ಬೆಂಗಳೂರು : ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಆರೋಪಿಗಳ ಮನೆಯಲ್ಲಿ ಸಿಕ್ಕ 70 ಲಕ್ಷ ರೂ. ಹಣದ ತನಿಖೆ ನಡೆಸುವಂತೆ ಆದಾಯ ತೆರಿಗೆ ಇಲಾಖೆಗೆ ಪೊಲೀಸರು ಪತ್ರ ಬರೆದಿದ್ದಾರೆ.

ರೇಣುಕಾಸ್ವಾಮಿ ಕೊಲೆಯ ನಂತರ ಶವ ಸಾಗಾಟಕ್ಕೆ ನಟ ದರ್ಶನ್‌30 ಲಕ್ಷ ರೂ. ಡೀಲ್‌ ಕೊಟ್ಟಿದ್ದರು ಮತ್ತು ಆರೋಪಿಗಳ ಮನೆಯಲ್ಲಿ 70 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದ್ದು, ಈ ಸಂಬಂದ ತನಿಖೆ ನಡೆಸುವಂತೆ ಕೋರಿ ಐಟಿ ಇಲಾಖೆಗೆ ಪೊಲೀಸರು ಮನವಿ ಮಾಡಿದ್ದಾರೆ.

ಜೂನ್‌ 19 ರಂದು ಆರ್.‌ ಆರ್‌ ನಗರದ ದರ್ಶನ್‌ ಮನೆಯಲ್ಲಿ 37.40 ಲಕ್ಷ ರೂ. ಹಾಗೂ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಉಳಿದ ಹಣ ಆರೋಪಿಗಳ ಮನೆಯಲ್ಲಿ ಉಳಿದ ಹಣ ಜಪ್ತಿಯಾಗಿತ್ತು. ಹೀಗಾಗಿ ಪೊಲೀಸರು ತನಿಖೆಗೆ ಐಟಿ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

Share.
Exit mobile version