Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ ಜಾರಿ: ರಾಜ್ಯದ ಯುವಕರಿಗೆ ವಿದೇಶದಲ್ಲಿ ಉದ್ಯೋಗ.!
KARNATAKA

ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ ಜಾರಿ: ರಾಜ್ಯದ ಯುವಕರಿಗೆ ವಿದೇಶದಲ್ಲಿ ಉದ್ಯೋಗ.!

By kannadanewsnow0902/08/2024 6:22 PM

ಬೆಂಗಳೂರು : ಸರ್ಕಾರದ ಕ್ರಾಂತಿಕಾರಿ ಯೋಜನೆಯಿಂದಾಗಿ ರಾಜ್ಯದ ಬಡ ಯುವಕರು ಯೂರೋಪ್, ಹಂಗೇರಿ ಸೇರಿದಂತೆ ವಿವಿಧ ದೇಶಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದು, ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರ ದೂರದೃಷ್ಟಿ ಹಾಗೂ ಅವರ ಸಮುಚಿತ ಮಾರ್ಗದರ್ಶನದಲ್ಲಿ ಈ ಯೋಜನೆ ಉತ್ತಮವಾಗಿ ಅನುಷ್ಠಾನಗೊಳ್ಳುತ್ತಿದೆ ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಗ್ರಂಥಾಲಯ ಇಲಾಖೆ ಆಯುಕ್ತರಾಗಿರುವ ಎಂ. ಕನಗವಲ್ಲಿ ಅವರು ಹೇಳಿದರು.

ಚಿತ್ರದುರ್ಗದ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಕಚೇರಿ ಹಾಗೂ ನಗರದ ಕೇಂದ್ರ ಗ್ರಂಥಾಲಯಕ್ಕೆ ಶುಕ್ರವಾರದಂದು ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಅವರು ಮಾಹಿತಿ ನೀಡಿದರು.

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ರಾಜ್ಯದ ಯುವಕರಿಗೆ ವಿದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆ ಅನುಷ್ಠಾನಗೊಳಿಸುತ್ತಿದೆ, ಕೇವಲ ಕಳೆದೆರಡು ತಿಂಗಳಿನಲ್ಲಿಯೇ ರಾಜ್ಯದ ಸುಮಾರು 150 ಕ್ಕೂ ಹೆಚ್ಚು ಯುವಜನರು ಸ್ಲೋವಾಕಿಯಾ, ಹಂಗೇರಿ ಮುಂತಾದ ದೇಶಗಳಿಗೆ ವಿವಿಧ ಉದ್ಯೋಗಕ್ಕೆ ಆಯ್ಕೆಯಾಗಿ ತೆರಳಿದ್ದು, ಅವರು ವಿದೇಶಕ್ಕೆ ತೆರಳಲು ನಿಗಮದ ವತಿಯಿಂದಲೇ ಅವರಿಗೆ ಎಲ್ಲ ವ್ಯವಸ್ಥೆ ಮಾಡಿಕೊಡಲಾಗಿದೆ.  ಐಟಿಐ, ಡಿಪ್ಲೋಮಾ ಮುಂತಾದ ವೃತ್ತಿಪರ ಕೋರ್ಸ್‍ಗಳನ್ನು ವ್ಯಾಸಂಗ ಮಾಡಿರುವ ಯುವಕರು, ಇಲ್ಲಿ ಉದ್ಯೋಗಕ್ಕಾಗಿ ಹರಸಾಹಸ ಪಡುವಂತಹ ಸಂದರ್ಭದಲ್ಲಿ ರಾಜ್ಯದ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರ ದೂರದೃಷ್ಟಿ ಮತ್ತು ಉತ್ತಮ ಮಾರ್ಗದರ್ಶನದಂತೆ, ಈ ಯುವಕರಿಗೆ ವಿದೇಶದಲ್ಲಿ ಕೈತುಂಬಾ ಸಂಬಳ ಪಡೆದು, ತಮ್ಮ ಭವಿಷ್ಯ ರೂಪಿಸಿಕೊಳ್ಳುವಂತಾಗಲು ನಿಗಮವು ಈ ಯೋಜನೆ ಅನುಷ್ಠಾನಗೊಳಿಸುತ್ತಿದೆ ಎಂದರು.

ಈವರೆಗೆ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಯುವಜನರನ್ನು ನಾನಾ ದೇಶಗಳಿಗೆ ಉದ್ಯೋಗಕ್ಕಾಗಿ ಕಳುಹಿಸಿಕೊಡಲಾಗಿದೆ.  ಯುವಜನರ ವೃತ್ತಿಪರ ಕೋರ್ಸ್‍ಗೆ ಅನುಗುಣವಾಗಿ ವಿದೇಶದಲ್ಲಿ ನೌಕರಿ ಗಿಟ್ಟಿಸಿಕೊಳ್ಳಲು ಅನುಕೂಲವಾಗುವಂತೆ ಅವರಿಗೆ ಸ್ಥಳೀಯವಾಗಿ ಉತ್ತಮ ಕೌಶಲ್ಯ ತರಬೇತಿ ನೀಡಲಾಗುತ್ತಿದೆ.  ವಿವಿಧ ದೇಶಗಳ ಜೊತೆ ಒಡಂಬಡಿಕೆ ಮಾಡಿಕೊಂಡು, ಅಂತಹ ಅಭ್ಯರ್ಥಿಗಳಿಗೆ ಬಿಡದಿಯ ಟೊಯೋಟಾ, ಕಿರ್ಲೋಸ್ಕರ್ ನಲ್ಲಿ ತರಬೇತಿಯನ್ನು ಕೊಡಿಸಿ, ಪ್ರತಿ ಅಭ್ಯರ್ಥಿಗೆ ತರಬೇತಿಗಾಗಿ ವೆಚ್ಚವಾಗುತ್ತಿದ್ದ ಸುಮಾರು 35 ಸಾವಿರ ರೂ. ಗಳನ್ನು ನಿಗಮದಿಂದಲೇ ವೆಚ್ಚ ಭರಿಸಲಾಗಿದೆ.  ಸ್ಲೋವಾಕಿಯಾ ದೇಶದಲ್ಲಿ ಐಟಿಐ, ಡಿಪ್ಲೋಮಾ ಉತ್ತೀರ್ಣರಾದ ಯುವಜನರಿಗೆ ನೇಮಕಾತಿ ನಡೆದು, ಕಳೆದ ಜೂ. 05 ರಿಂದ ಈವರೆಗೆ ವಿವಿಧ ತಂಡಗಳಲ್ಲಿ ಉದ್ಯೋಗಕ್ಕಾಗಿ ಕಳುಹಿಸಿಕೊಡಲಾಗಿದೆ. ಇವರಿಗೆ ತಿಂಗಳಿಗೆ 970 ಯೂರೋ ಅಂದರೆ ಸುಮಾರು 86 ಸಾವಿರ ರೂಪಾಯಿ ವೇತನ ನೀಡಲಾಗುತ್ತಿದೆ.  ಇದೇ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯಿಂದ ಆಟೋಮೊಬೈಲ್ ಡಿಪ್ಲೋಮಾ ಓದಿದ್ದ ಮೆಹ್ತಾಬ್ ಎಸ್ ಹೆಬ್ಬಳ್ಳಿ ಎಂಬ ಅಭ್ಯರ್ಥಿ ಈಗಾಗಲೆ ಉದ್ಯೋಗ ಪಡೆದು, ಸ್ಲೊವಾಕಿಯಾ ದೇಶಕ್ಕೆ ತೆರಳಿದ್ದಾನೆ. ಇತ್ತೀಚೆಗಷ್ಟೇ ಸುಮಾರು 37 ಚಾಲಕರನ್ನು ಉದ್ಯೋಗಕ್ಕಾಗಿ ಹಂಗೇರಿಗೆ ಕಳುಹಿಸಿಕೊಡಲಾಗಿದೆ.  ಅಭ್ಯರ್ಥಿಗಳಿಗೆ ತರಬೇತಿ, ವೀಸಾ ವ್ಯವಸ್ಥೆ, ವಿವಿಧ ದಾಖಲಾತಿಗಳ ಪ್ರಮಾಣಪತ್ರ ಪರಿಶೀಲನೆ ಮುಂತಾದ ಕಾರ್ಯಗಳಿಗೆ ನಿಗಮವೇ ಒತ್ತಾಸೆಯಾಗಿ ನಿಂತಿದೆ.  ಮುಂದಿನ ದಿನಗಳಲ್ಲಿ ಆಸ್ಟ್ರೇಲಿಯಾ, ಜಪಾನ್, ಫಿನ್ಲ್ಯಾಂಡ್, ಜರ್ಮನಿ ಮುಂತಾದ ದೇಶಗಳಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಲು ನಿಗಮವು ಯೋಜಿಸಿದೆ, ಈ ನಿಟ್ಟಿನಲ್ಲಿ ಈಗಾಗಲೆ ಕಾರ್ಯಪ್ರವೃತ್ತವಾಗಿದೆ ಎಂದು ಎಂ. ಕನಗವಲ್ಲಿ ಅವರು ಹೇಳಿದರು.

ಚಿತ್ರದುರ್ಗದ ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿದ ಇಲಾಖಾ ಆಯುಕ್ತರಾದ ಎಂ. ಕನಗವಲ್ಲಿ ಅವರು, ಗ್ರಂಥಾಲಯದ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಬಳಿಕ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಓದುಗರಿಗೆ ಉತ್ತಮ ವಾತಾವರಣ ನಿರ್ಮಿಸಬೇಕು, ಓದುಗರ ಸೆಳೆಯಲು ಉತ್ತಮ ವಾತಾವರಣ, ಸೇವೆ ನೀಡಬೇಕು. ಓದುಗರಿಗೆ ಸರಿಯಾದ ಆಸನ, ನೀರು, ಉತ್ತಮ ಗಾಳಿ, ಬೆಳಕು, ಶೌಚಾಲಯ ವ್ಯವಸ್ಥೆ ಸೇರಿದಂತೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಓದುಗರ ಆಸಕ್ತಿಗನುಗುಣವಾಗಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ಪುಸ್ತಕಗಳನ್ನು ತರಿಸಿ, ಗ್ರಂಥಾಲಯದಲ್ಲಿ ಲಭ್ಯವಾಗುವಂತೆ ಮಾಡಬೇಕು ಎಂದು ತಿಳಿಸಿದರು.

ನಗರದ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಸಭಾಂಗಣ, ಸ್ಪರ್ಧಾತ್ಮಕ ವಿಭಾಗ, ದಿನಪತ್ರಿಕೆ ವಿಭಾಗಗಳಿಗೆ ಭೇಟಿ ನೀಡಿದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಯುಕ್ತರಾದ ಎಂ.ಕನಗವಲ್ಲಿ ಅವರು ಓದುಗರೊಂದಿಗೆ ಸಂವಾದ ನಡೆಸಿ, ಗ್ರಂಥಾಲಯದ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ನಂತರ ಚಿತ್ರದುರ್ಗ ನಗರದ ಕೆಹೆಚ್‍ಬಿ ಕಾಲೋನಿಯ ಗ್ರಂಥಾಲಯದ ಕಟ್ಟಡದ ನಿವೇಶನಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಇದಕ್ಕೂ ಮುನ್ನ ತಾಲ್ಲೂಕಿನ ಕೆ. ಬಳ್ಳೇಕಟ್ಟೆ ಬಳಿಯ ಬಿದರೆಕೆರೆ ಹತ್ತಿರ ಕೌಶಲ್ಯಾಭಿವೃದ್ಧಿ ಇಲಾಖೆಗೆ ಸೇರಿದ 45.13 ಎಕರೆ ವಿಸ್ತೀರ್ಣದ ಭೂಮಿಗೆ 1.98 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಾಂಪೌಂಡ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೌಶಲ್ಯಾಭಿವೃದ್ಧಿ ಇಲಾಖೆಯ ಜಿಲ್ಲಾ ಅಧಿಕಾರಿ ಟಿ. ವೇಮಣ್ಣ, ಜಿಲ್ಲಾ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿ ಸುಮಾ ಕೋಡಿಹಳ್ಳಿ, ನಗರ ಕೇಂದ್ರ ಗ್ರಂಥಾಲಯಾಧಿಕಾರಿ ಕೊಳ್ಳಿ ಬಸವರಾಜ್, ದಾವಣಗೆರೆ ಜಿಲ್ಲಾ ಉಪನಿರ್ದೇಕ ಪಿ.ಆರ್.ತಿಪ್ಪೇಸ್ವಾಮಿ ಸೇರಿದಂತೆ ಗ್ರಂಥಾಲಯ ಸಿಬ್ಬಂದಿ ಇದ್ದರು.

BREAKING:ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ : ಟೆಲ್ ಅವೀವ್ಗೆ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಿದ ‘ಏರ್ ಇಂಡಿಯಾ’

BREAKING: ಮಂಗಳೂರಲ್ಲಿ ನಡು ರಸ್ತೆಯಲ್ಲೇ ‘ಕಾಲೇಜು ವಿದ್ಯಾರ್ಥಿ’ಗಳ ನಡುವೆ ಹೊಡೆದಾಟ

Share. Facebook Twitter LinkedIn WhatsApp Email

Related Posts

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

11/05/2025 6:02 PM1 Min Read

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM1 Min Read

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM1 Min Read
Recent News

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM

BREAKING : ‘ಆಪರೇಷನ್ ಸಿಂಧೂರ್’ ನಲ್ಲಿ ಉಗ್ರರ ನೆಲೆಗಳನ್ನು ನಾಶ ಮಾಡಿರೋ ಸಾಕ್ಷಿಗಳಿವೆ : ಫೋಟೋ ರಿಲೀಸ್ ಮಾಡಿದ ಸೇನೆ

11/05/2025 6:55 PM
State News
KARNATAKA

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

By kannadanewsnow0511/05/2025 6:02 PM KARNATAKA 1 Min Read

ಬೆಂಗಳೂರು : ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ಲ ಅನ್ನೋದು ಮತ್ತೆ ಮತ್ತೆ ಸಾಬೀತು ಆಗ್ತಿದೆ. ಇದೀಗ ಮಹಿಳಾ ಸಹೋದ್ಯೋಗಿಗಳ ಭಾವಚಿತ್ರಗಳನ್ನು…

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.