.

ಬೆಂಗಳೂರು ನಡೆಯುತ್ತಿರುವುದೇ ನಮ್ಮಿಂದ: ಹೊರ ರಾಜ್ಯದ ಯುವತಿ ಹೇಳಿಕೆ ವೀಡಿಯೋ ವೈರಲ್‌, ಕನ್ನಡಿಗರು ಆಕ್ರೋಶ

ಪ್ರಯಾಣಿಕರೇ ದಯವಿಟ್ಟು ಗಮನಿಸಿ : ಇನ್ಮುಂದೆ ಈ ವಯಸ್ಸಿನ ಮಕ್ಕಳು ರೈಲಿನಲ್ಲಿ ಉಚಿತವಾಗಿ ಪ್ರಯಾಣಿಸಬಹುದು!

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

3 Mins Read

GOOD NEWS : `ರಾಜ್ಯ ಸರ್ಕಾರಿ ನೌಕರರಿಗೆ’ ಭರ್ಜರಿ ಗುಡ್ ನ್ಯೂಸ್ : ನಿವೃತ್ತಿ ಹಿಂದಿನ ದಿನ ‘ಕಾಲ್ಪನಿಕ ವೇತನ ಬಡ್ತಿ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ!

2 Mins Read

BIG NEWS: ರಾಜ್ಯದಲ್ಲಿ `ಗ್ರಾಮ ಪಂಚಾಯಿತಿ ಚುನಾವಣೆ’ : ವಾರ್ಡ್‌ ಗಳ ರಚನೆ, ಮೀಸಲಾತಿ ನಿಗದಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

3 Mins Read
Recent News

​’ಪ್ರಧಾನಿ ಮೋದಿ ಮೇಲೆ ಅಮೇರಿಕಾ ಒತ್ತಡ ಹೇರುವುದು ವ್ಯರ್ಥ’: ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ ಪುಟಿನ್!

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

GOOD NEWS : `ರಾಜ್ಯ ಸರ್ಕಾರಿ ನೌಕರರಿಗೆ’ ಭರ್ಜರಿ ಗುಡ್ ನ್ಯೂಸ್ : ನಿವೃತ್ತಿ ಹಿಂದಿನ ದಿನ ‘ಕಾಲ್ಪನಿಕ ವೇತನ ಬಡ್ತಿ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ!

​’ಇರಾನ್ ಅಮೆರಿಕದ ಸೈನಿಕರನ್ನು ಕೊಂದರೆ, ಅದು ಯುದ್ಧ ಮರುಪ್ರಾರಂಭಿಸಲು ಸೂಕ್ತ ಕಾರಣ’: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

State News
KARNATAKA

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

By kannadanewsnow57 KARNATAKA 3 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (LADS) ಅಡಿಯಲ್ಲಿ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗಾಗಿ ಯಾವೆಲ್ಲಾ ಪ್ರಮುಖ ಕಾಮಗಾರಿಗಳನ್ನು…

GOOD NEWS : `ರಾಜ್ಯ ಸರ್ಕಾರಿ ನೌಕರರಿಗೆ’ ಭರ್ಜರಿ ಗುಡ್ ನ್ಯೂಸ್ : ನಿವೃತ್ತಿ ಹಿಂದಿನ ದಿನ ‘ಕಾಲ್ಪನಿಕ ವೇತನ ಬಡ್ತಿ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ!

BIG NEWS: ರಾಜ್ಯದಲ್ಲಿ `ಗ್ರಾಮ ಪಂಚಾಯಿತಿ ಚುನಾವಣೆ’ : ವಾರ್ಡ್‌ ಗಳ ರಚನೆ, ಮೀಸಲಾತಿ ನಿಗದಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

GOOD NEWS : ಅಸಂಘಟಿತ ವಲಯದ ಕಾರ್ಮಿಕರಿಗೆ ಬಂಪರ್ ಗಿಫ್ಟ್ : ತಿಂಗಳಿಗೆ ಕೇವಲ ₹55 ಹೂಡಿಕೆ ಮಾಡಿ ₹3000 ಪಿಂಚಣಿ ಪಡೆಯಿರಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.