ರಾಯಚೂರು: ದಿನೇ ದಿನೇ ರಾಜ್ಯದಲ್ಲಿ ಬಿರು ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಜನ, ಜಾನುವಾರು ಬಸವಳಿದು ಹೋಗುತ್ತಿದ್ದಾರೆ. ಇಂದು ರಾಜ್ಯದಲ್ಲಿ ಬಿರು ಬಿಸಿಲಿನ ತಾಪಕ್ಕೆ ರೈತನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿರೋ ಘಟನೆ ರಾಯಚೂರಲ್ಲಿ ನಡೆದಿದೆ.
ರಾಯಚೂರು ತಾಲೂಕಿನ ಜಾಲಿಬೆಂಚಿ ಗ್ರಾಮದ ಹನುಮಂತು(45) ಎಂಬ ರೈತ, ಹೊಲದಲ್ಲಿ ಕೆಲಸಕ್ಕೆಂದು ತೆರಳಿದ್ದರು. ಹೊಲದಿಂದ ಬಣವೆ ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ ಆದ ಬಳಿಕ, ನೀರು ಕುಡಿಯುತ್ತಿದ್ದಂತೆ ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ.
ರೈತ ಹನುಮಂತು ಬಿಸಿಲ ತಾಪಕ್ಕೆ ಬಸವಳಿದು ಕುಸಿದು ಬಿದ್ದು ಸಾವನ್ನಪ್ಪಿರೋದಾಗಿ ಹೇಳಲಾಗುತ್ತಿದೆ. ಈ ಹಠಾತ್ ರೈತ ಹನುಮಂತು ಸಾವಿನಿಂದಾಗಿ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಅಲ್ಲದೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂತ್ರಿಗಳೆ ನಿಮ್ಮ ಒಂದು ವರ್ಷದ ಸಾಧನೆ ಏನು?: ಬಸವರಾಜ ಬೊಮ್ಮಾಯಿ ಪ್ರಶ್ನೆ