Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಸಾಗರ ಸರ್ಕಾರಿ ಆಸ್ಪತ್ರೆ’ಯಲ್ಲೊಬ್ಬ ದುರಹಂಕಾರಿ ವೈದ್ಯ: ‘ಆಡಳಿತ ವೈದ್ಯಾಧಿಕಾರಿ’ ಮಾತಿಗೂ ಡೋಂಟ್ ಕೇರ್
KARNATAKA

BIG NEWS: ‘ಸಾಗರ ಸರ್ಕಾರಿ ಆಸ್ಪತ್ರೆ’ಯಲ್ಲೊಬ್ಬ ದುರಹಂಕಾರಿ ವೈದ್ಯ: ‘ಆಡಳಿತ ವೈದ್ಯಾಧಿಕಾರಿ’ ಮಾತಿಗೂ ಡೋಂಟ್ ಕೇರ್

By kannadanewsnow0901/12/2024 11:18 AM

ಶಿವಮೊಗ್ಗ: ಸರ್ಕಾರಿ ಆಸ್ಪತ್ರೆಯ ವೈದ್ಯರು ರೋಗಿಗಳಿಗೆ ಸೇವೆ ನೀಡುವುದು, ಅವರೊಂದಿಗೆ ಉತ್ತಮ ನಡೆ ತೋರಬೇಕು. ಅದ್ಯಾವುದೇ ರೋಗಿ ಆಗಿದ್ದರೂ ಪರೀಕ್ಷಿಸಿ, ಚಿಕಿತ್ಸೆ ನೀಡುವುದು ಕಡ್ಡಾಯ. ಆದರೇ ಸಾಗರದ ಸಾರ್ವಜನಿಕ ಆಸ್ಪತ್ರೆಯಲ್ಲೊಬ್ಬ ಇದಕ್ಕೆ ವ್ಯತಿರಿಕ್ತ ವೈದ್ಯನಿದ್ದಾನೆ. ರೋಗಿಗಳು ಬಂದಾಗ ತಾನು ತುಂಬಾ ಬ್ಯುಸಿ ಇದ್ದೇನೆ ಅನ್ನೋ ಥರ ಪೋಸ್ ಕೊಟ್ಟು, ಗಂಟೆಗಟ್ಟಲೇ ಸತಾಯಿಸಿ ಚಿಕಿತ್ಸೆ ಕೊಡ್ತಾನಂತೆ. ಅಲ್ಲದೇ ಆಡಳಿತ ವೈದ್ಯಾಧಿಕಾರಿ ಸೂಚಿಸಿದ್ರೂ ಅವರ ಮಾತಿಗೆ ಸೊಪ್ಪು ಕೂಡ ಹಾಕದೇ ದುರ್ವರ್ತನೆ ತೋರಿರೋ ಘಟನೆ ನಡೆದಿದೆ.

ಸಾಗರದ ಸಾಮಾಜಿಕ ಕಾರ್ಯಕರ್ತ ಜಮೀನ್ ಸಾಗರ್ ಎಂಬುವರು ಶಾಲಾ ವಿದ್ಯಾರ್ಥಿಯೋರ್ವನಿಗೆ ಅನಾರೋಗ್ಯವಾಗಿತ್ತು. ಕೂಡಲೇ ಮಾನವೀಯತೆ ಎನ್ನುವಂತೆ ಸಮೀಪದಲ್ಲಿದ್ದಂತ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಕರ್ತವ್ಯದಲ್ಲಿದ್ದಂತ ಡಾ.ಗಣೇಶ್ ಗೆ ಚಿಕಿತ್ಸೆ ನೀಡುವಂತೆ ಕೋರಿದ್ದಾರೆ. ಆದರೇ ಅನಾರೋಗ್ಯಕ್ಕೆ ಒಳಗಾಗಿದ್ದಂತ ವಿದ್ಯಾರ್ಥಿಗೆ ಚಿಕಿತ್ಸೆ ನೀಡಬೇಕಾಗಿದ್ದಂತ ಈ ವೈದ್ಯ ಮಾತ್ರ, ನಾನು ಬ್ಯುಸಿ ಇದ್ದೇನೆ. ಇನ್ನೂ ಲೇಟ್ ಆಗುತ್ತದೆ. ಹಾಗೆ, ಹೀಗೆ ಅಂತ ಕತೆ ಹೊಡೆದಿದ್ದಾರೆ.

ಶಾಲಾ ವಿದ್ಯಾರ್ಥಿಯು ಅನಾರೋಗ್ಯದಿಂದ ನರಳುತ್ತಿದ್ದ ಕಾರಣ, ಕೂಡಲೇ ಚಿಕಿತ್ಸೆ ಅಗತ್ಯವಿತ್ತು. ಇದನ್ನು ಸಾಗರದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪರಪ್ಪ ಅವರ ಗಮನಕ್ಕೆ ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್ ತಂದಿದ್ದಾರೆ. ಕೂಡಲೇ ವಿದ್ಯಾರ್ಥಿಗೆ ಚಿಕಿತ್ಸೆ ನೀಡುವಂತೆ ಡಾ.ಗಣೇಶ್ ಗೆ ಸೂಚಿಸಿದರೂ, ಮತ್ತೆ ಅದೇ ಕತೆ, ಕಾಯುವಂತೆ ಸೂಚನೆ. ಚಿಕಿತ್ಸೆ ನೀಡದೇ ದುರಹಂಕಾರದ ವರ್ತನೆ ತೋರಿದ್ದಾರೆ.

ವೈದ್ಯ ಡಾ.ಗಣೇಶ್ ಈಗ ಚಿಕಿತ್ಸೆ ಕೊಡ್ತಾರೆ. ಆಗ ಚಿಕಿತ್ಸೆ ಕೊಡ್ತಾರೆ ಅಂತ ಸುಮಾರು ಹೊತ್ತು ಕಾದರು ಚಿಕಿತ್ಸೆ ಕೊಟ್ಟೇ ಇಲ್ಲ. ವಿದ್ಯಾರ್ಥಿ ಅನಾರೋಗ್ಯದಿಂದ ನರಳಾಡುತ್ತಿದ್ದರೂ ಚಿಕಿತ್ಸೆ ಕೊಡದೇ ಸತಾಯಿಸಿದ ಕಾರಣ ಅಲ್ಲಿಂದ ಕರೆದೊಯ್ದು ಬೇರೆಡೆ ಸಕಾಲದಲ್ಲಿ ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್ ಚಿಕಿತ್ಸೆ ಕೊಡಿಸಿದ್ದಾರೆ. ಈ ಮೂಲಕ ಮಾನವೀಯತೆ ಮೆರೆದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಡೂರಾವ್ ಸಾಹೇಬ್ರೆ ಏನಿದು ನಿಮ್ಮ ಇಲಾಖೆ ವೈದ್ಯನ ದುರಹಂಕಾರ?

ಸಾಗರದ ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ.ಗಣೇಶ್ ದುರಹಂಕಾರದ ನಡೆ ಇದೇನು ಮೊದಲಲ್ಲ. ಇಲ್ಲಿಗೆ ಸಾಗರ, ಸಿದ್ದಾಪುರ, ಹೊಸನಗರ, ಶಿರಸಿಯಿಂದ ರೋಗಿಗಳು ಆಗಮಿಸಿದಾಗಲೂ ಇದೇ ನಡೆ ಅನ್ನೋದು ಜನರ ಮಾತು. ಸರ್ಕಾರಿ ಕೆಲಸ ಮಾಡೋದಕೆ ಇಷ್ಟ ಇಲ್ಲದೇ ಇದ್ದರೇ ಬಿಟ್ಟೋಗಲಿ. ಸಾವಿರಾರು ವೈದ್ಯರು ಸಾರ್ವಜನಿಕರ ಸೇವೆ ಮಾಡೋದಕ್ಕೆ ಸಿದ್ಧರಿದ್ದಾರೆ. ವೈದ್ಯ ಡಾ.ಗಣೇಶ್ ಅವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸುವಂತೆ ಜನರು ಆಗ್ರಹಿಸಿದ್ದಾರೆ.

ನಾಳೆ ಆಸ್ಪತ್ರೆ ಎದುರು ಪ್ರತಿಭಟನೆ

ಡಾ.ಗಣೇಶ್ ಅವರ ದುರಂಹಕಾರದ ನಡೆಯನ್ನು ಖಂಡಿಸಿ ನಾಳೆ ಸಾಗರದ ಸಾರ್ವಜನಿಕ ಆಸ್ಪತ್ರೆಯ ಎದುರು ವಿದ್ಯಾರ್ಥಿಗಳ ಜೊತೆಗೂಡಿ ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್ ಪ್ರತಿಭಟನೆ ನಡೆಸಲಿದ್ದಾರೆ. ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪರಪ್ಪ ಅವರ ಸೂಚನೆಗೂ ಸ್ಪಂದಿಸದೇ ಚಿಕಿತ್ಸೆ ನೀಡದೇ ಕಳುಹಿಸಿದಂತ ದುರಹಂಕಾರಿ ವೈದ್ಯ ಡಾ.ಗಣೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಲಿದ್ದಾರೆ.

ಶಾಸಕ ಬೇಳೂರು ಗೋಪಾಲಕೃಷ್ಣ, ಆರೋಗ್ಯ ರಕ್ಷಾ ಸಮಿತಿಯವರೇ ನಿಮ್ಮ ನಡೆ ಏನು?

ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಸಾರ್ವಜನಿಕ ಆಸ್ಪತ್ರೆಯ ಬಗ್ಗೆ ಎಲ್ಲಿಲ್ಲದ ಕಾಳಜಿ, ಅಷ್ಟೇ ಉತ್ತಮ ಚಿಕಿತ್ಸೆಯನ್ನು ರೋಗಿಗಳಿಗೆ ನೀಡುವ ಸೌಲಭ್ಯ ಕೂಡ ಕಲ್ಪಿಸಿದ್ದಾರೆ. ಶಾಸಕರಾದ ನಂತ್ರ ಆಸ್ಪತ್ರೆ ಈಗಾಗಲೇ ಹತ್ತಾರು ಬಾರಿ ಭೇಟಿ ನೀಡಿ, ರೋಗಿಗಳನ್ನು ಮಾತನಾಡಿಸಿ, ಆರೋಗ್ಯ ಸೇವೆಗೆ ಏನೆಲ್ಲಾ ಬೇಕೋ ಅದನ್ನು ವ್ಯವಸ್ಥೆ ಮಾಡಿದ್ದಾರೆ. ಜೊತೆಗೆ ವೈದ್ಯರು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆಯೂ ಸೂಚಿಸಿದ್ದಾರೆ.

ಹಾಗಾದ್ರೇ ಸಾರ್ವಜನಿಕ ಆಸ್ಪತ್ರೆಯಲ್ಲಿನ ಈ ದುರಹಂಕಾರಿ ವೈದ್ಯ ಡಾ.ಗಣೇಶ್ ಈ ನಡೆ ಗಮನಕ್ಕೆ ಬಂದಿಲ್ವ? ಆರೋಗ್ಯ ರಕ್ಷಾ ಸಮಿತಿಯವರಾದರೂ ಶಾಸಕರ ಗಮನಕ್ಕೆ ತಂದು ರೋಗಿಗಳಿಗೆ ಚಿಕಿತ್ಸೆ ನೀಡಲು ಸತಾಯಿಸುವ ವೈದ್ಯನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿಲ್ವ ಎಂಬುದೇ ಹಲವು ಅನುಮಾನಗಳಿಗೆ ಕಾರಣವಾಗಿದೆ. ಹಾಗಾದ್ರೇ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ನಡೆ ಏನು.? ಆರೋಗ್ಯ ರಕ್ಷಾ ಸಮಿತಿಯವರು ಏನು ಹೇಳ್ತಾರೆ ಈ ಬಗ್ಗೆ ಎಂಬುದನ್ನು ಕಾದು ನೋಡಬೇಕಿದೆ.

ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್ ಹೇಳಿದ್ದೇನು?

ವೈದ್ಯರು ಅಂದರೆ ದೇವರ ತರ ನೋಡುತ್ತೇವೆ. ಆದರೆ ದೇವರೇ ರಾಕ್ಷಸ ರೀತಿ ವರ್ತಿಸುತಿದ್ದಾರೆ. ವೈದ್ಯ ಗಣೇಶ್ ವಿರುದ್ದು ನಾಳೆ ವಿದ್ಯಾರ್ಥಿಗಳ ಜೊತೆಗೆ ಸರ್ಕಾರಿ ಆಸ್ಪತ್ರೆ ಎದುರು ರೋಗಿಗಳಿಗೆ ತೊಂದರೆ ಆಗದಂತೆ ಪ್ರತಿಭಟನೆ ನಡೆಸಲಾಗುತ್ತದೆ. ಡಾ.ಗಣೇಶ್ ಅವರನ್ನು ಅಮಾನತುಗೊಳಿಸಬೇಕು. ಇಲ್ಲದಿದ್ದರೇ ಟಿಹೆಚ್ಓ, ಡಿಹೆಚ್ಓ ಕಚೇರಿಯ ಮುಂದೆಯೂ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವರದಿ: ಉಮೇಶ್ ಮೊಗವೀರ, ಸಾಗರ

Share. Facebook Twitter LinkedIn WhatsApp Email

Related Posts

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM1 Min Read

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM1 Min Read

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM2 Mins Read
Recent News

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM
State News
KARNATAKA

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

By kannadanewsnow0904/05/2026 9:54 PM KARNATAKA 1 Min Read

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಈ ಚುನಾವಣಾ ಯಶಸ್ಸಿನಲ್ಲಿ ಕರ್ನಾಟಕದ ವಸತಿ…

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM

ಸಾಗರದ ಬೇಸೂರು ಅಣು ಸ್ಥಾವರಕ್ಕೆ ವಿರೋಧ: ದಾಖಲೆ ನೀಡದಿದ್ದರೆ ಕಾನೂನುಭಂಗ ಚಳವಳಿ- ತೀ.ನ.ಶ್ರೀನಿವಾಸ್ ಎಚ್ಚರಿಕೆ

04/05/2026 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.