Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂದು ಭೂಮಿಗೆ ಅಪ್ಪಳಿಸಲಿದೆ ಪ್ರಬಲ ಸೌರ ಬಿರುಗಾಳಿ; ಭಾರತದಲ್ಲೂ ಅರೋರಾ ವಿಸ್ಮಯ ಸಾಧ್ಯತೆ | WATCH VIDEO

​1,000,000,000,000 ಡಾಲರ್‌ನತ್ತ ಎಲಾನ್ ಮಸ್ಕ್: ಜಗತ್ತಿನ ಮೊದಲ ‘ಟ್ರಿಲಿಯನೇರ್’ ಆಗಿ ಇತಿಹಾಸ ಸೃಷ್ಟಿಸಲಿದ್ದಾರೆಯೇ ಟೆಸ್ಲಾ ಸಿಇಒ?

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಮಡಿಕೇರಿಯಲ್ಲಿ ಕಾಫಿ ಬೆಳೆಗಾರ ಧಾರುಣ ಸಾವು
KARNATAKA

ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಮಡಿಕೇರಿಯಲ್ಲಿ ಕಾಫಿ ಬೆಳೆಗಾರ ಧಾರುಣ ಸಾವು

By ವಸಂತ ಬಿ ಈಶ್ವರಗೆರೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಾನವ ಹಾಗೂ ಕಾಡಾನೆಗಳ ನಡುವಿನ ಸಂಘರ್ಷ ಮುಂದುವರೆದಿದ್ದು, ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಕಾಯಿಮಾನಿಯಲ್ಲಿ ನಡೆದಿದೆ.

ಕಾಯಿಮಾನಿ ನಿವಾಸಿ ರತ್ತು ಮೃತಪಟ್ಟ ದುರ್ದೈವಿ. ಇವರು ಎಂದಿನಂತೆ ತಮ್ಮ ಕಾಫಿ ತೋಟದ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ಸಂಭವಿಸಿದೆ.

ನಡೆದಿದ್ದೇನು?

ರತ್ತು ಅವರು ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಕಾಡಾನೆಯೊಂದು ಎದುರಾಗಿದೆ. ತಪ್ಪಿಸಿಕೊಳ್ಳುವ ಮೊದಲೇ ಆನೆ ರತ್ತು ಅವರ ಮೇಲೆ ದಾಳಿ ನಡೆಸಿ, ಕಾಲಿನಿಂದ ತುಳಿದು ಸಾಯಿಸಿದೆ. ಆನೆಯ ಭೀಕರ ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡ ರತ್ತು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೀಡು ಬಿಟ್ಟಿವೆ 8-10 ಆನೆಗಳ ಹಿಂಡು:

ಕಳೆದ ಕೆಲವು ದಿನಗಳಿಂದ ಶ್ರೀಮಂಗಲ ಹೋಬಳಿಯ ಕಿರ್ಚಿ ಹಾಗೂ ಕಾಯಿಮಾನಿ ಭಾಗದಲ್ಲಿ 8 ರಿಂದ 10 ಕಾಡಾನೆಗಳ ಹಿಂಡು ಬೀಡು ಬಿಟ್ಟಿದೆ. ಇದರಿಂದಾಗಿ ಸ್ಥಳೀಯ ನಿವಾಸಿಗಳು ಮತ್ತು ತೋಟದ ಕಾರ್ಮಿಕರು ಕೆಲಸಕ್ಕೆ ಹೋಗಲು ಜೀವಭಯ ಪಡುವಂತಾಗಿದೆ. ಕಾಡಾನೆಗಳ ನಿರಂತರ ಸಂಚಾರದಿಂದಾಗಿ ಜನರು ಮನೆಯಿಂದ ಹೊರಬರಲು ಆತಂಕಪಡುತ್ತಿದ್ದಾರೆ.

ಗ್ರಾಮಸ್ಥರ ಆಕ್ರೋಶ ಮತ್ತು ಒತ್ತಾಯ:

ಘಟನೆಯಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಕಿಡಿಕಾರಿದ್ದಾರೆ. ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಗ್ರಾಮದ ಸುತ್ತಮುತ್ತಲ ತೋಟಗಳಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು ಕಾಡಿಗೆ ಅಟ್ಟಬೇಕು ಎಂದು ಒತ್ತಾಯಿಸಿದ್ದಾರೆ. ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದರೂ ಶಾಶ್ವತ ಪರಿಹಾರ ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ಸದ್ಯ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಆನೆ ದಾಳಿಗೆ ಕಾಫಿ ಬೆಳೆಗಾರ ಸಾವು: ಈಶ್ವರ ಖಂಡ್ರೆ ಸಂತಾಪ

ಇಂದು ಮಡಿಕೇರಿಯಲ್ಲಿ ಕಾಡಾನೆ ದಾಳಿಯಿಂದ ಕಾಫಿ ಬೆಳೆಗಾರರೊಬ್ಬರು ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಮಾನವ- ಆನೆ ಸಂಘರ್ಷ ತಡೆಯಲು ಸರ್ಕಾರ ಮತ್ತು ಇಲಾಖೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದೆ. ಜೀವಕ್ಕೆ ಬೆಲೆ ನೀಡಲು ಸಾಧ್ಯವೆ ಇಲ್ಲ. ಈ ನೋವಿನ ಸಂದರ್ಭದಲ್ಲಿ ನೊಂದ ಕುಟುಂಬದ ಜೊತೆ ಸರ್ಕಾರ ಇದೆ ಎಂದು ಹೇಳಿದರು.

ಆನೆಗಳ ಸಮಸ್ಯೆ ಪರಿಹರಿಸಲು ಆನೆ ಧಾಮ ಮಾಡುವ ಬಗ್ಗೆ ಸರ್ಕಾರ ಯೋಜನೆ ರೂಪಿಸಿತ್ತು. ಅದಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಗುವಲ್ಲಿ ತೊಡಕಾಗಿದೆ. ಈ ಸಮಸ್ಯೆ ಪರಿಹರಿಸಿಕೊಂಡು ಆನೆ ಧಾಮ ನಿರ್ಮಾಣದ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

ಬೆಳಗಾವಿಯಲ್ಲಿ ಭೀಕರ ಮರ್ಡರ್: ಹಳೆ ವೈಷಮ್ಯ, ರಾಜಕೀಯ ವಿರೋಧಕ್ಕೆ ಜಾತ್ರೆಯಲ್ಲೇ ವ್ಯಕ್ತಿ ಕಗ್ಗೊಲೆ

BIG BREAKING: ನಾಳೆ ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಪ್ರಕಟ | Karnataka 2nd PU Results

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರ ಮಹತ್ವದ ಆದೇಶ

1 Min Read

BIG NEWS : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3395 ಹುದ್ದೆಗಳ ನೇಮಕಾತಿ : 5 ವರ್ಷ ವಯೋಮಿತಿ ಸಡಿಲಿಕೆ

2 Mins Read

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ `ಟೊಮೆಟೋ’ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

1 Min Read
Recent News

BREAKING : ಇಂದು ಭೂಮಿಗೆ ಅಪ್ಪಳಿಸಲಿದೆ ಪ್ರಬಲ ಸೌರ ಬಿರುಗಾಳಿ; ಭಾರತದಲ್ಲೂ ಅರೋರಾ ವಿಸ್ಮಯ ಸಾಧ್ಯತೆ | WATCH VIDEO

​1,000,000,000,000 ಡಾಲರ್‌ನತ್ತ ಎಲಾನ್ ಮಸ್ಕ್: ಜಗತ್ತಿನ ಮೊದಲ ‘ಟ್ರಿಲಿಯನೇರ್’ ಆಗಿ ಇತಿಹಾಸ ಸೃಷ್ಟಿಸಲಿದ್ದಾರೆಯೇ ಟೆಸ್ಲಾ ಸಿಇಒ?

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರ ಮಹತ್ವದ ಆದೇಶ

​ದೆಹಲಿ ವಿಮಾನ ನಿಲ್ದಾಣದಲ್ಲಿ ಭೀಕರ ಬಿರುಗಾಳಿ: ನೆಲಕ್ಕುರುಳಿದ ಗ್ರೌಂಡ್ ಉಪಕರಣಗಳು, ಏರ್ ಇಂಡಿಯಾ ವಿಮಾನಗಳಿಗೆ ಹಾನಿ!

State News
KARNATAKA

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರ ಮಹತ್ವದ ಆದೇಶ

By kannadanewsnow57 KARNATAKA 1 Min Read

ಬೆಂಗಳೂರು: ಕಂದಾಯ ಇಲಾಖೆಯ ವಿವಿಧ ವೃಂದದ ನೌಕರರಿಗೆ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಇಲಾಖೆಯ ಅರ್ಹ ಸಿಬ್ಬಂದಿಗೆ ನಿಯಮಾನುಸಾರ…

BIG NEWS : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3395 ಹುದ್ದೆಗಳ ನೇಮಕಾತಿ : 5 ವರ್ಷ ವಯೋಮಿತಿ ಸಡಿಲಿಕೆ

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ `ಟೊಮೆಟೋ’ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

ರಾಜ್ಯದ ಜನತೆಯ ಗಮನಕ್ಕೆ : ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲಿ ಯಾವ ಸೇವೆಗೆ ಎಷ್ಟು ಶುಲ್ಕ? ಇಲ್ಲಿದೆ ಸಂಪೂರ್ಣ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.