Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಜೂ.6ರವರೆಗೆ ಮುಂಬೈ ದಾಳಿಯ ಆರೋಪಿ ತಹವೂರ್ ರಾಣಾ ನ್ಯಾಯಾಂಗ ಬಂಧನ, ತಿಹಾರ್ ಜೈಲಿಗೆ ಶಿಫ್ಟ್

09/05/2025 6:45 PM

GOOD NEWS: UGC, ICAR, AICTE ವೇತನದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ | DA Hike

09/05/2025 6:39 PM

BREAKING: ಪಾಕಿಸ್ತಾನದ ಶೆಲ್ ದಾಳಿಗೆ ಪೂಂಚ್‌ನಲ್ಲಿ ಇಬ್ಬರು ವಿದ್ಯಾರ್ಥಿಗಳು ಬಲಿ: ವಿದೇಶಾಂಗ ಸಚಿವಾಲಯ

09/05/2025 6:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘SSLC, ಉನ್ನತ ಶಿಕ್ಷಣ ವ್ಯಾಸಂಗ’ದ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್
KARNATAKA

ರಾಜ್ಯದ ‘SSLC, ಉನ್ನತ ಶಿಕ್ಷಣ ವ್ಯಾಸಂಗ’ದ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

By kannadanewsnow0910/02/2024 4:39 PM

ಶಿವಮೊಗ್ಗ: ಮಕ್ಕಳ ಭವಿಷ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಶೈಕ್ಷಣಿಕ ಸಾಲಿನಿಂದಲೇ ಅನ್ವಯಗೊಳ್ಳುವಂತೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ.ಮತ್ತು ಉನ್ನತ ಶಿಕ್ಷಣ ಹಾಗೂ ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿಶೇಷ ಕಲಿಕಾ ತರಗತಿಗಳನ್ನು ಸರ್ಕಾರದ ವತಿಯಿಂದಲೇ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ತೀರ್ಥಹಳ್ಳಿಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ತೀರ್ಥಹಳ್ಳಿ, ಪಟ್ಟಣ ಪಂಚಾಯಿತಿ ತೀರ್ಥಹಳ್ಳಿ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಈ (ಕ್ರಾಶ್ ಕೋರ್ಸ್) ವಿಶೇಷ ತರಬೇತಿ ತರಗತಿಗಳಿಂದಾಗಿ ಜನಸಾಮಾನ್ಯ ಕುಟುಂಬದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅನುಕೂ¯ವಾಗಲಿದೆ ಅಲ್ಲದೆ ಅವರ ಕುಟುಂಬದ ಮುಖ್ಯಸ್ಥರಿಗೆ ಆರ್ಥಿಕವಾಗಿ ಸಹಕಾರಿಯಾಗಲಿದೆ ಎಂದರು.

ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದವರ ಫಲಾನುಭವಿಗಳ ಸಮಾವೇಶ ಮಾತ್ರವಲ್ಲ, ಇದು ಸೌಲಭ್ಯ ವಂಚಿತರಿಗೆ ಸೌಲಭ್ಯ ಒದಗಿಸುವಲ್ಲಿಯೂ ಈ ವೇದಿಕೆ ನಿರ್ಮಾಣಗೊಂಡಿದ್ದು, ಸೌಲಭ್ಯ ವಂಚಿತ ಫಲಾನುಭವಿಗಳು ಸಂಬಂಧಿಸಿದ ಇಲಾಖಾ ಅಧಿಕಾರಿಗಳನ್ನು ಇಲ್ಲಿಯೇ ಸಂಪರ್ಕಿಸಿ, ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಸಮಸ್ಯೆಗಳು ಎದುರಾದಲ್ಲಿ ಸ್ಥಳದಲ್ಲಿಯೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿದೆ. ಈಗಾಗಲೇ ಸೌಲಭ್ಯ ಪಡೆದ ಫಲಾನುಭವಿಗಳು ಪಕ್ಷಾತೀತವಾಗಿ ಅರ್ಹರನ್ನು ಗುರುತಿಸಿ ಸೌಲಭ್ಯ ದೊರೆಕಿಸಿಕೊಡಲು ಮುಂದಾಗಬೇಕೆಂದು ಅವರು ಮನವಿ ಮಾಡಿದರು.

ಸರ್ಕಾರವು ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ನುಡಿದಂತೆ ನಡೆದು, ಮುಂದೆ ಸಾಗುತ್ತಿದೆ. ಮುಂದೆಯೂ ಈ ಯೋಜನೆಗಳು ಜಾರಿಯಲ್ಲಿರಲಿವೆ ಎಂದ ಅವರು, ಪ್ರಸಕ್ತ ಸರ್ಕಾರವು ಪ್ರತಿ ಮನೆಯ ಕುಟುಂಬದ ಸದಸ್ಯರಲ್ಲಿ ಒಬ್ಬರಾಗಿದ್ದು, ಜನರ ನೋವು-ನಲಿವುಗಳಿಗೆ ದ್ವನಿಯಾಗಲಿದೆ. ಅಲ್ಲದೇ ನೆರವಿಗೆ ಧಾವಿಸಲಿದೆ ಎಂದರು.

ಮಾಜಿ ಮುಖ್ಯಮಂತ್ರಿಗಳಾಗಿದ್ದ ದಿ. ಎಸ್.ಬಂಗಾರಪ್ಪ ಅವರ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ್ದ ರೈತರ ಹೊಲಗಳಿಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆ ದಶಕಗಳ ನಂತರವೂ ಜಾರಿಯಲ್ಲಿರುವುದು ಹರ್ಷದ ಸಂಗತಿಯಾಗಿದೆ. ಅವರ ಮಾರ್ಗದರ್ಶನದಲ್ಲಿಯೇ ನಾವೂ ಕೂಡ ಆಡಳಿತ ನಡೆಸಲು ಮುಂದಾಗಿದ್ದೇವೆ. ವಿಶೇಷವಾಗಿ ಅಂದಿನ ಪ್ರಣಾಳಿಕೆ ಸಮಿತಿಯ ಸದಸ್ಯನಾಗಿದ್ದೆ. ಪ್ರಣಾಳಿಕೆ ಇಂದು ಅನುಷ್ಠಾನಗೊಂಡಿದೆ ಎಂಬ ಹೆಮ್ಮೆ ನನಗಿದೆ ಎಂದರು.

ರಾಜ್ಯದ ಪ್ರತಿ ಮನೆಮನೆಗಳಿಗೆ ಉಚಿತ ಬೆಳಕು ನೀಡಿದ ಕೀರ್ತಿ ನಮ್ಮದು. ಯುವನಿಧಿ ಯೋಜನೆಯಡಿ ಯುವಕರು ತಮ್ಮ ಭವಿಷ್ಯದ ಬದುಕನ್ನು ರೂಪಿಸಿಕೊಳ್ಳುವಲ್ಲಿ ಸರ್ಕಾರ ನೀಡುವ ಸಹಾಯಧನ ಉಪಯುಕ್ತವಾಗಿರುವುದು ನಿರುದ್ಯೋಗಿಗಳಾಗಿ ವಿದ್ಯಾವಂತರ ಎಲ್ಲರ ಮುಖದಲ್ಲಿ ಮಂದಹಾಸ ಮೂಡಿಸಿರುವುದನ್ನು ಕಾಣಬಹುದಾಗಿದೆ ಎಂದರು.

ಈ ಎಲ್ಲಾ  ಯೋಜನೆಗಳ ಸಮರ್ಪಕ ಅನುಷ್ಠಾನದಿಂದ ಹೃದಯ ತುಂಬಿ ಬರುತ್ತದೆ. ಹೆಮ್ಮೆ ಎನಿಸುತ್ತದೆ. ವಹಿಸಿಕೊಂಡ ಖಾತೆ ಸವಾಲಿನದ್ದಾಗಿದ್ದರೂ ಅದನ್ನು ಜಾಗ್ರತೆಯಾಗಿ ನಿರ್ವಹಿಸುವ ಭರವಸೆಯಿಂದ ಹಿರಿಯರು ವಹಿಸಿದ ಅಧಿಕಾರವನ್ನು ಸದುಪಯೋಗಪಡಿಸಿಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆ ಎಂದರು.

ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಮಕ್ಕಳಿಗೆ ಸಮವಸ್ತ್ರ, ಶೂ, ಪಠ್ಯಪುಸ್ತಕ, ಮೊಟ್ಟೆ, ಬಾಳೆಹಣ್ಣು, ಚುಕ್ಕಿ, ಹಾಲು ಜೊತೆಗೆ ಪೌಷ್ಠಿಕ ಆಹಾರ ರಾಗಿ ಮಾಲ್ಟ್‍ನ್ನು ನೀಡಲು ಕ್ರಮವಹಿಸಲಾಗುತ್ತಿದೆ ಎಂದ ಅವರು, ಎಸ್.ಎಸ್.ಎಲ್.ಸಿ ಮತ್ತು ಪಿ.ಯು. ಅನುತ್ತೀರ್ಣ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಶಿಕ್ಷಣ ಪಡೆದು ಮುಂದುವರೆಯಲು ಅನುಕೂಲವಾಗುವಂತೆ ಮೂರು ಬಾರಿ ಪೂರಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದರಿಂದಾಗಿ ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿಯುತ್ತಿದ್ದ ಸುಮಾರು 40,000ಮಕ್ಕಳು ಶಿಕ್ಷಣದ ಮುಖ್ಯವಾಹಿನಿಯಲ್ಲಿ ಮುಂದುವರೆಯುತ್ತಿದ್ದಾರೆ ಎಂದರು.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರನ್ನು ಒದಗಿಸಲು ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈ ಅವಧಿಯಲ್ಲಿ ಅಲ್ಲಿನ ಶಿಕ್ಷಕರು ಮಕ್ಕಳಿಗೆ ವಿಶೇಷ ಕಲಿಕಾ ತರಗತಿಗಳನ್ನು ಮಾಡುವಂತೆ ಮನವಿ ಮಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ನೇಮಕವಾಗಿರುವ ಶಿಕ್ಷಕರೆಲ್ಲರೂ ಪ್ರತಿಭಾವಂತರೇ ಇರುವುದು ಮಕ್ಕಳ ಕಲಿಕೆಗೆ ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದಲ್ಲಿಯೇ ಮೊದಲ ಬಾರಿಗೆ ಜನಸಾಮಾನ್ಯರಿಗೆ ಅನುಕೂಲವಾಗುವಂತೆ, ಅವರ ಆಶೋತ್ತರಗಳಿಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವುದು ವಿಶೇಷವಾಗಿದೆ. ಇಂದಿನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸುವುದರ ಜೊತೆಗೆ, ಸೌಲಭ್ಯ ವಂಚಿತರನ್ನು ಗುರುತಿಸಿ, ಸೌಲಭ್ಯ ಒದಗಿಸುವುದಾಗಿದೆ. ಈಗಾಗಲೇ ಜಿಲ್ಲೆಯ ಲಕ್ಷಾಂತರ ಜನ ವಿವಿಧ ಗ್ಯಾರಂಟಿ ಯೋಜನೆಗಳ ಲಾಭ ಪಡೆದಿರುವುದು ಪ್ರತ್ಯಕ್ಷವಾಗಿ ಕಾಣಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಗೀತಾ ರಮೇಶ್, ಉಪಾಧ್ಯಕ್ಷ ರಹಮತ್‍ಉಲ್ಲಾ ಅಸಾದಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಕಾರ್ಮಿಕ ಅಧಿಕಾರಿ ಶ್ರೀಮತಿ ಸುಮಾ, ಉದ್ಯೋಗಾಧಿಕಾರಿ ಖಲಂದರ್‍ಖಾನ್, ತಾ.ಕಾರ್ಯನಿರ್ವಹಣಾಧಿಕಾರಿ, ತಹಶೀಲ್ದಾರರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಇದೇ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಅರ್ಹ ಫಲಾನುಭವಿಗಳಿಗೆ ಲ್ಯಾಪ್‍ಟಾಪ್ ವಿತರಿಸಲಾಯಿತು.

* ಹಸಿದ ಒಡಲಿಗೆ ಅನ್ನ ನೀಡುವ ಸರ್ಕಾರದ ಅನ್ನಭಾಗ್ಯ ಯೋಜನೆ ಬಡಜನರ ಪಾಲಿಗೆ ಸಂಜೀವಿನಿಯಾಗಿದೆ. –ಕಲಾವತಿ,, ಗೃಹಣಿ, ತೀರ್ಥಹಳ್ಳಿ.

* ಉದರ ನಿಮಿತ್ತ ಕೆಲಸಕ್ಕಾಗಿ ಊರಿಂದೂರಿಗೆ ಓಡಾಡುತ್ತಿದ್ದ ನನಗೆ ಸರ್ಕಾರದ ಶಕ್ತಿ ಯೋಜನೆಯ ಅನುಷ್ಟಾನದಿಂದಾಗಿ ಪ್ರತಿ ಮಾಹೆ ರೂ.2,000/-ಗಳ ಉಳಿತಾಯವಾಗುತ್ತಿದೆ. ಸರ್ಕಾರಕ್ಕೆ ಅಭಿನಂದನೆಗಳು.   _ ಖಾಸಗಿ ಕಂಪನಿಯ ಉದ್ಯೋಗಿ, ತೀರ್ಥಹಳ್ಳಿ.

* ಉದ್ಯೋಗರಹಿತ ಮನೆಯೊಡತಿಗೆ ಗೃಹ ನಿರ್ವಹಣೆ ಮಾಡುವಲ್ಲಿ ಗೃಹಲಕ್ಷ್ಮೀ ಯೋಜನೆಯಿಂದಾಗಿ ರೂ.2,000/- ದೊರೆಯುತ್ತಿದೆ. ಸಹಸ್ರಾರು ಸಂಖ್ಯೆಯ ಅನಾಥೆಯರಿಗೆ, ವಿಧವೆಯರಿಗೆ ಅನುಕೂಲವಾಗಿದೆ. _ ಫಾತಿಮಾ, ತೀರ್ಥಹಳ್ಳಿ.

* ಗೃಹಜ್ಯೋತಿ ಯೋಜನೆಯ ಅನುಷ್ಠಾನದಿಂದಾಗಿ ಸಾಮಾನ್ಯ ಕುಟುಂಬದವರು ವಿದ್ಯುತ್ ಶುಲ್ಕ ಪಾವತಿಸುವುದರಿಂದ ಶಾಶ್ವತ ವಿನಾಯಿತಿ ಪಡೆಯುವಂತಾಗಿದೆ. ಇದರಿಂದ ಜೀವನ ನಿರ್ವಹಣೆಗೆ ಸಹಕಾರಿಯಾಗಿದೆ. -ಶ್ರೀಮತಿ ನಳಿನಾ, ಗೃಹಣಿ, ತೀರ್ಥಹಳ್ಳಿ.

‘ರೋಡ್ ಟು ನೋವೇರ್’ನಿಂದ ಸಂಪೂರ್ಣ ಅಭಿವೃದ್ಧಿ ಕಡೆ ಮೋದಿಜೀ ಆಡಳಿತ- ಡಾ.ಸಿ.ಎನ್ ಅಶ್ವತ್ಥನಾರಾಯಣ

ರಾಜ್ಯ ‘ಗುತ್ತಿಗೆ, ಹೊರಗುತ್ತಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಸಮಾನ ಕೆಲಸಕ್ಕೆ, ‘ಸಮಾನ ವೇತನ’ ಜಾರಿ

Share. Facebook Twitter LinkedIn WhatsApp Email

Related Posts

GOOD NEWS: UGC, ICAR, AICTE ವೇತನದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ | DA Hike

09/05/2025 6:39 PM1 Min Read

ಮೇ, 26 ರಿಂದ 31 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2

09/05/2025 6:22 PM1 Min Read

ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

09/05/2025 6:20 PM1 Min Read
Recent News

BREAKING: ಜೂ.6ರವರೆಗೆ ಮುಂಬೈ ದಾಳಿಯ ಆರೋಪಿ ತಹವೂರ್ ರಾಣಾ ನ್ಯಾಯಾಂಗ ಬಂಧನ, ತಿಹಾರ್ ಜೈಲಿಗೆ ಶಿಫ್ಟ್

09/05/2025 6:45 PM

GOOD NEWS: UGC, ICAR, AICTE ವೇತನದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ | DA Hike

09/05/2025 6:39 PM

BREAKING: ಪಾಕಿಸ್ತಾನದ ಶೆಲ್ ದಾಳಿಗೆ ಪೂಂಚ್‌ನಲ್ಲಿ ಇಬ್ಬರು ವಿದ್ಯಾರ್ಥಿಗಳು ಬಲಿ: ವಿದೇಶಾಂಗ ಸಚಿವಾಲಯ

09/05/2025 6:25 PM

ಪಾಕಿಸ್ತಾನದ 4 ವಾಯು ರಕ್ಷಣಾ ನೆಲೆಗಳ ಮೇಲೆ ಡ್ರೋನ್ ದಾಳಿ, ಒಂದು ರಾಡಾರ್ ಹೊಡೆದುರುಳಿಸಿದ ಭಾರತ

09/05/2025 6:22 PM
State News
KARNATAKA

GOOD NEWS: UGC, ICAR, AICTE ವೇತನದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ | DA Hike

By kannadanewsnow0909/05/2025 6:39 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಯುಜಿಸಿ, ಐಸಿಎಆರ್, ಎಐಸಿಟಿಇ ಅನುಸಾರ ವೇತನ ಪಡೆಯುತ್ತಿರುವಂತ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ತುಟ್ಟಿಭತ್ಯೆಯನ್ನು…

ಮೇ, 26 ರಿಂದ 31 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2

09/05/2025 6:22 PM

ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

09/05/2025 6:20 PM
Retirement simplified pension application

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

09/05/2025 6:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.