ಹಾಸನ: ಜಿಲ್ಲೆಯಲ್ಲಿ ದಿನೇ ದಿನೇ ಹೃದಯಾಘಾತದಂತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇಂದು ಮತ್ತೋರ್ವ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಈವರೆಗೆ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಂತ ಗಿರೀಶ್(41) ಎಂಬುವರು ರಜೆಗೆಂದು ಇಂದು ಊರಿಗೆ ತೆರಳಿದ್ದರು. ಹಾಸನ ತಾಲ್ಲೂಕಿನ ಕಟ್ಟಾಯದ ಹ್ಯಾರಾನೆ ಗ್ರಾಮಕ್ಕೆ ಇಂದು ರಜೆಯಿದ್ದ ಕಾರಣ ತೆರಳಿದ್ದಂತ ಗಿರೀಶ್ ಅವರು ಹೊಲದಲ್ಲಿ ಜೋಳದ ಬೆಳೆಗೆ ಗೊಬ್ಬರ ಹಾಕಿ ಮನೆಗೆ ವಾಪಾಸ್ ಆಗುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು.
ಈ ಹಿನ್ನಲೆಯಲ್ಲಿ ಗಿರೀಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಂತ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಹೀಗಾಗಿ ಇಂದು ಹೃದಯಾಘಾತಕ್ಕೆ ಒಂದೇ ದಿನ ಇಬ್ಬರು ಹಾಸನ ಜಿಲ್ಲೆಯಲ್ಲಿ ಬಲಿಯಾದಂತೆ ಆಗಿದೆ. ಅಲ್ಲದೇ ಈವರೆಗೆ 19 ಮಂದಿ ಹೃದಯಾಘಾತದಿಂದ ಹಾಸನ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ.
ನೌಕರರ ಭವಿಷ್ಯ ನಿಧಿ: ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ ಸಚಿವೆ ಶೋಭಾ ಕರಂದ್ಲಾಜೆ ಭರವಸೆ
BREAKING : ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ ಹೇಳಿಕೆ