ಬೆಳಗಾವಿ : ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ನಿನ್ನೆ ಒಟ್ಟು 28 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿದ್ದವು. ಇದರ ಬೆನ್ನಲ್ಲೇ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಈ ಕುರಿತು ಅಧಿಕಾರಿಗಳಿಗೆ ತನಿಖೆಗೆ ಆದೇಶ ನೀಡಿದ್ದರು.
ನಿನ್ನೆ ತಾನೆ ಈ ಒಂದು ಘಟನೆ ನಡೆದಿದ್ದು ಇದೀಗ ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ. ಹೌದು ಬೆಳಗಾವಿಯ ಕಿತ್ತೂರು ರಾಣಿ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಸಾವನಪ್ಪಿದೆ ಹಾಗಾಗಿ ಕೃಷ್ಣಮೂರ್ಗಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ನಿನ್ನೆ ಸಾವನಪ್ಪಿದ ಕೃಷ್ಣಮೃಗಗಳನ್ನು ಇಂದು ಸಾಮೂಹಿಕವಾಗಿ ಅಂತ್ಯಕ್ರಿಯೆ ಮಾಡಲಾಯಿತು.
ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ. ಇನ್ನುಳಿದ 9 ಕೃಷ್ಣಮೃಗಗಳಿಗೆ ಆರೈಕೆ ಮುಂದುವರೆದಿದೆ. ಕಿರು ಮೃಗಾಲಯದಲ್ಲಿ ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ನವೆಂಬರ್ 13ರಂದು 8 ಕೃಷ್ಣ ಮೃಗಗಳು ಮೃತಪಟ್ಟಿದ್ದವು.
ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃಗಾಲಯಗಳ ಸದಸ್ಯ ಕಾರ್ಯದರ್ಶಿ ಸುನಿಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಇಂದು ಬೆಳಿಗ್ಗೆ ವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ, ಗಳಲೇ ರೋಗದಿಂದ ಕೃಷ್ಣ ಮೃಗಗಳು ಮೃತಪಟ್ಟಿರುವ ಶಂಕೆ ಇದೆ ಮೃಗಾಲಯ ಪರಿಶೀಲನೆ ನಡೆದಿದ್ದು ಸಿಬ್ಬಂದಿಗಳ ನಿರ್ಲಕ್ಷ ಕಂಡು ಬಂದಿಲ್ಲ 8 ಕೃಷ್ಣ ಮೃಗಗಳು ಮೃತಪಟ್ಟ ಬಳಿಕ ಮುಂಜಾಗ್ರತ ಕ್ರಮ ಕೈಗೊಂಡಿದ್ದೇವೆ. ಎಲ್ಲಿಯಾದರು ತಪ್ಪು ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಮೃಗಾಲಯಗಳ ಸದಸ್ಯ ಕಾರ್ಯದರ್ಶಿ ಸುನಿಲ್ ಹೇಳಿಕೆ ನೀಡಿದರು.








