Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಜೆಪಿಗರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ್ರೆ ಮಳೆ-ಬೆಳೆಯಾಗಲ್ಲವೆಂದು ಅಪಪ್ರಚಾರ: ಶಾಸಕ ಗೋಪಾಲಕೃಷ್ಣ ಬೇಳೂರು

24/08/2025 9:31 PM

ಬೆಂಗಳೂರಲ್ಲಿ ರಜಾ ದಿನಗಳಲ್ಲೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಚುರುಕು

24/08/2025 9:21 PM

ಮಂಡ್ಯದಲ್ಲಿ ‘ಕಸಾಪ ಸ್ಮರಣ ಸಂಚಿಕೆ’ ಬಿಡುಗಡೆ ಕಾರ್ಯಕ್ರಮ: ಪ್ರತಿಭಟನೆಗೆ ಹೆದರಿ ‘ಮಹೇಶ್ ಜೋಶಿ’ ಗೈರು !?

24/08/2025 9:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ‘ತೆಲಗಿ ಮಾದರಿ’ಯಲ್ಲಿ ಕರ್ನಾಟಕದಲ್ಲಿ ಮತ್ತೊಂದು ಭಾರೀ ‘ನಕಲಿ ಛಾಪಾ ಕಾಗದ ಹಗರಣ’
KARNATAKA

BIG BREAKING: ‘ತೆಲಗಿ ಮಾದರಿ’ಯಲ್ಲಿ ಕರ್ನಾಟಕದಲ್ಲಿ ಮತ್ತೊಂದು ಭಾರೀ ‘ನಕಲಿ ಛಾಪಾ ಕಾಗದ ಹಗರಣ’

By kannadanewsnow0908/10/2024 2:25 PM

ಬೆಂಗಳೂರು: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಹಾಗೂ ಮೈಸೂರು ಸಂಘದ ಕೆಲ ಪದಾಧಿಕಾರಿಗಳು ಸಹಸ್ರಾರು ಕೋಟಿ ರೂಪಾಯಿ ಮೌಲ್ಯದ ಮತ್ತೊಂದು ತೆಲಗಿ ಮಾದರಿಯ ನಕಲಿ ಛಾಪಾ ಕಾಗದ ಹಗರಣ ನಡೆಸಿದ್ದು, ಕಾನೂನು ಬಾಹಿರ ಫ್ರಾಂಕಿಂಗ್ ಸೇವೆಗಳ ಮೂಲಕ ಸರ್ಕಾರದ ಬೊಕ್ಕಸಕ್ಕೆ ಭಾರೀ ಪ್ರಮಾಣದಲ್ಲಿ ಹಾನಿ ಮಾಡಿದ್ದಾರೆ. ತಪ್ಪಿತಸ್ಥರನ್ನು ಹೆಡೆಮುರಿ ಕಟ್ಟುವ ಜೊತೆಗೆ ಈ ಕುರಿತು ವಿಶೇಷ ತನಿಖಾ ತಂಡದಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತ ಆರ್. ಈಶ್ವರ ರಾಜು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ಅನುತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ, ಮೈಸೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಭಾರೀ ಪ್ರಮಾಣದಲ್ಲಿ ಅಕ್ರಮಗಳನ್ನು ನಡೆಸಿದ್ದು, ಗ್ರಾಹಕರ ಹಿತ ರಕ್ಷಣೆ ಮತ್ತು ಸರ್ಕಾರದ ಬೊಕ್ಕಸಕ್ಕೆ ಬೆಂಗಾವಲಾಗಿ ನಿಲ್ಲಬೇಕಾದ ಇವರು ಅಕ್ಷರಶಃ ಬೇಲಿಯೇ ಎದ್ದು ಹೊಲ ಮೇಯ್ದಂತೆ ವರ್ತಿಸಿದ್ದಾರೆ. ವಿದ್ಯುತ್ ಗುತ್ತಿಗೆದಾರರ ಮೂಲಕ ಮನೆಗೆ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ಕಂಗಾಲಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್. ಈಶ್ವರ ರಾಜು, ವಿದ್ಯುತ್ ಸಂಪರ್ಕ ಪಡೆಯಲು ಗುತ್ತಿಗೆದಾರರು ಮತ್ತು ಗ್ರಾಹಕರ ನಡುವೆ ಒಪ್ಪಂದ ಮಾಡಿಕೊಳ್ಳುವ ಛಾಪಾ ಕಾಗದದಲ್ಲಿ ಭಾರೀ ಅಕ್ರಮ ನಡೆದಿದೆ. ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಮತ್ತು ಕೆ.ವಿ. ಅರವಿಂದ್ ನೇತೃತ್ವದ ವಿಭಾಗೀಯ ಪೀಠ ಎಲ್ಲಾ ವಾಸ್ತವಾಂಶಗಳನ್ನು ಪರಿಶೀಲಿಸಿ ಸೂಕ್ತ ಮೌಲ್ಯ ಮಾಪನ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಕಳೆದ ತಿಂಗಳ 27 ರಂದು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.

ಗುತ್ತಿಗೆದಾರರ ಸಂಘದ ವಂಚಕರು ಕಳೆದ ಏಳೆಂಟು ವರ್ಷಗಳಿಂದ ಅವ್ಯಾಹತವಾಗಿ ಅಕ್ರಮ ನಡೆಸುತ್ತಿದ್ದು, ನೂರು ವರ್ಷಗಳಿಗೂ ಹೆಚ್ಚು ಕಾಲದಿಂದ ಅಸ್ಥಿತ್ವದಲ್ಲಿರುವ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ಇದರಿಂದ ಕೆಟ್ಟ ಹೆಸರು ಬಂದಿದೆ. ಬೊಕ್ಕಸಕ್ಕೆ ನಷ್ಟವಾಗಿರುವ ಮೊತ್ತವನ್ನು ತಪ್ಪಿತಸ್ಥರಿಂದ ವಸೂಲಿ ಮಾಡಬೇಕು. ಸಮಗ್ರ ತನಿಖೆ ನಡೆಯುವವರೆಗೆ ಸಂಘಕ್ಕೆ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಬೇಕು. ಇಲ್ಲವಾದಲ್ಲಿ ತನಿಖೆ ಹಾದಿ ತಪ್ಪುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಬೊಕ್ಕಸಕ್ಕೆ ಹಾನಿಯಾಗಿರುವ ಜೊತೆಗೆ ಗ್ರಾಹಕರು ಮತ್ತು ಗುತ್ತಿಗೆದಾರರ ನಡುವಿನ ಒಪ್ಪಂದದ ಪತ್ರ ಕಾನೂನಿನ ಮಾನ್ಯತೆ ಕಳೆದುಕೊಂಡು ಅಸಿಂಧುವಾಗಿದೆ. ಸಂಘದ ಕೆಲವರು ಚಿತಾವಣೆ ನಡೆಸಿ ನಕಲಿ ಛಾಪಾ ಕಾಗದಗಳನ್ನು ರಾಜಾರೋಷವಾಗಿ ಮುದ್ರಿಸಿ ಸರ್ಕಾರದ ಕಣ್ಣಿಗೆ ಮಣ್ಣೆರೆಚಿದ್ದಾರೆ. ನಿರ್ದಿಷ್ಟ ಉದ್ದೇಶಗಳಿಗಾಗಿ ಫ್ರಾಂಕಿಂಗ್ ಯಂತ್ರ ಬಳಸಲು ಅಧಿಕಾರ ಹೊಂದಿರುವ ಸಂಘ, ಕರ್ನಾಟಕ ಸ್ಟ್ಯಾಂಪ್ ನಿಯಮಗಳು 2002ರಡಿ ನೀಡಲಾದ ತನ್ನ ಪರವಾನಗಿ ಷರತ್ತುಗಳನ್ನು ಉಲ್ಲಂಘಿಸಿ, ರಾಜಾರೋಷವಾಗಿ ಛಾಪಾ ಕಾಗದಗಳನ್ನು ಮುದ್ರಿಸಿ ದುಬಾರಿ ಬೆಲೆಗೆ ಮಾರಾಟ ಮಾಡಿದೆ. ಕರ್ನಾಟಕ ಸ್ಟ್ಯಾಂಪ್ ಕಾಯ್ದೆ 1957 ರ ಸೆಕ್ಷನ್ 10ಎ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿದೆ. ಪ್ರತಿಯೊಂದು ಉಪಕರಣಗಳಿಗೆ ಪ್ರತ್ಯೇಕ ಕೆ2 ಚಲನ್ ಗಳನ್ನು ಕಡ್ಡಾಯಗೊಳಿಸಿದ್ದು, ಈ ನಿಯಮಗಳನ್ನು ಗಾಳಿಗೆ ತೂರಿದ್ದಲ್ಲದೇ ನಕಲಿ ಮಾಡುವ ಮೂಲಕ ಲೂಟಿ ಮಾಡಿದೆ ಎಂದರು.

ಈ ಎಲ್ಲಾ ಅಂಶಗಳನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ. ಸಂಘದವರು ಸಾರ್ವಜನಿಕ ಹಿತಾಸಕ್ತಿಯನ್ನು ಅಪಾಯಕ್ಕೆ ಸಿಲುಕಿಸಿದ್ದಾರೆ. ನಕಲಿ ಛಾಪಾ ಕಾಗದ ಮುದ್ರಣ ಮಾಡುವ ದಂಧೆಯನ್ನು ವ್ಯಾಪಕವಾಗಿ ನಡೆಸಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ಪೊಲೀಸ್ ಠಾಣೆಯಲ್ಲಿ 2022 ರ ಡಿಸೆಂಬರ್ 10 ರಂದು ಮೊದಲ ನಕಲಿ ಛಾಪಾ ಕಾಗದ ಹಗರಣ ಬೆಳಕಿಗೆ ಬಂದಿದ್ದು, ಇದೊಂದು ದೊಡ್ಡ ಜಾಲ ಎಂದು ಆಗಲೇ ಸಂಬಂಧಪಟ್ಟ ಇಲಾಖೆಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೆ ನೋಂದಣಿ ಇಲಾಖೆ ಎಚ್ಚೆತ್ತುಕೊಳ್ಳಲೇ ಇಲ್ಲ ಎಂದು ಆರ್. ಈಶ್ವರ ರಾಜು ಆರೋಪಿಸಿದರು.

ವಿಪರ್ಯಾಸವೆಂದರೆ ಸಂಘದ ಕೆಲ ಪ್ರತಿನಿಧಿಗಳು ಕೂಡ ಮೈಸೂರಿನಲ್ಲಿ ನಕಲಿ ಛಾಪಾ ಕಾಗದ ಮುದ್ರಣವಾಗುತ್ತಿರುವ ಕುರಿತು ಸಂಘದ ಅಧ್ಯಕ್ಷರ ಗಮನಕ್ಕೆ ನೇರವಾಗಿ ತಂದಿದ್ದರು. ಆಗ ನಕಲಿ ಛಾಪಾ ಕಾಗದಗಳನ್ನು ಹಿಂದಕ್ಕೆ ಪಡೆದು ಅಸಲಿ ಛಾಪಾ ಕಾಗದಗಳನ್ನು ಪೂರೈಸಲಾಗಿತ್ತು. ಈ ಎಲ್ಲವೂ ಸಂಘ ಮತ್ತು ಸಂಘದ ಸದಸ್ಯರ ನಡುವಿನ ಪತ್ರ ವ್ಯವಹಾರದಲ್ಲಿ ಸ್ಪಷ್ಟವಾಗಿದೆ. ಇಲ್ಲಿ ಹೆಜ್ಜೆ ಹೆಜ್ಜೆಗೂ ನಿಯಮಗಳನ್ನು ಕಾಲ ಕಸಕ್ಕಿಂತ ಕಡೆಯಾಗಿ ನೋಡಲಾಗಿದೆ. ನೂರು ವರ್ಷಗಳನ್ನು ಪೂರೈಸಿರುವ ಸಂಘದ ಚಟುವಟಿಕೆಗಳಲ್ಲೂ ಇದೇ ಮೊದಲ ಬಾರಿಗೆ ಅಕ್ರಮ ಕಂಡು ಬಂದಿದೆ. ಲೆಕ್ಕ ಪತ್ರಗಳನ್ನು ಸಮರ್ಪಕವಾಗಿ ಒದಗಿಸಿಲ್ಲ ಎಂಬ ಆರೋಪಗಳಿವೆ. ಆಡಳಿತಾಧಿಕಾರಿಯನ್ನು ನೇಮಿಸಿದರೆ ಸತ್ಯ ಸಂಗತಿ ಬಯಲಿಗೆ ಬರಲಿದೆ ಎಂದು ಹೇಳಿದರು.

ಈ ಆಹಾರಗಳು ನಿಮ್ಮ ಆರೋಗ್ಯಕ್ಕೆ ಸಂಜೀವನಿ ಇದ್ದಂತೆ : ಇವುಗಳನ್ನು ತಿಂದರೆ ನಿಮಗೆ ಹೃದಯಾಘಾತವಾಗುವುದಿಲ್ಲ!

BREAKING : ಹರಿಯಾಣ ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ `ವಿನೇಶ್ ಪೋಗಟ್’ ಗೆ ಭರ್ಜರಿ ಗೆಲುವು | Vinesh Phogat

Share. Facebook Twitter LinkedIn WhatsApp Email

Related Posts

ಬಿಜೆಪಿಗರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ್ರೆ ಮಳೆ-ಬೆಳೆಯಾಗಲ್ಲವೆಂದು ಅಪಪ್ರಚಾರ: ಶಾಸಕ ಗೋಪಾಲಕೃಷ್ಣ ಬೇಳೂರು

24/08/2025 9:31 PM1 Min Read

ಬೆಂಗಳೂರಲ್ಲಿ ರಜಾ ದಿನಗಳಲ್ಲೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಚುರುಕು

24/08/2025 9:21 PM2 Mins Read

ಮಂಡ್ಯದಲ್ಲಿ ‘ಕಸಾಪ ಸ್ಮರಣ ಸಂಚಿಕೆ’ ಬಿಡುಗಡೆ ಕಾರ್ಯಕ್ರಮ: ಪ್ರತಿಭಟನೆಗೆ ಹೆದರಿ ‘ಮಹೇಶ್ ಜೋಶಿ’ ಗೈರು !?

24/08/2025 9:10 PM1 Min Read
Recent News

ಬಿಜೆಪಿಗರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ್ರೆ ಮಳೆ-ಬೆಳೆಯಾಗಲ್ಲವೆಂದು ಅಪಪ್ರಚಾರ: ಶಾಸಕ ಗೋಪಾಲಕೃಷ್ಣ ಬೇಳೂರು

24/08/2025 9:31 PM

ಬೆಂಗಳೂರಲ್ಲಿ ರಜಾ ದಿನಗಳಲ್ಲೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಚುರುಕು

24/08/2025 9:21 PM

ಮಂಡ್ಯದಲ್ಲಿ ‘ಕಸಾಪ ಸ್ಮರಣ ಸಂಚಿಕೆ’ ಬಿಡುಗಡೆ ಕಾರ್ಯಕ್ರಮ: ಪ್ರತಿಭಟನೆಗೆ ಹೆದರಿ ‘ಮಹೇಶ್ ಜೋಶಿ’ ಗೈರು !?

24/08/2025 9:10 PM

SHOCKING: ಹೈದರಾಬಾದಿನಲ್ಲಿ ಗರ್ಭಿಣಿ ಪತ್ನಿ ಕೊಂದು, ದೇಹ ತುಂಡು ತುಂಡು ಮಾಡಿ ನದಿಗೆ ಎಸೆದ ರಾಪಿಡೋ ಚಾಲಕ

24/08/2025 9:02 PM
State News
KARNATAKA

ಬಿಜೆಪಿಗರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ್ರೆ ಮಳೆ-ಬೆಳೆಯಾಗಲ್ಲವೆಂದು ಅಪಪ್ರಚಾರ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0924/08/2025 9:31 PM KARNATAKA 1 Min Read

ಶಿವಮೊಗ್ಗ: ಬಿಜೆಪಿಯವರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾದರೇ ಮಳೆ-ಬೆಳೆ ಆಗೋದಿಲ್ಲ ಅಂತ ಅಪಪ್ರಚಾರ ಮಾಡುತ್ತಾರೆ. ಆದರೇ ಅವರು ಮುಖ್ಯಮಂತ್ರಿಯಾದ ಮೇಲೆ ಚೆನ್ನಾಗಿ ಮಳೆಯಾಗಿದೆ.…

ಬೆಂಗಳೂರಲ್ಲಿ ರಜಾ ದಿನಗಳಲ್ಲೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಚುರುಕು

24/08/2025 9:21 PM

ಮಂಡ್ಯದಲ್ಲಿ ‘ಕಸಾಪ ಸ್ಮರಣ ಸಂಚಿಕೆ’ ಬಿಡುಗಡೆ ಕಾರ್ಯಕ್ರಮ: ಪ್ರತಿಭಟನೆಗೆ ಹೆದರಿ ‘ಮಹೇಶ್ ಜೋಶಿ’ ಗೈರು !?

24/08/2025 9:10 PM

ಲಿಂಗನಮಕ್ಕಿಗೆ ಡ್ಯಾಂಗೆ ಬಾಗಿನ ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವುದರಲ್ಲಿ ಅರ್ಥವಿಲ್ಲ: ಮಧು ಬಂಗಾರಪ್ಪ

24/08/2025 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.