ಬೆಂಗಳೂರು : ಬೆಂಗಳೂರಿನಲ್ಲಿ ಹೊರ ರಾಜ್ಯದವರ ದಬ್ಬಾಳಿಕೆ ಮುಂದುವರೆದಿದ್ದು ಇತ್ತೀಚಿಗೆ ಬ್ಯಾಂಕ್ ಸಿಬ್ಬಂದಿ ಒಬ್ಬಳು ನಾನು ಕನ್ನಡ ಮಾತಾಡಲ್ಲ ಅಂತ ಉದ್ಧಟತನ ತೋರಿದಳು ಬಳಿಕ ಕ್ಷಮೆ ಕೂಡ ಹಾಕಿಸಿದಳು. ಇದೀಗ ಬೆಂಗಳೂರಿನಲ್ಲಿ ಸ್ಕೂಟಿಗೆ ಆಟೋ ಟಚ್ ಆಗಿದ್ದಕ್ಕೆ ಹೊರ ರಾಜ್ಯದ ಯುವತಿ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದಿದ್ದಾಳೆ.
ಹೌದು ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ. ಹೊರರಾಜ್ಯದ ಯುವತಿಯಿಂದ ಇದೀಗ ಅತೀರೆಕದ ವರ್ತನೆ ನಡೆದಿದೆ. ಬೆಂಗಳೂರಿನ ಬೆಳ್ಳಂದೂರು ವೃತ್ತದಲ್ಲಿ ಈ ಒಂದು ಘಟನೆ ನಡೆದಿದೆ. ಸ್ಕೂಟಿಗೆ ಆಟೋ ಟಚ್ ಆಗುತ್ತಿದ್ದಂತೆ ಚಾಲಕ ಮತ್ತು ಯುವತಿಯ ನಡುವೆ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಆಟೋ ಚಾಲಕನಿಗೆ ಯುವತಿ ಚಪ್ಪಲಿಯಿಂದ ಹೊಡೆದಿದ್ದಾಳೆ. ಸದ್ಯ ಆಟೋ ಚಾಲಕ ಮತ್ತು ಯುವತಿ ಠಾಣೆಗೆ ತೆರಳಿದ್ದಾರೆ.