ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ಪ್ರಸ್ತುತ ನೀಡುತ್ತಿರುವ ಮಾಸಾಶನ 2000 ರೂ. ಗಳಿಗೆ ಹೆಚ್ಚಳ; ಲಿಂಗತ್ವ ಅಲ್ಪಸಂಖ್ಯಾತರಿಗೆ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನ 1,200 ರೂ. ಗಳಿಗೆ ಹೆಚ್ಚಳ ಮಾಡಲಾಗುವುದು ಅಂಥ ತಿಳಿಸಿದರು.
ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯಮ ಅವಕಾಶಗಳನ್ನು ಒದಗಿಸಲು ರಾಜ್ಯ ಕೌಶಲ್ಯ ನೀತಿ ಜಾರಿ ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ. 25,000 ಫಲಾನುಭವಿಗಳಿಗೆ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ. ಕಲಬುರಗಿ, ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ 350 ಕೋಟಿ ವೆಚ್ಚದಲ್ಲಿ ಜಿ.ಟಿ.ಟಿ.ಸಿ. ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆ. ಇದಲ್ಲದೇ ಬಳ್ಳಾರಿ, ಚಿತ್ರದುರ್ಗ, ರೋಣದಲ್ಲಿ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಹೊಸ ಜಿ.ಟಿ.ಟಿ.ಸಿ ಗಳ ಪ್ರಾರಂಭ ಮಾಡಲಾಗುವುದು ಅಂಥ ತಿಳಿಸಿದರು.
ಬಜೆಟ್ ಬ್ರೇಕಿಂಗ್: ಮಾಜಿ ದೇವದಾಸಿ & ಲಿಂಗತ್ವ ಅಲ್ಪಸಂಖ್ಯಾತರ ಮಾಸಾಶನ ಹೆಚ್ಚಳ
ರಾಜ್ಯದ ‘ಅಂಗನವಾಡಿ ಕಾರ್ಯಕರ್ತೆ’ಯರು, ‘ಸಹಾಯಕಿ’ಯರಿಗೆ ಗುಡ್ ನ್ಯೂಸ್: ‘ಗ್ರಾಚುಟಿ ಸವಲತ್ತು’ ಜಾರಿ