Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೊಟ್ಟೆಯಲ್ಲಿ ಗ್ಯಾಸ್ ತಡೆಹಿಡಿದರೆ ಏನಾಗುತ್ತದೆ? ಮುಜುಗರಕ್ಕೀಡು ಮಾಡುವ ಇದನ್ನು ನಿಯಂತ್ರಿಸಲು ಇಲ್ಲಿದೆ ಸಲಹೆ

23/03/2026 7:17 AM

BIG NEWS : ಏಪ್ರಿಲ್ 1ರಿಂದ `ಪ್ಯಾನ್ ಕಾರ್ಡ್’ ಅರ್ಜಿ ನಿಯಮದಲ್ಲಿ ಮಹತ್ವದ ಬದಲಾವಣೆ: ಆಧಾರ್ ಜೊತೆಗೆ ಈ ದಾಖಲೆಗಳು ಕಡ್ಡಾಯ!

23/03/2026 7:15 AM

​’ನಮ್ಮ ನೆಲಕ್ಕೆ ಲಗ್ಗೆ ಇಟ್ಟವರಿಗಿಲ್ಲ ಪ್ರವೇಶ’: ಹಾರ್ಮುಜ್ ಜಲಸಂಧಿ ಸಂಚಾರದ ಬಗ್ಗೆ ಇರಾನ್ ಅಧ್ಯಕ್ಷರ ಖಡಕ್ ಎಚ್ಚರಿಕೆ

23/03/2026 7:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನಂತ್ ಅಂಬಾನಿ ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುವಿಗೆ ತಲಾ1 ಲಕ್ಷ ರೂ ವಿತರಣೆ
INDIA

ಅನಂತ್ ಅಂಬಾನಿ ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುವಿಗೆ ತಲಾ1 ಲಕ್ಷ ರೂ ವಿತರಣೆ

By kannadanewsnow0902/07/2024 6:42 PM

ಮುಂಬೈ : ಮುಕೇಶ್- ನೀತಾ ಅಂಬಾನಿ ದಂಪತಿಯ ಮಗ ಅನಂತ್ ಅಂಬಾನಿ ಅವರ ಮದುವೆ ಇದೇ ಜುಲೈ ಹನ್ನೆರಡನೇ ತಾರೀಕಿಗೆ ರಾಧಿಕಾ ಮರ್ಚೆಂಟ್ ಜೊತೆಗೆ ನಡೆಯಲಿದೆ. ಅದಕ್ಕೂ ಮುನ್ನ ಅಂಬಾನಿ ಕುಟುಂಬದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಂಬೈನಿಂದ 100 ಕಿಮೀ ದೂರದಲ್ಲಿರುವ ಪಾಲ್ಘರ್ ಪ್ರದೇಶದಲ್ಲಿನ ಐವತ್ತಕ್ಕೂ ಹೆಚ್ಚು ಜೋಡಿಗಳಿಗೆ, ಅದರಲ್ಲೂ ಆರ್ಥಿಕವಾಗಿ ಹಿಂದುಳಿದಂಥ ವಧು- ವರರಿಗೆ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಲಾಯಿತು.

ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ನಲ್ಲಿ ನಡೆದ ವಿವಾಹ ಸಮಾರಂಭವದಲ್ಲಿ ಈ ನೂತನ ದಂಪತಿಗಳ ಕುಟುಂಬದ ಪರವಾಗಿ ಸುಮಾರು 800 ಜನರು ಭಾಗವಹಿಸಿದ್ದರು. ಅನಂತ್- ರಾಧಿಕಾ ಮದುವೆಗೆ ಇದು ಆರಂಭಿಕ ಕಾರ್ಯಕ್ರಮವಾಗಿದ್ದು, ಮುಂದಿನ ಮದುವೆ ಋತುವಿನಲ್ಲಿ ದೇಶದಾದ್ಯಂತ ಈ ರೀತಿಯಾಗಿ ನೂರಕ್ಕೂ ಹೆಚ್ಚು ವಿವಾಹಗಳಿಗೆ ಅಂಬಾನಿ ಕುಟುಂಬದ ಬೆಂಬಲ ದೊರೆಯಲಿದೆ. ಈ ಬಗ್ಗೆ ಸಂಕಲ್ಪವನ್ನೇ ಮಾಡಿಕೊಂಡಿದ್ದಾರೆ.

ಅಂಬಾನಿ ಕುಟುಂಬವು ಈ ತನಕ ಅನುಸರಿಸಿಕೊಂಡು ಬಂದಿರುವ ಸರ್ವಕಾಲದಲ್ಲೂ ಮಾನ್ಯವಾದ ತತ್ವ ಏನೆಂದರೆ, ಮಾನವ ಸೇವೆಯೇ ಮಾಧವ ಸೇವೆ ಎಂಬುದು. ಅಂದರೆ ಮನುಷ್ಯರಿಗೆ ಮಾಡಿದಂಥ ಸೇವೆಯು ಆ ಭಗವಂತನಿಗೆ ಸೇವೆ ಮಾಡಿದಂತೆಯೇ ಸರಿ ಎಂಬುದನ್ನು ನಂಬಿಕೊಂಡು ಬಂದಿದೆ. ಈ ತತ್ವದ ಸ್ಫೂರ್ತಿಯ ಹಿನ್ನೆಲೆಯಲ್ಲಿಯೇ ತಮ್ಮ ಕುಟುಂಬದ ಯಾವುದೇ ಮುಖ್ಯ ಶುಭ ಸಮಾರಂಭಗಳಲ್ಲಿ ಇತರರಿಗೆ ಸೇವೆ ಒದಗಿಸುವ ಮೂಲಕ, ಸಮುದಾಯಕ್ಕೆ ಅನುಕೂಲ ಮಾಡಿಕೊಡುವ ಮೂಲಕ ಅಂಬಾನಿ ಕುಟುಂಬ ಜನ ಸೇವೆ ಮಾಡುತ್ತಾ ಬರುತ್ತಿದೆ.

ಅಂದ ಹಾಗೆ ಮುಂಬೈನಲ್ಲಿ ನಡೆದ ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಮತ್ತು ಮುಕೇಶ್ ಅಂಬಾನಿ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡರು ಮತ್ತು ನವ ವಿವಾಹಿತ ಜೋಡಿಗಳಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು, ಮತ್ತು ಈ ಮಂಗಳಕರ ಸಮಾರಂಭಕ್ಕೆ ವೈಯಕ್ತಿಕ ಸ್ಪರ್ಶವನ್ನೂ ಸೇರಿಸಿದರು.

ಇನ್ನು ಈ ಸಾಮೂಹಿಕ ವಿವಾಹ ಸಂದರ್ಭದಲ್ಲಿ ಪ್ರತಿ ಜೋಡಿಗೂ ಮಂಗಳಸೂತ್ರ, ಮದುವೆಯ ಉಂಗುರಗಳು, ಮೂಗುತಿ ಸೇರಿದಂತೆ ಚಿನ್ನಾಭರಗಳನ್ನು ನೀಡಲಾಯಿತು. ಜೊತೆಗೆ ಕಾಲುಂಗುರ, ಕಾಲ್ಗೆಜ್ಜೆಯಂಥ ಬೆಳ್ಳಿ ಆಭರಣಗಳನ್ನು ಸಹ ನೀಡಲಾಯಿತು. ಇದರ ಜತೆಗೆ ಪ್ರತಿ ವಧುವಿಗೆ ರೂ. 1.01 ಲಕ್ಷ (ಒಂದು ಲಕ್ಷದ ಒಂದು ಸಾವಿರ) ರೂಪಾಯಿಯನ್ನು ತವರು ಮನೆಯಿಂದ ನೀಡುವಂಥ ಸ್ತ್ರೀಧನದ ರೂಪದಲ್ಲಿ ಕೊಡಲಾಯಿತು. ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ, ಪ್ರತಿ ದಂಪತಿಗೂ ಒಂದು ವರ್ಷಕ್ಕೆ ಸಾಕಾಗುವಂಥ ದಿನಸಿ, ಗೃಹೋಪಯೋಗಿ ವಸ್ತುಗಳನ್ನು ಕೊಡಲಾಯಿತು. ಈ ಗೃಹೋಪಯೋಗಿ ವಸ್ತುಗಳಲ್ಲಿ 36 ಅಗತ್ಯ ವಸ್ತುಗಳು ಮತ್ತು ಪಾತ್ರೆಗಳು, ಗ್ಯಾಸ್ ಸ್ಟೌ, ಮಿಕ್ಸರ್ ಮತ್ತು ಫ್ಯಾನ್, ಹಾಗೆಯೇ ಹಾಸಿಗೆ ಮತ್ತು ದಿಂಬುಗಳು ಇದ್ದವು.

ಇನ್ನು ಆರಂಭದಲ್ಲಿಯೇ ತಿಳಿಸಿದಂತೆ, ವಧು-ವರರ ಕುಟುಂಬ ಸದಸ್ಯರು, ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಮತ್ತು ಸಮುದಾಯದ ಸದಸ್ಯರು ಸೇರಿದಂತೆ 800 ಕ್ಕೂ ಹೆಚ್ಚು ಜನರು ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು. ಸಮಾರಂಭದ ನಂತರ, ಹಾಜರಿದ್ದ ಎಲ್ಲರಿಗೂ ಭವ್ಯವಾದ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.

ವರ್ಲಿ ಬುಡಕಟ್ಟು ಜನಾಂಗದವರು ಪ್ರದರ್ಶಿಸಿದ ಸಾಂಪ್ರದಾಯಿಕ ತಾರ್ಪ ನೃತ್ಯವನ್ನು ಆಹ್ವಾನಿತರು ವೀಕ್ಷಿಸಿದರು. ಈ ಹಿಂದೆ ಕೂಡ ಕುಟುಂಬದಲ್ಲಿ ಮದುವೆ ನಡೆದ ಸಂದರ್ಭದಲ್ಲಿ ವಿವಿಧ ಸಮುದಾಯಗಳ ಜನರಿಗೆ ಮತ್ತು ಎನ್‌ಜಿಒಗಳ ಸಹಕಾರದೊಂದಿಗೆ ಅನ್ನ ದಾನ ಸೇವೆ ಮಾಡುತ್ತಾ ಬರುತ್ತಿದ್ದಾರೆ.

50 ಸಾವಿರ ಲಂಚ ಕೇಳಿದ ಅಧಿಕಾರಿಯನ್ನು ಸ್ಥಳದಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಸಸ್ಪೆಂಡ್

Watch Video: ‘ವಿಪಕ್ಷ ನಾಯಕ ರಾಹುಲ್ ಗಾಂಧಿ’ ಒಬ್ಬ ‘ಚೈಲ್ಡ್’ ಇದ್ದಂತೆ: ಪ್ರಧಾನಿ ಮೋದಿ | PM Modi

Share. Facebook Twitter LinkedIn WhatsApp Email

Related Posts

BIG NEWS : ಏಪ್ರಿಲ್ 1ರಿಂದ `ಪ್ಯಾನ್ ಕಾರ್ಡ್’ ಅರ್ಜಿ ನಿಯಮದಲ್ಲಿ ಮಹತ್ವದ ಬದಲಾವಣೆ: ಆಧಾರ್ ಜೊತೆಗೆ ಈ ದಾಖಲೆಗಳು ಕಡ್ಡಾಯ!

23/03/2026 7:15 AM1 Min Read

​’ನಮ್ಮ ನೆಲಕ್ಕೆ ಲಗ್ಗೆ ಇಟ್ಟವರಿಗಿಲ್ಲ ಪ್ರವೇಶ’: ಹಾರ್ಮುಜ್ ಜಲಸಂಧಿ ಸಂಚಾರದ ಬಗ್ಗೆ ಇರಾನ್ ಅಧ್ಯಕ್ಷರ ಖಡಕ್ ಎಚ್ಚರಿಕೆ

23/03/2026 7:12 AM1 Min Read

ಬ್ಯಾಂಕ್ ಗ್ರಾಹಕರೇ ಗಮನಿಸಿ : ಏಪ್ರಿಲ್ 1 ರಿಂದ ಹೊಸ `ATM’ ನಿಯಮಗಳು ಜಾರಿ !

23/03/2026 7:08 AM1 Min Read
Recent News

ಹೊಟ್ಟೆಯಲ್ಲಿ ಗ್ಯಾಸ್ ತಡೆಹಿಡಿದರೆ ಏನಾಗುತ್ತದೆ? ಮುಜುಗರಕ್ಕೀಡು ಮಾಡುವ ಇದನ್ನು ನಿಯಂತ್ರಿಸಲು ಇಲ್ಲಿದೆ ಸಲಹೆ

23/03/2026 7:17 AM

BIG NEWS : ಏಪ್ರಿಲ್ 1ರಿಂದ `ಪ್ಯಾನ್ ಕಾರ್ಡ್’ ಅರ್ಜಿ ನಿಯಮದಲ್ಲಿ ಮಹತ್ವದ ಬದಲಾವಣೆ: ಆಧಾರ್ ಜೊತೆಗೆ ಈ ದಾಖಲೆಗಳು ಕಡ್ಡಾಯ!

23/03/2026 7:15 AM

​’ನಮ್ಮ ನೆಲಕ್ಕೆ ಲಗ್ಗೆ ಇಟ್ಟವರಿಗಿಲ್ಲ ಪ್ರವೇಶ’: ಹಾರ್ಮುಜ್ ಜಲಸಂಧಿ ಸಂಚಾರದ ಬಗ್ಗೆ ಇರಾನ್ ಅಧ್ಯಕ್ಷರ ಖಡಕ್ ಎಚ್ಚರಿಕೆ

23/03/2026 7:12 AM

ಬ್ಯಾಂಕ್ ಗ್ರಾಹಕರೇ ಗಮನಿಸಿ : ಏಪ್ರಿಲ್ 1 ರಿಂದ ಹೊಸ `ATM’ ನಿಯಮಗಳು ಜಾರಿ !

23/03/2026 7:08 AM
State News
KARNATAKA

ಹೊಟ್ಟೆಯಲ್ಲಿ ಗ್ಯಾಸ್ ತಡೆಹಿಡಿದರೆ ಏನಾಗುತ್ತದೆ? ಮುಜುಗರಕ್ಕೀಡು ಮಾಡುವ ಇದನ್ನು ನಿಯಂತ್ರಿಸಲು ಇಲ್ಲಿದೆ ಸಲಹೆ

By kannadanewsnow5723/03/2026 7:17 AM KARNATAKA 2 Mins Read

ಹೊಟ್ಟೆಯಲ್ಲಿ ಗ್ಯಾಸ್ ಅಥವಾ ವಾಯು ಉತ್ಪತ್ತಿಯಾಗುವುದು ದೇಹದ ಒಂದು ನೈಸರ್ಗಿಕ ಪ್ರಕ್ರಿಯೆ. ಮಲಮೂತ್ರ ವಿಸರ್ಜನೆ ಅಥವಾ ಬೆವರಿನಂತೆ ಇದು ಕೂಡ…

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ ‘ಆಟೋ ಮ್ಯುಟೇಷನ್’ ಮೂಲಕವೇ ಖಾತೆ ಬದಲಾವಣೆ !

23/03/2026 6:50 AM

ನೀರಿನ ಬಾಟಲ್ ಮುಚ್ಚಳದ ಬಣ್ಣಗಳ ಹಿಂದಿದೆ ಅಚ್ಚರಿಯ ರಹಸ್ಯ! ಯಾವ ಬಣ್ಣದ ಅರ್ಥವೇನು ಗೊತ್ತಾ?

23/03/2026 6:30 AM

WEATHER UPDATE : ರಾಜ್ಯಾದ್ಯಂತ ಮಾ.29 ರವರೆಗೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

23/03/2026 6:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.