Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಚಿವ ರಾಮಲಿಂಗಾ ರೆಡ್ಡಿ ಇಚ್ಛಾ ಶಕ್ತಿ, ಬದ್ಧತೆಗೆ ಮತ್ತೊಂದು ಸೇರ್ಪಡೆ: ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆಗಳಿಗೆ ಮುನ್ನುಡಿ
KARNATAKA

ಸಚಿವ ರಾಮಲಿಂಗಾ ರೆಡ್ಡಿ ಇಚ್ಛಾ ಶಕ್ತಿ, ಬದ್ಧತೆಗೆ ಮತ್ತೊಂದು ಸೇರ್ಪಡೆ: ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆಗಳಿಗೆ ಮುನ್ನುಡಿ

By kannadanewsnow0929/10/2025 5:37 PM

ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ಅವರ ಇಚ್ಛಾ ಶಕ್ತಿ, ಬದ್ಧತೆಗೆ ಮತ್ತೊಂದು ಸೇರ್ಪಡೆಗೊಂಡಿದೆ. ಅದರಲ್ಲೂ ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆಗಳಿಗೆ ಮುನ್ನುಡಿಯನ್ನು ಬರೆದಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಮತ್ತು ಸಿಬ್ಬಂದಿಗಳ ಮಕ್ಕಳಿಗೆ ಇದುವರೆಗೂ ಯಾವುದೇ ರೀತಿಯ ವಿದ್ಯಾರ್ಥಿ ಪ್ರೋತ್ಸಾಹ ಧನ ಯೋಜನೆ ಜಾರಿಯಲ್ಲಿರಲಿಲ್ಲ.ದಿನಾಂಕ:27.10.2023 ಈ ಬಗ್ಗೆ ಆದೇಶ ಮಾಡಿ ಯೋಜನೆ ಜಾರಿಗೆ ತರಲಾಗಿದೆ ಎಂದಿದ್ದಾರೆ.

ಈ‌‌ ಕೆಳಕಂಡ ಕೋರ್ಸ್ ಗಳಿಗೆ ವಿದ್ಯಾರ್ಥಿ ಪ್ರೋತ್ಸಾಹ ಧನ ನೀಡಲು ಪ್ರಾರಂಭಿಸಲಾಯಿತು ಎಂದಿದ್ದಾರೆ.

ಪಿ.ಯು.ಸಿ ರೂ.5,000
ಪದವಿ ರೂ.7,000
ಸ್ನಾತಕೋತ್ತರ ಪದವಿ ರೂ.15,000
ಇಂಜಿನಿಯರಿಂಗ್ ರೂ.25,000
ವೈದ್ಯಕೀಯ/ ಡೆಂಟಲ್ ರೂ.50,000
ಇತರೆ ವೈದ್ಯಕೀಯ ರೂ.25,000
ವಿದೇಶ ವ್ಯಾಸಂಗ ರೂ.1,00,000

ಇಲ್ಲಿಯವರೆಗೆ ಪ್ರೋತ್ಸಾಹಧನ 254 ವಿದ್ಯಾರ್ಥಿಗಳಿಗೆ ರೂ.38.38 ಲಕ್ಷ ಪಾವತಿಸಲಾಗಿದ್ದು, ಇನ್ನು 19 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಅರ್ಚಕರ ಮಕ್ಕಳು 230 ,ನೌಕರರ ಮಕ್ಕಳು 24  ಸೇರಿವೆ. ವಿಶೇಷವೆಂದರೆ 5 ವಿದ್ಯಾರ್ಥಿಗಳಿಗೆ ತಲಾ 1 ಲಕ್ಷದಂತೆ 5 ಲಕ್ಷ ವಿದೇಶ ವ್ಯಾಸಂಗಕ್ಕೆ ಮಂಜೂರು ಮಾಡಲಾಗಿದೆ. ಐವರೂ ಕೂಡ ಅರ್ಚಕರ ಮಕ್ಕಳು ಎಂದು ಮಾಹಿತಿ ನೀಡಿದ್ದಾರೆ.

ಮುಂದುವರೆದು, ಮುಜರಾಯಿ ಇಲಾಖೆಯ ಅರ್ಚಕರು/ಸಿಬ್ಬಂದಿಗಳು ಮೃತಪಟ್ಟಲ್ಲಿ ಯಾವುದೇ ಮರಣಾನಂತರ ಉಪಧನದ ವ್ಯವಸ್ಥೆ ಇರಲಿಲ್ಲ. ಈ ಬಗ್ಗೆ ಹೊಸ ಆದೇಶವನ್ನು ದಿನಾಂಕ:27.10.2023 ಹೊರಡಿಸಿ, ಈ ಪ್ರಕರಣಗಳಲ್ಲಿ ಮೃತಾವಲಂಬಿತರ ಕುಟುಂಬಕ್ಕೆ ರೂ.2 ಲಕ್ಷ ಪಾವತಿಸಲು ಕ್ರಮ‌ ತೆಗೆದುಕೊಳ್ಳಲಾಯಿತು.ಅದರಂತೆ ಇಲ್ಲಿಯವರೆಗೆ 28 ಮೃತ ಕುಟುಂಬಗಳಿಗೆ ತಲಾ ರೂ.2 ಲಕ್ಷಗಳಂತೆ ರೂ.56 ಲಕ್ಷಗಳನ್ನು ಪಾವತಿ ಮಾಡಲಾಗಿದೆ. ಜಾತಿ ಜನಗಣತಿ ಸಮೀಕ್ಷೆಯ ಕಾರಣ ಸಿಬ್ಬಂದಿಗಳ ಅಲಭ್ಯತೆಯಿಂದಾಗಿ ಸ್ವೀಕತವಾಗಿರುವ ಉಳಿದ 39 ಅರ್ಜಿಗಳನ್ನು ನವೆಂಬರ್ ಮೊದಲನೇ ವಾರದಲ್ಲಿ ಇತ್ಯರ್ಥಪಡಿಸಿ ಅವಲಂಬಿತರಿಗೆ ಚೆಕ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ಭಾರತ್‌ ಗೌರವ್ ಯೋಜನೆ ಅಡಿಯಲ್ಲಿ ಯಾತ್ರಾ ವ್ಯವಸ್ಥೆ:

 ಭಾರತ್‌ ಗೌರವ್ ಯೋಜನೆ ಅಡಿಯಲ್ಲಿ ಇಲಾಖೆ ವತಿಯಿಂದ ಕೈಗೊಳ್ಳಲಾಗುವ ಕಾಶೀ-ಗಯಾ-ಆಯೋದ್ಯೆ ದರ್ಶನ, ದಕ್ಷಿಣ ಕೇತ್ರ ಯಾತ್ರೆ, ದ್ವಾರಕಯಾತ್ರೆಗಳಿಗೆ ದಿನಾಂಕ 22.01.2024 ರಿಂದ ಅರ್ಚಕರ ಹಾಗೂ ಅವರ ಕುಟುಂಬದ ಒಬ್ಬರು ಸದಸ್ಯರು ಭಾಗವಹಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದ್ದು, ವರ್ಷದಲ್ಲಿ ಒಟ್ಟು 2,400 ಜನರಿಗೆ ಉಚಿತ ಯಾತ್ರೆ ಸೌಲಭ್ಯ ಕಲ್ಪಿಸಲಾಗಿದೆ. ಇದಕ್ಕೆ ವಾರ್ಷಿಕ ರೂ.8.00 ಕೋಟಿ ವೆಚ್ಚವನ್ನು ಭರಿಸಲಾಗಿದೆ.

2004 ರಿಂದ ಸ್ಥಗಿತಕೊಂಡಿದ್ದ ಘಟಿಕೋತ್ಸವವನ್ನು ಪುನಃ ಪ್ರಾರಂಭಿಸಿ‌ ಒಂದೇ ವರ್ಷದಲ್ಲಿ ಅಂದರೆ 2025 ರಲ್ಲಿ ಒಟ್ಟು 4600 ಅರ್ಚಕರುಗಳಿಗೆ ಪ್ರಮಾ‌ಣ ಪತ್ರ ಪ್ರದಾನ ಮಾಡಲಾಗಿದೆ. (ಮೈಸೂರಿನ ಸಮಾರಂಭದಲ್ಲಿ 2000 ಅರ್ಚಕರಿಗೆ, ಬೆಂಗಳೂರಿನಲ್ಲಿ 2600) ಮತ್ತು ಪ್ರಸಕ್ತ ವರ್ಷದ ಪ್ರಮಾಣ ಪತ್ರವನ್ನು ಡಿಸೆಂಬರ್ ನಲ್ಲಿ‌ 1000 ಅರ್ಚಕರಿಗೆ ನೀಡಲಾಗುವುದು.

ಮುಜರಾಯಿ ಇಲಾಖೆ ವ್ಯಾಪ್ತಿಯ ಅರ್ಚಕರು/ ಸಿಬ್ಬಂದಿಗಳ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ನೀಡುವ ಪ್ರಕ್ರಿಯೆ ಮುಂದುವರೆದ ಭಾಗವಾಗಿ ಅರ್ಜಿಗಳನ್ನು ಸ್ವೀಕರಿಸಲು ನವೆಂಬರ್ 1 ರಿಂದ‌ ಡಿಸೆಂಬರ್ 31 , 2025 ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಯೋಜನೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳುವಂತೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಕೋರಿದ್ದಾರೆ.

ಕರ್ನಾಟಕದಲ್ಲಿ ‘ಜಿಯೋ’ಗೆ 2.95 ಲಕ್ಷ ಹೊಸ ಚಂದಾದಾರ ಸೇರ್ಪಡೆ: ಟ್ರಾಯ್ ವರದಿ | Jio User

BIG ALERT : ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಕಲಿ `ENO’ : ಅಸಲಿ ಯಾವುದು ಅಂತ ಜಸ್ಟ್ ಹೀಗೆ ಕಂಡುಹಿಡಿಯಿರಿ.!

Share. Facebook Twitter LinkedIn WhatsApp Email

Related Posts

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

16/02/2026 9:19 PM1 Min Read

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM1 Min Read

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM1 Min Read
Recent News

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM

ನಿಮ್ಗೆ ಗೊತ್ತಾ.? ‘ಎಂ.ಎಸ್ ಧೋನಿ’ಗೆ ಪ್ರತಿ ತಿಂಗಳು 70,000 ರೂ. ಪಿಂಚಣಿ ; ‘BCCI’ ನೀಡುವ ನಿವೃತ್ತಿ ಸೌಲಭ್ಯಗಳಿವು.!

16/02/2026 9:42 PM
State News
KARNATAKA

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

By kannadanewsnow0916/02/2026 9:19 PM KARNATAKA 1 Min Read

ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ…

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ತಪ್ಪದೇ ಹೀಗೆ ಮಾಡಿ, ನಿಮ್ಮ ಸಮಸ್ಯೆಗಳೆಲ್ಲ ದೂರ ಗ್ಯಾರಂಟಿ

16/02/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.