ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಕೋಲಾಹಲ ಸೃಷ್ಟಿಯಾಗಿದ್ದು, ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಹೇಳಿಕೊಮಡು ದುಷ್ಕರ್ಮಿಗಳು ವಿದ್ಯಾರ್ಥಿಯೊಬ್ಬನನ್ನು ಅಪಹರಣ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಕಿಡ್ನಾಪ್ ಮಾಡಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಅಪಹರಣವಾದ ವಿದ್ಯಾರ್ಥಿ ಜೀವನ್ ಜೈನ್ ಅಪಹರಣ ಮಾಡಿದ ನಾಲ್ವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾನೆ. . ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್, ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಮೂರು ಲಕ್ಷ ಸಾಲ ಪಡೆದಿದ್ದ. ತಡವಾಗಿ ಹಣ ಕೊಟ್ಟಿದ್ದಕ್ಕೆ ಅಪಹರಿಸಿ ಬೆದರಿಕೆ ಹಾಕಲಾಗಿದೆ ಎಂದು ವಿದ್ಯಾರ್ಥಿ ದೂರಿನಲ್ಲಿ ತಿಳಿಸಿದ್ದಾನೆ.