Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಡಿಯಲ್ಲಿ ರಾತ್ರಿಯಿಡೀ ನಡೆದ ಘರ್ಷಣೆಯಲ್ಲಿ 58 ಪಾಕಿಸ್ತಾನಿ ಸೈನಿಕರು ಸಾವು: ಅಫ್ಘಾನಿಸ್ತಾನ ಹೇಳಿಕೆ

12/10/2025 1:15 PM

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

12/10/2025 1:11 PM

BREAKING : ರಾಜ್ಯದ 10 ಮಂದಿ ಸಾಹಿತಿಗಳಿಗೆ 2024 ರ ‘ಸಾಹಿತ್ಯಶ್ರೀ’ ಪ್ರಶಸ್ತಿ ಘೋಷಣೆ : ಇಲ್ಲಿದೆ ವಿಜೇತರ ಪಟ್ಟಿ

12/10/2025 1:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘CM ಸಿದ್ಧರಾಮಯ್ಯ’ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮತ್ತೊಂದು ‘ಖಾಸಗಿ ದೂರು’ ದಾಖಲು | CM Siddaramaiah
KARNATAKA

BIG NEWS: ‘CM ಸಿದ್ಧರಾಮಯ್ಯ’ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮತ್ತೊಂದು ‘ಖಾಸಗಿ ದೂರು’ ದಾಖಲು | CM Siddaramaiah

By kannadanewsnow0913/09/2024 3:31 PM

ಬೆಂಗಳೂರು: ಈಗಾಗಲೇ ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಅನುಮತಿ ನೀಡಿದ್ದಾರೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಜನ ಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮತ್ತೊಂದು ಖಾಸಗಿ ದೂರು ದಾಖಲಾಗಿದೆ. ಬಿಬಿಎಂಪಿ ಗೆ ಉದ್ದೇಶಪೂರ್ವಕವಾಗಿ 68 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ವಂಚಿಸಿರುವ ಹಗರಣ ಇದಾಗಿದೆ.

ಈ ಕುರಿತಂತೆ ಭ್ರಷ್ಟಾಚಾರ ವಿರೋಧಿ ವೇದಿಕೆ (ರಿ.) ಹಾಗೂ ಬಿಬಿಎಂಪಿಯ ಆಡಳಿತ ಪಕ್ಷದ ಮಾಜಿ ನಾಯಕ ರಮೇಶ್ ಎನ್.ಆರ್ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದಾರೆ. ಆ ದೂರಿನಲ್ಲಿ ಈ ಹಿಂದೆ 2013-2018 ರ ಅವಧಿಯಲ್ಲಿ ಸಿದ್ಧರಾಮಯ್ಯನವರ ಆಡಳಿತಾವಧಿಯಲ್ಲಿ, ಅವರ ಸರ್ಕಾರದ ಸಾಧನೆಗಳ ಪ್ರಚಾರ ಕಾರ್ಯಗಳಿಗೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇರುವ ಪಾಲಿಕೆಯ ಒಡೆತನದ 493 ಬಸ್ ತಂಗುದಾಣ (Bus Shelter) ಗಳನ್ನು ಬಳಸಿಕೊಂಡು, ಬಿಬಿಎಂಪಿ ಗೆ ಕಾನೂನು ರೀತ್ಯಾ ರಾಜ್ಯ ಸರ್ಕಾರವು ಪಾವತಿಸಬೇಕಿದ್ದ ₹ 68,14,90,236 /- ಗಳನ್ನು ಪಾವತಿಸದೆ ವಂಚಿಸಿರುತ್ತಾರೆ ಎಂದಿದ್ದಾರೆ.

2015-2017 ರ ಎರಡು ವರ್ಷಗಳ ಅವಧಿಯಲ್ಲಿ ಬಿಬಿಎಂಪಿ ಯ 493 ಬಸ್ ಷೆಲ್ಟರ್ ಗಳನ್ನು ತಮ್ಮ ಸರ್ಕಾರದ ಸಾಧನೆಗಳ ಪ್ರಚಾರ ಕಾರ್ಯಗಳಿಗೆಂದು ಬಳಸಿಕೊಂಡು, ನಯಾಪೈಸೆಯಷ್ಟೂ ಜಾಹಿರಾತು ಶುಲ್ಕ ಪಾವತಿಸದ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ACB ಮತ್ತು ಲೋಕಾಯುಕ್ತದಲ್ಲಿ ದಾಖಲೆಗಳ ಸಹಿತ ದೂರುಗಳನ್ನು ದಾಖಲಿಸಲಾಗಿತ್ತು ಎಂದು ಹೇಳಿದ್ದಾರೆ.

ನಿರ್ಧಿಷ್ಟ ಪ್ರಮಾಣದ ಆದಾಯದ ಮೂಲಗಳನ್ನಷ್ಟೇ ಹೊಂದಿರುವ ಹಾಗೂ ಕೇವಲ ಆಸ್ತಿ ತೆರಿಗೆ, ನಕ್ಷೆ ಮಂಜೂರಾತಿ ಶುಲ್ಕ, ಟ್ರೇಡ್ ಲೈಸೆನ್ಸ್ ಶುಲ್ಕ, ರಸ್ತೆ ಅಗೆತ ಶುಲ್ಕ ಮತ್ತು ಜಾಹಿರಾತು ಶುಲ್ಕ ಗಳನ್ನಷ್ಟೇ ಅವಲಂಬಿಸಿರುವ ಬಿಬಿಎಂಪಿ ಗೆ ವಾರ್ಷಿಕವಾಗಿ ಕನಿಷ್ಠ ₹. 10,000 ಕೋಟಿ ರೂ.ಗಳಷ್ಟು ಹಣ ತನ್ನ ಅಧಿಕಾರಿ / ನೌಕರರ ವೇತನಗಳಿಗಾಗಿ ಮತ್ತು ಉದ್ಯಾನವನಗಳು / ಬೀದಿ ದೀಪಗಳು / ಹದಗೆಟ್ಟ ರಸ್ತೆಗಳ ದುರಸ್ತಿ ನಿರ್ವಹಣೆ ಕಾರ್ಯಗಳಿಗೆಂದು ವೆಚ್ಚವಾಗುತ್ತದೆ ಎಂದು ತಿಳಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವು ತನ್ನ ಸರ್ಕಾರದ ಸಾಧನೆಗಳಿಗಾಗಿ ಪಾಲಿಕೆಯ 493 ಬಸ್ ಷೆಲ್ಟರ್ ಗಳನ್ನು ಬಳಸಿಕೊಂಡು, ಬಿಬಿಎಂಪಿ ಗೆ ಕಾನೂನು ರೀತ್ಯಾ ಪಾವತಿಸಲೇ ಬೇಕಿದ್ದ ₹ 68,14,90,236 /- ಗಳನ್ನು ಪಾವತಿಸದೇ ವಂಚಿಸಿದ್ದ ಸಂಬಂಧ ACB, ಲೋಕಾಯುಕ್ತದಲ್ಲಿ ದೂರುಗಳು ದಾಖಲಾದ ನಂತರ ಎಚ್ಚೆತ್ತುಕೊಂಡಿದ್ದ ಬಿಬಿಎಂಪಿ ಯ ಅಂದಿನ ವಿಶೇಷ ಆಯುಕ್ತರು (ಹಣಕಾಸು) ಅವರು ದಿನಾಂಕ 05/07/2017 ರಂದು ಒಟ್ಟು ₹. 12,98,45,470 /- ಮೊತ್ತವನ್ನು ಪಾಲಿಕೆಗೆ ಪಾವತಿಸುವಂತೆ ಅಂದಿನ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ Demand Notice ಅನ್ನು ನೀಡಿದ್ದರು ಎಂದು ಹೇಳಿದ್ದಾರೆ.

ಆದರೂ ಸಹ ಸಿದ್ದರಾಮಯ್ಯ ಸರ್ಕಾರ ಈ Demand Notice ಗೆ ಕವಡ ಕಾಸಿನ ಕಿಮ್ಮತ್ತನ್ನೂ ನೀಡಿರಲಿಲ್ಲ… ಸಿದ್ದರಾಮಯ್ಯ ನವರು ಎರಡನೇ ಬಾರಿ ಮುಖ್ಯಮಂತ್ರಿಗಳಾದ ನಂತರ, ಅವರ ಪ್ರಭಾವ ಮತ್ತು ಒತ್ತಡಗಳಿಗೆ ಒಳಗಾಗಿದ್ದ ಲೋಕಾಯುಕ್ತ ಪೋಲೀಸರು, “ಸಿದ್ದರಾಮಯ್ಯ ಸರ್ಕಾರವು ಬಿಬಿಎಂಪಿ ಗೆ ₹ 68,14,90,236 /- ಗಳಷ್ಟು ಜಾಹಿರಾತು ಶುಲ್ಕವನ್ನು ವಂಚಿಸಿದ್ದ ಹಗರಣ” ಕ್ಕೆ ಸಂಬಂಧಿಸಿದಂತೆ ನಾನು ನೀಡಿದ್ದ ದೂರನ್ನು ಯಾವುದೇ ಸೂಚನೆ ಇಲ್ಲದೆಯೇ ದಿನಾಂಕ 26/07/2024 ರಂದು ಮುಕ್ತಾಯಗೊಳಿಸಿತ್ತು  ಎಂದಿದ್ದಾರೆ.

ಈ ಮಹಾ ವಂಚನೆಯ ಹಗರಣಕ್ಕೆ ಸಂಬಂಧಿಸಿದ ಸಂಪೂರ್ಣ ದಾಖಲೆಗಳ ಸಹಿತವಾಗಿ ದೂರನ್ನು ನೀಡಿದ್ದರೂ ಕೂಡ ಪಕ್ಷಪಾತ ಧೋರಣೆಯಿಂದ ಮತ್ತು ಸಿದ್ದರಾಮಯ್ಯ ನವರ ಒತ್ತಡಕ್ಕೆ ಒಳಗಾಗಿ ಸದರಿ ಪ್ರಕರಣವನ್ನು ಮುಕ್ತಾಯಗೊಳಿಸಿರುವ ಲೋಕಾಯುಕ್ತ ಪೋಲೀಸರ ನಡೆಯನ್ನು ವಿರೋಧಿಸಿ “ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ” ದಲ್ಲಿ ಇಂದು “ಖಾಸಗಿ ದೂರನ್ನು” ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಅಂದಿನ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, 2015-2017 ರ ಅವಧಿಯಲ್ಲಿ “ವಾರ್ತಾ ಇಲಾಖೆ” ಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ M.ಲಕ್ಷ್ಮಿನಾರಾಯಣ್ IAS , ಮತ್ತು ಮಣಿವಣ್ಣನ್ IAS ಅವರುಗಳ ವಿರುದ್ಧ “ತನಿಖೆಗೆ ಆದೇಶಿಸುವಂತೆ ಕೋರಿ” PCR ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಮಸೀದಿ ಮುಂದೆ ಗಣೇಶೋತ್ಸವ ಮೆರವಣಿಗೆ ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?: ಆರ್ ಅಶೋಕ್ ಪ್ರಶ್ನೆ

BIG NEWS : ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಕೇಂದ್ರ ಸರ್ಕಾರಕ್ಕೆ ಕೊಟ್ಟ ತಪರಾಕಿ : ಸಿಎಂ ಸಿದ್ದರಾಮಯ್ಯ

BREAKING: ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ | Nandini Milk Price Hike

Share. Facebook Twitter LinkedIn WhatsApp Email

Related Posts

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

12/10/2025 1:11 PM1 Min Read

BREAKING : ರಾಜ್ಯದ 10 ಮಂದಿ ಸಾಹಿತಿಗಳಿಗೆ 2024 ರ ‘ಸಾಹಿತ್ಯಶ್ರೀ’ ಪ್ರಶಸ್ತಿ ಘೋಷಣೆ : ಇಲ್ಲಿದೆ ವಿಜೇತರ ಪಟ್ಟಿ

12/10/2025 1:02 PM1 Min Read

BREAKING : `ನಮ್ಮ ಮೆಟ್ರೋ’ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ : ಸಂಚಾರದಲ್ಲಿ ವ್ಯತ್ಯಯ

12/10/2025 12:42 PM1 Min Read
Recent News

ಗಡಿಯಲ್ಲಿ ರಾತ್ರಿಯಿಡೀ ನಡೆದ ಘರ್ಷಣೆಯಲ್ಲಿ 58 ಪಾಕಿಸ್ತಾನಿ ಸೈನಿಕರು ಸಾವು: ಅಫ್ಘಾನಿಸ್ತಾನ ಹೇಳಿಕೆ

12/10/2025 1:15 PM

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

12/10/2025 1:11 PM

BREAKING : ರಾಜ್ಯದ 10 ಮಂದಿ ಸಾಹಿತಿಗಳಿಗೆ 2024 ರ ‘ಸಾಹಿತ್ಯಶ್ರೀ’ ಪ್ರಶಸ್ತಿ ಘೋಷಣೆ : ಇಲ್ಲಿದೆ ವಿಜೇತರ ಪಟ್ಟಿ

12/10/2025 1:02 PM

BREAKING: ಭಾರತದಲ್ಲಿ ನಡೆದ 2ನೇ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರನ್ನು ಸೇರಿಸಿದ ಅಫ್ಘಾನಿಸ್ತಾನದ ವಿದೇಶಾಂಗ ಸಚಿವೆ

12/10/2025 12:58 PM
State News
KARNATAKA

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

By kannadanewsnow5712/10/2025 1:11 PM KARNATAKA 1 Min Read

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ…

BREAKING : ರಾಜ್ಯದ 10 ಮಂದಿ ಸಾಹಿತಿಗಳಿಗೆ 2024 ರ ‘ಸಾಹಿತ್ಯಶ್ರೀ’ ಪ್ರಶಸ್ತಿ ಘೋಷಣೆ : ಇಲ್ಲಿದೆ ವಿಜೇತರ ಪಟ್ಟಿ

12/10/2025 1:02 PM

BREAKING : `ನಮ್ಮ ಮೆಟ್ರೋ’ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ : ಸಂಚಾರದಲ್ಲಿ ವ್ಯತ್ಯಯ

12/10/2025 12:42 PM

BREAKING : ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಪ್ರಯತ್ನ ನಡೆದಿದೆ : ಆರ್.ಅಶೋಕ್ ಆರೋಪ

12/10/2025 12:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.