ಬೆಂಗಳೂರು: ನಗರದ ಶಾಲೆಯೊಂದರ ಕಟ್ಟಡದ ಮೊದಲ ಮಹಡಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯೊಬ್ಬರು ಬಿದ್ದು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ಬೆಂಗಳೂರಿನ ಮಲ್ಲೇಶ್ವರಂನ 13ನೇ ಕ್ರಾಸಿನಲ್ಲಿರುವಂತ ಕರ್ನಾಟಕ ಪಬ್ಲಿಕ್ ಶಾಲೆಯ ಮೊದಲ ಮಹಡಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಬಿದ್ದು ಗಾಯಗೊಂಡಿದ್ದಾರೆ. ಕಟ್ಟಡದಿಂದ ಬಿದ್ದ ಕಾರಣ ವಿದ್ಯಾರ್ಥಿನಿಯ ತಲೆಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ.
ಶಾಲಾ ಕಟ್ಟಡದಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯನ್ನು ಸಮೀಪದ ಕೆಸಿ ಜನರಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ವಿಷಯ ತಿಳಿದು ಆಸ್ಪತ್ರೆಗೆ ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು ಭೇಟಿ ನೀಡಿ, ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದರು.
BIG NEWS: ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ಪೊಲೀಸರು ‘ಕೊಲೆ ಆರೋಪಿ’ಗಳನ್ನು ಬಿಟ್ಟು ಕಳುಹಿಸಿದ್ದು ಯಾಕೆ.?