Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯ ಸರ್ಕಾರದಿಂದ ‘ದಿನಗೂಲಿ ನೌಕರ’ರಿಗೆ ಸಿಹಿಸುದ್ದಿ: 5 ಲಕ್ಷದವರೆಗೆ ನಗದು ರಹಿತ ‘ಉಚಿತ ಆರೋಗ್ಯ ಯೋಜನೆ’ ಜಾರಿ

01/04/2026 4:17 PM

BIG NEWS : ಕೊಪ್ಪಳದಲ್ಲಿ ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

01/04/2026 4:09 PM

BREAKING: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಿಗ್ ರಿಲೀಫ್: ಮಾನಹಾನಿ ಕೇಸ್ ವಜಾಗೊಳಿಸಿದ ಕೋರ್ಟ್

01/04/2026 4:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻಯುವನಿಧಿʼ ಫಲಾನುಭವಿಗಳಿಗೆ ‘ಮತ್ತೊಂದು’ ಗುಡ್ ನ್ಯೂಸ್ : ʻಭತ್ಯೆʼ ಜೊತೆಗೆ ಸಿಗಲಿದೆ ʻಉದ್ಯಮಶೀಲತೆʼ ತರಬೇತಿ!
KARNATAKA

ʻಯುವನಿಧಿʼ ಫಲಾನುಭವಿಗಳಿಗೆ ‘ಮತ್ತೊಂದು’ ಗುಡ್ ನ್ಯೂಸ್ : ʻಭತ್ಯೆʼ ಜೊತೆಗೆ ಸಿಗಲಿದೆ ʻಉದ್ಯಮಶೀಲತೆʼ ತರಬೇತಿ!

By kannadanewsnow0707/01/2024 11:18 AM

ಬೆಂಗಳೂರು: ಯುಜನರ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ “ಯುವ ನಿಧಿ” ಯೋಜನೆ ಕೇವಲ ನಿರುದ್ಯೋಗಿಗಳಿಗೆ ಹಣ ನೀಡುವುದಷ್ಟೆ ಅಲ್ಲ, ಬದಲಾಗಿ ಅವರಿಗೆ ಉದ್ಯಮಶೀಲತೆ ಕಲ್ಪಿಸಿ ಉದ್ಯೋಗ ನೀಡುವುದು ನಮ್ಮ ಆದ್ಯತೆಯಾಗಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳು ಹೆಸರು ನೊಂದಣಿ ಮಾಡಿ ಲಾಭ ಪಡೆಯಬೇಕೆಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮನವಿ ಮಾಡಿದರು.

ಶನಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ ಅವರು ಕಳೆದ ಡಿ.26ಕ್ಕೆ ಈ ಯೋಜನೆಯಡಿ ನೋಂದಣಿಗೆ ಚಾಲನೆ ನೀಡಿದ್ದು, 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳ ವರೆಗೆ ಯಾವುದೇ ಉದ್ಯೋಗ ಪಡೆಯದ, ಸ್ವಯಂ ಉದ್ಯೋಗಿಯಾಗಿರದ, ವ್ಯಾಸಂಗ ಮುಂದುವರಿಸದವರಿಗೆ ಹಾಗೂ ಕನಿಷ್ಠ 6 ವರ್ಷ ಕರ್ನಾಟಕದಲ್ಲಿ ವ್ಯಾಸಂಗ ಮಾಡಿದವರಿಗೆ ಕ್ರಮವಾಗಿ 3,000 ರೂ. ಮತ್ತು 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತದೆ ಎಂದರು.

ರಾಜ್ಯದಲ್ಲಿ 5 ಲಕ್ಷ ಫಲಾನುಭವಿಗಳು ಅರ್ಹರಿದ್ದು, ಕಲಬುರಗಿ ಜಿಲ್ಲೆಯಲ್ಲಿ 9 ಸಾವಿರ ಜನ ಇದ್ದಾರೆ. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 250 ಕೋಟಿ ರೂ. ಖರ್ಚು ಆಗಲಿದೆ. ಮುಂದಿನ ವರ್ಷ ಆರ್ಥಿಕ ಹೊರೆ ದುಪ್ಪಟಾಗುವ ಸಾಧ್ಯತೆ ಇದೆ. ಯೋಜನೆಯ ಲಾಭ ಪಡೆಯಲು ಫಲಾನುಭವಿಗಳು https://sevasindhugs.karnataka.gov.in ಲಾಗಿನ್ ಆಗಿ ಅಥವಾ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅರ್ಜಿ ಪ್ರಕ್ರಿಯೆ ಕುರಿತು ವಿವರಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಯೋಜನೆಯಡಿ ನೊಂದಣಿ ನಂತರ ಅವರಿಗೆ ಉದ್ಯೋಗ ದೊರಕಿಸುವಂತಹ ಸಂವಹನ ಕೌಶಲ್ಯ, ಸಂಬಂಧಿತ ಕೋರ್ಸ್ ಬೋಧನೆ ಹೀಗೆ ಒಟ್ಟಾರೆ ಉದ್ಯಮಶೀಲತೆ ತರಬೇತಿ ಸಹ ನೀಡಲಾಗುತ್ತದೆ ಎಂದರು.

ರಾಜ್ಯದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ-ಖಾಸಗಿ ಸಂಸ್ಥೆ, ಕೈಗಾರಿಕೆಯಲ್ಲಿ ಉದ್ಯೋಗ ಪಡೆಯುವ ನಿಟ್ಟಿನಲ್ಲಿ ತಮ್ಮ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ಜಂಟಿ ನೇತೃತ್ವದಲ್ಲಿ ಸ್ಕಿಲ್ ಅಡ್ವಾನ್ಸಡ್ ಕಮಿಟಿ ರಚಿಸಿದ್ದು, ಫೆಬ್ರವರಿ ಮೊದಲನೆ ವಾರದಲ್ಲಿ ಸಮಿತಿ ನೀಲಿ ನಕ್ಷೆ ಸಿದ್ದಪಡಿಸಲಿದೆ. ತದನಂತರ ನೀಲಿ ನಕ್ಷೆ ಆಧಾರದ ಮೇಲೆ ಇಡೀ ವಿಶ್ವಕ್ಕೆ ಮಾದರಿಯಾಗುವಂತಹ ಮನವ ಸಂಪನ್ಮೂಲ ಪೂರೈಕೆಗೆ ಯೋಜನೆ ರೂಪಿಸಲಾಗುವುದು ಎಂದರು.

ಕಲ್ಯಾಣ ಕರ್ನಾಟಕ ಭಾಗದ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಅನುಕೂಲವಾಗುವಂತೆ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ ನೀಡಲೆಂದೆ ಕಲಬುರಗಿ ನಗರದ ವಾಜಪೇಯಿ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ “ನೈಸ್ ಅಕಾಡೆಮಿ” ಸ್ಥಾಪಿಸಿದ್ದು, ಶೀಘ್ರವೆ ತರಬೇತಿ ಕೇಂದ್ರ ಆರಂಭವಾಗಲಿದೆ. ಇದಕ್ಕೆ 10 ಕೋಟಿ ರೂ. ಅನುದಾನ ನೀಡಲಾಗುತ್ತದೆ ಎಂದರು.

ರಾಜ್ಯದಲ್ಲಿ ಪ್ರಸ್ತುತ 2.40 ಲಕ್ಷ ಹುದ್ದೆ ಖಾಲಿ ಇದ್ದು, ಇದನ್ನು ಹಂತ ಹಂತವಾಗಿ ಭರ್ತಿ ಮಾಡಲು ಸರ್ಕಾರ ದೃಢ ಹೆಜ್ಜೆ ಇಟ್ಟಿದೆ. ಕೆ.ಪಿ.ಎಸ್.ಸಿ., ಕೆ.ಇ.ಎ. ಮೂಲಕ ಭರ್ತಿ ಮಾಡಲಾಗುವುದು. ಇತ್ತೀಚೆಗೆ 371ಜೆ ಅನ್ವಯ ಪ್ರಾದೇಶಿಕ ವೃಂದ ಮತ್ತು ರಾಜ್ಯ ಮಟ್ಟದ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಮತ್ತು ಮುಂಬಡ್ತಿ ಮೂಲಕ ಭರ್ತಿ ಮಾಡಲು ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು 371ಜೆ ಅನುಷ್ಠಾನ ಸಮಿತಿ ಅಧ್ಯಕ್ಷರು ಆಗಿರುವ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
*ಶಿವಮೊಗ್ಗದಲ್ಲಿ ಯುವ ನಿಧಿ ಸಮಾವೇಶ:*

ಸ್ವಾಮಿ ವಿವೇಕಾನಂದರ ಜನ್ಮ ದಿನ ವಾದ ಜನವರಿ 12 ರಂದು ಶಿವಮೊಗ್ಗದಲ್ಲಿ ಪಂಚ ಗ್ಯಾರಂಟಿಯಲ್ಲಿ ಒಂದಾದ “ಯುವ ನಿಧಿ” ಯೋಜನೆಯಡಿ ಡಿ.ಬಿ.ಟಿ. ಮೂಲಕ ನಿರುದ್ಯೋಗ ಭತ್ಯೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ. ಅಲ್ಲಿ ಬೃಹತ್ ಸಂಖ್ಯೆಯಲ್ಲಿ ಯುವ ಸಮೂಹ ಸೇರಲಿದೆ ಎಂದರು.
*ಉದ್ಯೋಗ ಮೇಳ:*

ನಮ್ಮ ಸರ್ಕಾರ ಯುವಕರಿಗೆ ಉದ್ಯೋಗ ನೀಡುವತ್ತ ಹೆಚ್ಚಿನ ಗಮನ ಹರಿಸಿದೆ. ಜನವರಿ ಅಂತ್ಯಕ್ಕೆ ಅಥವಾ ಫೆಬ್ರವರಿ ಮೊದಲನೇ ವಾರದಲ್ಲಿ ರಾಜಧಾನಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ತದನಂತರ ವಿಭಾಗ, ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುವುದು. ಹಿಂದಿಗಿಂತ ವಿಭಿನ್ನ ಉದ್ಯೋಗ ಮೇಳ ಇದಾಗಿರಲಿದೆ ಎಂದರು.

ಪತ್ರಿಕಾಗೋಷಿಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ, ಎಂ.ಎಲ್.ಸಿ. ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಟೀಲ ದೇವಿದಾಸ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮುರಳಿಧರ ರತ್ನಗಿರಿ, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯಯ ಸಹಾಯಕ ನಿರ್ದೇಶಕಿ ಭಾರತಿ ಇದ್ದರು.

Another good news for 'Yuvanidhi' beneficiaries: 'Entrepreneurship' training will be available along with 'allowance'!
Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯ ಸರ್ಕಾರದಿಂದ ‘ದಿನಗೂಲಿ ನೌಕರ’ರಿಗೆ ಸಿಹಿಸುದ್ದಿ: 5 ಲಕ್ಷದವರೆಗೆ ನಗದು ರಹಿತ ‘ಉಚಿತ ಆರೋಗ್ಯ ಯೋಜನೆ’ ಜಾರಿ

01/04/2026 4:17 PM2 Mins Read

BIG NEWS : ಕೊಪ್ಪಳದಲ್ಲಿ ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

01/04/2026 4:09 PM1 Min Read

BREAKING : ಹಾವೇರಿಯಲ್ಲಿ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ಹರಿದ ಬಸ್ : 2 ವರ್ಷದ ಮಗು ಸಾವು, ಮೂವರಿಗೆ ಗಾಯ!

01/04/2026 3:32 PM1 Min Read
Recent News

GOOD NEWS: ರಾಜ್ಯ ಸರ್ಕಾರದಿಂದ ‘ದಿನಗೂಲಿ ನೌಕರ’ರಿಗೆ ಸಿಹಿಸುದ್ದಿ: 5 ಲಕ್ಷದವರೆಗೆ ನಗದು ರಹಿತ ‘ಉಚಿತ ಆರೋಗ್ಯ ಯೋಜನೆ’ ಜಾರಿ

01/04/2026 4:17 PM

BIG NEWS : ಕೊಪ್ಪಳದಲ್ಲಿ ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

01/04/2026 4:09 PM

BREAKING: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಿಗ್ ರಿಲೀಫ್: ಮಾನಹಾನಿ ಕೇಸ್ ವಜಾಗೊಳಿಸಿದ ಕೋರ್ಟ್

01/04/2026 4:08 PM

BREAKING: ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

01/04/2026 4:03 PM
State News
KARNATAKA

GOOD NEWS: ರಾಜ್ಯ ಸರ್ಕಾರದಿಂದ ‘ದಿನಗೂಲಿ ನೌಕರ’ರಿಗೆ ಸಿಹಿಸುದ್ದಿ: 5 ಲಕ್ಷದವರೆಗೆ ನಗದು ರಹಿತ ‘ಉಚಿತ ಆರೋಗ್ಯ ಯೋಜನೆ’ ಜಾರಿ

By kannadanewsnow0901/04/2026 4:17 PM KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ತಾತ್ಕಾಲಿಕ ನೌಕರರ ಹಿತರಕ್ಷಣೆಗೆ ಕರ್ನಾಟಕ ಸರ್ಕಾರವು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.…

BIG NEWS : ಕೊಪ್ಪಳದಲ್ಲಿ ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

01/04/2026 4:09 PM

BREAKING : ಹಾವೇರಿಯಲ್ಲಿ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ಹರಿದ ಬಸ್ : 2 ವರ್ಷದ ಮಗು ಸಾವು, ಮೂವರಿಗೆ ಗಾಯ!

01/04/2026 3:32 PM

BREAKING : ಮಂಗಳೂರಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿ ಹೊಡೆದ ರಭಸಕ್ಕೆ 10 ಅಡಿ ಹಾರಿ ಬಿದ್ದ ಮಹಿಳೆ!

01/04/2026 3:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.