ಬೆಂಗಳೂರು: ನಿನ್ನೆ ರಾಜ್ಯ ಸರ್ಕಾರದಿಂದ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಿಸಿ ಆದೇಶಿಸಲಾಗಿತ್ತು. ಆದ್ರೇ.. ಇಂದು ಈ ಆದೇಶವನ್ನು ರದ್ದು ಮಾಡಿಲಾಗಿದೆ. ಈ ಮೂಲಕ ಆನಂದ್ ಸಿಂಗ್ ಗೆ ಬಿಗ್ ಶಾಕ್ ನೀಡಲಾಗಿದೆ.
ರಾಜ್ಯ ಸರ್ಕಾರದಿಂದ ಕೊಪ್ಪಳ ಜಿಲ್ಲಾ ಉಸ್ತುವಾರಿಯಾಗಿದ್ದಂತ ಆನಂದ್ ಸಿಂಗ್ ಬದಲಾವಣೆ ಮಾಡಿ, ವಿಜಯನಗರ ಜಿಲ್ಲೆಗೆ ನೇಮಿಸಿ ನಿನ್ನೆ ಆದೇಶ ಹೊರಡಿಸಲಾಗಿತ್ತು. ಕೊಪ್ಪಳ ಜಿಲ್ಲೆಗೆ ಶಶಿಕಲಾ ಜೊಲ್ಲೆ ನೇಮಿಸಲಾಗಿತ್ತು.
ಆದ್ರೇ.. ಸ್ವಂತ ಜಿಲ್ಲೆಗೆ ಉಸ್ತುವಾರಿಗಳನ್ನು ನೇಮಕ ಮಾಡುವಂತಿಲ್ಲ ಎಂಬುದಾಗಿ ಬಿಜೆಪಿ ಹೈಕಮಾಂಡ್ ಖಡಕ್ ಸೂಚನೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ನಿನ್ನೆ ಹೊರಡಿಸಿದ್ದಂತ ಆದೇಶವನ್ನು ಇಂದು ರದ್ದು ಮಾಡಲಾಗಿದೆ.
ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಆದೇಶ ರದ್ದು ಮಾಡಲಾಗಿದ್ದು, ಇದೀಗ ವಿಜಯನಗರಕ್ಕೆ ಶಶಿಕಲಾ ಜೊಲ್ಲೆ, ಕೊಪ್ಪಳಕ್ಕೆ ಆನಂದ್ ಸಿಂಗ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮುಂದುವರೆಸಿ, ಆದೇಶಸಿಲಾಗಿದೆ.
BIG NEWS: ಸದ್ಯದಲ್ಲೇ SDPIನಂತಹ ಸಂಘಟನೆಗಳ ನಿಷೇಧಿಸುವ ಬಗ್ಗೆ ಸರ್ಕಾರ ಚರ್ಚಿಸಿ ಕ್ರಮ – ಗೃಹ ಸಚಿವ ಅರಗ ಜ್ಞಾನೇಂದ್ರ