ಉತ್ತರಾಖಂಡ : ಉತ್ತರಾಖಂಡ ‘ರೆಸಾರ್ಟ್ ರಿಸೆಪ್ಶನಿಸ್ಟ್‘ ಅಂಕಿತಾ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಫಾರೆನ್ಸಿಕ್ ವರದಿಯಲ್ಲಿ ಅಚ್ಚರಿಯ ಸತ್ಯ ಹೊರಬಿದ್ದಿದೆ.
ಅಂಕಿತಾಳ ಡಿಎನ್ಎ ಪರೀಕ್ಷೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಅಥವಾ ಅತ್ಯಾಚಾರ ನಡೆದ ಬಗ್ಗೆ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂಬ ವಿಷಯವನ್ನು ವಿಧಿವಿಜ್ಞಾನ ತಂಡವು ತಿಳಿಸಿದೆ.
ಉತ್ತರಾಖಂಡದ ಪೊಲೀಸ್ ತಂಡ ಅಂಕಿತಾ ಅವರ ಸ್ವಾಪ್ ಅನ್ನು ಡಿಎನ್ಎ ಪರೀಕ್ಷೆಗಾಗಿ ಫಾರೆನ್ಸಿಕ್ ತಂಡಕ್ಕೆ ಕಳುಹಿಸಿತ್ತು. ಅಂಕಿತಾ ಅವರ ಸ್ವಾಪ್ನಲ್ಲಿ ಬೇರೆಯವರ ಡಿಎನ್ಎ ಪತ್ತೆಯಾಗಿಲ್ಲ ಎಂದು ತಿಳಿಸಿದೆ. ಈ ಪ್ರಕರಣದಲ್ಲಿ ಉತ್ತರಾಖಂಡ ಪೊಲೀಸರು ಶೀಘ್ರವೇ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ.
ಹೃಷಿಕೇಶದ ಚಿಲ್ಲಾ ಕಾಲುವೆಯಲ್ಲಿ ರಿಸೆಪ್ಷನಿಸ್ಟ್ ಅಂಕಿತಾ ಭಂಡಾರಿ ಅವರ ಮೃತದೇಹ ಪತ್ತೆಯಾಗಿತ್ತು, ಪ್ರಕರಣದ ಬೆನ್ನಲ್ಲೇ ಉತ್ತರಾಖಂಡದ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯ ಮತ್ತು ಭಂಡಾರಿ ಕೆಲಸ ಮಾಡುತ್ತಿದ್ದ ರೆಸಾರ್ಟ್ನ ಮಾಲೀಕ ಸೇರಿದಂತೆ 19 ವರ್ಷದ ಸ್ವಾಗತಕಾರ ಕಾಣೆಯಾಗಿದ್ದರು. ಅಂಕಿತಾ ಕೊಲೆ ಹಿಂದೆ ಭಾರೀ ಅನುಮಾನ ವ್ಯಕ್ತವಾಗಿತ್ತು, ಉತ್ತರಾಖಂಡದ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯ ಮೇಲೆ ಒತ್ತಡ ಹೇರಲಾಗಿತ್ತು, ತನ್ನ ರೆಸಾರ್ಟ್ನ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಪುಲ್ಕಿತ್ ಆರ್ಯ ಅವರೇ ಪೊಲೀಸರಿಗೆ ದೂರು ನೀಡಿದ್ದರು.
ರೆಸಾರ್ಟ್ ಮಾಲೀಕನಾಗಿದ್ದ ಪುಲ್ಕಿತ್ ಆರ್ಯ ತನ್ನ ರೆಸಾರ್ಟ್ನಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನು ಹತ್ಯೆ ಮಾಡಿದ್ದ. ಆ ಯುವತಿಯ ಮೃತದೇಹ ಕಾಲುವೆಯಲ್ಲಿ ಪತ್ತೆಯಾಗಿದ್ದ ಇದಾದ ಬಳಿಕ ಉತ್ತರಾಖಂಡದ ಆ ರೆಸಾರ್ಟ್ನ ಕೆಲವು ಭಾಗಗಳನ್ನು ಆಡಳಿತವು ಬುಲ್ಡೋಜರ್ನಿಂದ ಕೆಡವಿತ್ತು. ಬಳಿಕ ಆ ರೆಸಾರ್ಟ್ಗೆ ಸ್ಥಳೀಯರು ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರಹಾಕಿದ್ದರು. ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಈ ವಿಷಯವನ್ನು ಪರಿಶೀಲಿಸಲು ಉಪ ಪೊಲೀಸ್ ಮಹಾನಿರೀಕ್ಷಕ ಪಿ ರೇಣುಕಾ ದೇವಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸುವುದಾಗಿ ಘೋಷಿಸಿದ್ದರು.
BREAKING NEWS: ಶಿವಮೊಗ್ಗದಲ್ಲಿ ಒತ್ತುವರಿ ತೆರವಿಗೆ ಭಾರೀ ವಿರೋಧ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೂ ಯತ್ನ
BREAKING NEWS : ವಿಮಾನದ ಕ್ಯಾಬಿನ್’ನಲ್ಲಿ ಹೊಗೆ ; ‘ಸ್ಪೈಸ್ ಜೆಟ್’ಗೆ ಖಡಕ್ ಸೂಚನೆ ನೀಡಿದ ‘DGCA’