Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ‘SIT’ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಿನ್ನಯ್ಯ!

23/08/2025 12:01 PM

ಗೌರಿ-ಗಣೇಶ ಹಬ್ಬದ ಹಿನ್ನಲೆ: 1,500 ಹೆಚ್ಚುವರಿ ‘KSRTC ಬಸ್’ ಸಂಚಾರದ ವ್ಯವಸ್ಥೆ

23/08/2025 11:55 AM

ಈ ಒಂದು ದೀಪವನ್ನು ಮನೆಯಲ್ಲಿ ಹಚ್ಚಿ ಪೂಜಿಸುವವರಿಗೆ ಲಕ್ಷ್ಮಿ ದೇವಿಯ ಪರಿಪೂರ್ಣ ಅನುಗ್ರಹದಿಂದ ಸಕಲ ಸಂಪತ್ತು ದೊರೆಯುತ್ತದೆ.

23/08/2025 11:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ ; ಜುಲೈ 13 ರಂದು ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ ಅದಾಲತ್ ’.!
KARNATAKA

‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ ; ಜುಲೈ 13 ರಂದು ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ ಅದಾಲತ್ ’.!

By kannadanewsnow0710/07/2024 12:09 PM

ಬೆಂಗಳೂರು: ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 13 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು ಇಲ್ಲಿ ರಾಜೀಯಾಗಬಲ್ಲ ಎಲ್ಲ ಪ್ರಕರಣಗಳನ್ನು ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಲು ಅತ್ಯುತ್ತಮ ಅವಕಾಶ ಇದ್ದು ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ.ಎನ್ ಹೆಗಡೆ ತಿಳಿಸಿದರು.

ಅವರು ಜುಲೈ 9 ರಂದು ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 13 ರಂದು ಆಯೋಜಿಸಲಾಗಿರುವ ರಾಷ್ಟ್ರೀಯ ಲೋಕ ಅದಾಲತ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತತಿದೆ. ರಾಜಿಯಾಗಬಲ್ಲ ಎಲ್ಲಾ ಪ್ರಕರಣಗಳನ್ನು ಇಲ್ಲಿ ಇತ್ಯರ್ಥ ಮಾಡಿಕೊಳ್ಳುವುದರಿಂದ ಎರಡೂ ಕಡೆ ಕಕ್ಷೀದಾರರಿಗೆ ಸಮಯ, ಹಣ ಉಳಿತಾಯವಾಗಿ ಶೀಘ್ರ ನ್ಯಾಯ ಸಿಗಲಿದೆ ಎಂದರು.

ವಾಜ್ಯ ಪೂರ್ವ ಪ್ರಕರಣಗಳು: ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಮೈಂಟನೆನ್ಸ್ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ) ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್‍ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳನ್ನು ಲೋಕ ಅದಾಲತ್‍ನಲ್ಲಿ ಬಗೆಹರಿಸಲಾಗುವುದು. ಈ ದಿನಾಂಕಗಳ ಹೊರತಾಗಿಯೂ ಸತತವಾಗಿ ನಡೆಯುವ ಲೋಕ ಅದಾಲತ್ ಮುಖಾಂತರ ಕೂಡ ಕಕ್ಷಿದಾರರು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಜಿಲ್ಲಾ ಮಟ್ಟದಲ್ಲಿ ನ್ಯಾಯಾಧೀಶರು ವಕೀಲರ ಸಹಕಾರದೊಂದಿಗೆ ಕಲಾಪ ನಡೆಸುವರು. ಇದೇ ರೀತಿ ತಾಲ್ಲೂಕು ಮಟ್ಟದಲ್ಲೂ ಅದಾಲತ್ ನಡೆಯಲಿದ್ದು ಸಾರ್ವಜನಿಕರು ಶೀಘ್ರ ನ್ಯಾಯ ಪಡೆದುಕೊಳ್ಳಲು ಈ ಲೋಕ ಅದಾಲತ್‍ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಐದು ಸಾವಿರದಿಂದ ಆರು ಸಾವಿರ ಪ್ರಕರಣ ಇತ್ಯರ್ಥದ ಗುರಿ : ಜುಲೈ.13 ರಂದು ನಡೆಯುವ ಲೋಕ ಅದಾಲತ್‍ನಲ್ಲಿ ರಾಜೀಯಾಗಬಲ್ಲ ಸುಮಾರು 5 ರಿಂದ 6 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ. 2019 ರ ಡಿಸೆಂಬರ್ ಅಂತ್ಯದವರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಒಟ್ಟು 40,713 ಪ್ರಕರಣಗಳು ಬಾಕಿ ಇವೆ. ಈ ಪೈಕಿ 8871 ರಾಜೀ ಆಗಬಲ್ಲ ಪ್ರಕರಣಗಳನ್ನು ಗುರುತಿಸಿ ರೆಫರ್ ಮಾಡಲಾಗಿದೆ.

ಲೋಕ ಅದಾಲತ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಕಡಿಮೆ ಇದ್ದು, ಹೆಚ್ಚಿನ ಪ್ರಚಾರ ಮತ್ತು ಮಾಹಿತಿ ನೀಡುವ ಮೂಲಕ ಪರಿಣಾಮಕಾರಿಯಾಗಿ ಅರಿವು ಮೂಡಿಸಲಾಗುತ್ತಿದೆ. ಸಣ್ಣ ಪುಟ್ಟ ಪ್ರಕರಣಗಳ ಕುರಿತು ರಾಜೀ ಸಂಧಾನದ ಮೂಲಕ ವ್ಯಾಜ್ಯ ಪರಿಹರಿಸಿಕೊಳ್ಳಬಹುದು. ನ್ಯಾಯಾಲಯಕ್ಕೆ ಹೋಗುವ ಅವಶ್ಯಕತೆ ಇಲ್ಲ ಎಂಬುದನ್ನು ಜನ ಸಾಮಾನ್ಯರಲ್ಲಿ ಅರಿವು ಮೂಡಿಸಿದರೆ ನ್ಯಾಯಾಲಯಕ್ಕೆ ಬರುವ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತದೆ ಎಂದರು.

ಲೋಕ್-ಆದಾಲತ್ ವಿಶೇಷತೆಗಳು: ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಮತ್ತು ರಾಜೀಯಾಗಬಲ್ಲ ಪ್ರಕರಣಗಳ ಬಗ್ಗೆ ಜು. 29 ರಿಂದ ಆಗಸ್ಟ್ 3 ರವರೆಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಶೇಷ ಲೋಕ್ ಅದಾಲತ್ ಆಯೋಜಿಸಲಾಗಿದೆ. ಬೇರೆ ಬೇರೆ ತಾಲ್ಲೂಕಿನಿಂದ ಸುಮಾರು 31 ಪ್ರಕರಣಗಳಿವೆ. ಅದಾಲತ್ತಿಗೆ ಅನುಕೂಲವಾಗಲೆಂದು ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ರಾಜೀ ಪೂರ್ವ ಸಮಾಲೋಚನೆಗಳನ್ನು ಕೂಡ ಆಯೋಜಿಸಲಾಗಿದೆ. ಸಾರ್ವಜನಿಕರಿಗೆ ಆಸ್ತಿ ತೆರಿಗೆ ಪಾವತಿಸಲು ಅನುಕೂಲವಾಗಲೆಂದು 5% ರಿಯಾಯಿತಿಯನ್ನು ಸರ್ಕಾರ ಆದೇಶದ ಮೂಲಕ ಜಾರಿಗೊಳಿಸಿದ್ದು, ಈ ಸದಾವಕಾಶವನ್ನು ಸಾರ್ವಜನಿಕರು ಬಳಸಿಕೊಳ್ಳಬಹುದು.

Another opportunity to settle the 'dispute'; 'Rashtriya Lok Adalat' to be held across the state on July 13
Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ‘SIT’ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಿನ್ನಯ್ಯ!

23/08/2025 12:01 PM1 Min Read

ಗೌರಿ-ಗಣೇಶ ಹಬ್ಬದ ಹಿನ್ನಲೆ: 1,500 ಹೆಚ್ಚುವರಿ ‘KSRTC ಬಸ್’ ಸಂಚಾರದ ವ್ಯವಸ್ಥೆ

23/08/2025 11:55 AM2 Mins Read

ಈ ಒಂದು ದೀಪವನ್ನು ಮನೆಯಲ್ಲಿ ಹಚ್ಚಿ ಪೂಜಿಸುವವರಿಗೆ ಲಕ್ಷ್ಮಿ ದೇವಿಯ ಪರಿಪೂರ್ಣ ಅನುಗ್ರಹದಿಂದ ಸಕಲ ಸಂಪತ್ತು ದೊರೆಯುತ್ತದೆ.

23/08/2025 11:40 AM3 Mins Read
Recent News

BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ‘SIT’ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಿನ್ನಯ್ಯ!

23/08/2025 12:01 PM

ಗೌರಿ-ಗಣೇಶ ಹಬ್ಬದ ಹಿನ್ನಲೆ: 1,500 ಹೆಚ್ಚುವರಿ ‘KSRTC ಬಸ್’ ಸಂಚಾರದ ವ್ಯವಸ್ಥೆ

23/08/2025 11:55 AM

ಈ ಒಂದು ದೀಪವನ್ನು ಮನೆಯಲ್ಲಿ ಹಚ್ಚಿ ಪೂಜಿಸುವವರಿಗೆ ಲಕ್ಷ್ಮಿ ದೇವಿಯ ಪರಿಪೂರ್ಣ ಅನುಗ್ರಹದಿಂದ ಸಕಲ ಸಂಪತ್ತು ದೊರೆಯುತ್ತದೆ.

23/08/2025 11:40 AM

Bihar SIR: ಚುನಾವಣಾ ಆಯೋಗಕ್ಕೆ ಆಧಾರ್ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶ

23/08/2025 11:40 AM
State News
KARNATAKA

BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ‘SIT’ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಿನ್ನಯ್ಯ!

By kannadanewsnow0523/08/2025 12:01 PM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಎಸ್ ಐ ಟಿ ಅಧಿಕಾರಿಗಳು ಬೆಳಿಗ್ಗೆ ಮಾಸ್ಕ್ ಮ್ಯಾನ್ ಚೆನ್ನಯ್ಯನನ್ನು…

ಗೌರಿ-ಗಣೇಶ ಹಬ್ಬದ ಹಿನ್ನಲೆ: 1,500 ಹೆಚ್ಚುವರಿ ‘KSRTC ಬಸ್’ ಸಂಚಾರದ ವ್ಯವಸ್ಥೆ

23/08/2025 11:55 AM

ಈ ಒಂದು ದೀಪವನ್ನು ಮನೆಯಲ್ಲಿ ಹಚ್ಚಿ ಪೂಜಿಸುವವರಿಗೆ ಲಕ್ಷ್ಮಿ ದೇವಿಯ ಪರಿಪೂರ್ಣ ಅನುಗ್ರಹದಿಂದ ಸಕಲ ಸಂಪತ್ತು ದೊರೆಯುತ್ತದೆ.

23/08/2025 11:40 AM

ಆ.24ರಂದು ‘ಪರಮ್ ವಿಹಾರ’ ಕಾರ್ಯಕ್ರಮ: ಲೈವ್ ಸೌಂಡ್ ಪ್ರೊಡಕ್ಷನ್, ಆಡಿಯೊ ಮಿಕ್ಸಿಂಗ್ ಕಲಿಕೆಗಿಲ್ಲಿ ಅವಕಾಶ

23/08/2025 11:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.