Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

FASTag : ವಾಹನ ಸವಾರರಿಗೆ ಸಿಹಿ ಸುದ್ದಿ ; ಈಗ ಟೋಲ್ ಶುಲ್ಕ 15 ರೂ., ಆಗಸ್ಟ್ 15 ರಿಂದ ಜಾರಿ!

09/08/2025 8:06 PM

ಬೆಂಗಳೂರು ಜನತೆ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್ ಸಂಚಾರ’ ಆರಂಭ

09/08/2025 7:54 PM

ರಾಜ್ಯದಲ್ಲಿ ‘ವೈದ್ಯಕೀಯ ಕೋರ್ಸ್’ಗಳ ಪ್ರವೇಶಕ್ಕೆ ಛಾಯ್ಸ್ ದಾಖಲಿಸಲು ಅವಕಾಶ: KEA

09/08/2025 7:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಅಗಲಿದ ಅಪರ್ಣಾ’ ಪಂಚಭೂತಗಳಲ್ಲಿ ಲೀನ: ‘ಅಚ್ಚಕನ್ನಡ ನಿರೂಪಕಿ’ ಇನ್ನೂ ‘ನೆನಪು’ ಮಾತ್ರ | Anchor Aparna
KARNATAKA

BREAKING: ‘ಅಗಲಿದ ಅಪರ್ಣಾ’ ಪಂಚಭೂತಗಳಲ್ಲಿ ಲೀನ: ‘ಅಚ್ಚಕನ್ನಡ ನಿರೂಪಕಿ’ ಇನ್ನೂ ‘ನೆನಪು’ ಮಾತ್ರ | Anchor Aparna

By kannadanewsnow0912/07/2024 2:09 PM

ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಅಚ್ಚ ಕನ್ನಡದ ನಿರೂಪಕಿ ಅಪರ್ಣಾ ಅವರು ನಿನ್ನೆ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಇನ್ನೂ ಅಚ್ಚಕನ್ನಡದ ನಿರೂಪಕಿ ಅಪರ್ಣಾ ನೆನಪು ಮಾತ್ರವೇ ಆಗಿದ್ದಾರೆ.

ಕನ್ನಡ ಭಾಷೆಗೆ ಸ್ವರವಾಗಿದ್ದಂತ ಅಪರ್ಣಾ ಅವರು ನಿನ್ನೆ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು.

ಇಂದು ಬೆಳಗ್ಗೆ 7:30 ಗಂಟೆ ಆಸ್ಪತ್ರೆಯಿಂದ ಅಪರ್ಣಾ ಅವರ ಪಾರ್ಥೀವ ಶರೀರ ತಲುಪಿತ್ತು. ಬನಶಂಕರಿಯ 2ನೇ ಹಂತದಲ್ಲಿರುವಂತ ಮನೆ ಬಳಿ 11:30 ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆ ಬಳಿಕ 1 ಗಂಟೆಗೆ ಬನಶಂಕರಿಯ ವಿದ್ಯುತ್ ಚಿತಾಗಾರಕ್ಕೆ ಅಪರ್ಣಾ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಯಿತು. ಅಲ್ಲಿ ಸ್ಮಾರ್ತ ಬ್ಯಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಿದ ಬಳಿಕ, ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಈಗ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

ಹೀಗಿದೆ ಅಪರ್ಣಾ ಬದುಕಿನ ಜರ್ನಿಯ ಹಿನ್ನೋಟ

ಕ್ಯಾನ್ಸರ್ ನಿಂದ ನಿಧನರಾಗಿರುವಂತ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರು, 1989ರಲ್ಲಿ ನಿರೂಪಕಿಯಾಗಿ ಟಿವಿ ಮಾಧ್ಯಮಕ್ಕೆ ಸೇರಿದರು. ಅದಕ್ಕೂ ಮುನ್ನಾ 1984ರಲ್ಲಿ ತೆರೆಕಂಡಂತ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಮಸಣದ ಹೂ ಚಿತ್ರದಲ್ಲಿಯೂ ಕಾಣಿಸಿಕೊಂಡು, ಸಿನಿ ರಂಗದ ಜರ್ನಿ ಆರಂಭಗೊಂಡಿತ್ತು.

ಮಸಣದ ಹೂ ಬಳಿಕ ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ಅಪರ್ಣಾ ನಟಿಸಿ, ಸ್ಯಾಂಡಲ್ ವುಡ್ ನಟಿಯ ಖ್ಯಾತಿಯನ್ನೂ ಗಳಿಸಿದ್ರು. 90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಅಪರ್ಣಾ ನಿರೂಪಿಸಿದರು. ಆ ನಂತರ ರೇಡಿಯೋ ಜಾಕಿಯಾಗಿ ಕೂಡ ಕೆಲಸ ಮಾಡಿದ್ದಾರೆ. 1998 ರಲ್ಲೇ ದೀಪಾವಳಿ ಕಾರ್ಯಕ್ರಮದಲ್ಲಿ 8 ಗಂಟೆಗಳ ನಿರೂಪಣೆ ಮಾಡಿ ಹೊಸ ದಾಖಲೆ ಬರೆದದ್ದು ಇವರ ಮತ್ತೊಂದು ಕೀರ್ತಿ.

ಮೂಡಲ ಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ರು. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದಾರೆ. ಇಂತಹ ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಕ್ಯಾನ್ಸರ್ ನಿಂದ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆ ಇಂದು ನೆರವೇರಿದ್ದು, ಇನ್ನಿಲ್ಲವಾಗಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

JNUನಲ್ಲಿ ಹಿಂದೂ, ಬೌದ್ಧ, ಜೈನ ಅಧ್ಯಯನ ಕೇಂದ್ರಗಳ ಸ್ಥಾಪನೆ

ಕರ್ನಾಟಕವನ್ನು ಕಾಂಗ್ರೆಸ್‌ ಸರ್ಕಾರ ʻATMʼ ಮಾಡಿ ರಾಹುಲ್‌ ಗಾಂಧಿಗೆ ಹಣ ಕಳುಹಿಸುತ್ತಿದೆ : B.Y. ವಿಜಯೇಂದ್ರ ಆರೋಪ

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್ ಸಂಚಾರ’ ಆರಂಭ

09/08/2025 7:54 PM1 Min Read

ರಾಜ್ಯದಲ್ಲಿ ‘ವೈದ್ಯಕೀಯ ಕೋರ್ಸ್’ಗಳ ಪ್ರವೇಶಕ್ಕೆ ಛಾಯ್ಸ್ ದಾಖಲಿಸಲು ಅವಕಾಶ: KEA

09/08/2025 7:48 PM1 Min Read

ಪ್ರಧಾನಿ ಮೋದಿ ಕೈ ಬಲಪಡಿಸಿ, ದೇಶದ್ರೋಹಿಗಳಿಗೆ ಪಾಠ ಕಲಿಸಿ: ಬೊಮ್ಮಾಯಿ ಕರೆ

09/08/2025 7:29 PM5 Mins Read
Recent News

FASTag : ವಾಹನ ಸವಾರರಿಗೆ ಸಿಹಿ ಸುದ್ದಿ ; ಈಗ ಟೋಲ್ ಶುಲ್ಕ 15 ರೂ., ಆಗಸ್ಟ್ 15 ರಿಂದ ಜಾರಿ!

09/08/2025 8:06 PM

ಬೆಂಗಳೂರು ಜನತೆ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್ ಸಂಚಾರ’ ಆರಂಭ

09/08/2025 7:54 PM

ರಾಜ್ಯದಲ್ಲಿ ‘ವೈದ್ಯಕೀಯ ಕೋರ್ಸ್’ಗಳ ಪ್ರವೇಶಕ್ಕೆ ಛಾಯ್ಸ್ ದಾಖಲಿಸಲು ಅವಕಾಶ: KEA

09/08/2025 7:48 PM

ಪ್ರಧಾನಿ ಮೋದಿ ಕೈ ಬಲಪಡಿಸಿ, ದೇಶದ್ರೋಹಿಗಳಿಗೆ ಪಾಠ ಕಲಿಸಿ: ಬೊಮ್ಮಾಯಿ ಕರೆ

09/08/2025 7:29 PM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್ ಸಂಚಾರ’ ಆರಂಭ

By kannadanewsnow0909/08/2025 7:54 PM KARNATAKA 1 Min Read

ಬೆಂಗಳೂರು: ನಗರದ ಜನತೆಯ ಅನುಕೂಲಕ್ಕಾಗಿ ಹೊಸ ಮಾರ್ಗದಲ್ಲಿ ಬಿಎಂಟಿಸಿಯಿಂದ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಈ ಮೂಲಕ ಬೆಂಗಳೂರಿನ ಜನತೆಗೆ ಗುಡ್…

ರಾಜ್ಯದಲ್ಲಿ ‘ವೈದ್ಯಕೀಯ ಕೋರ್ಸ್’ಗಳ ಪ್ರವೇಶಕ್ಕೆ ಛಾಯ್ಸ್ ದಾಖಲಿಸಲು ಅವಕಾಶ: KEA

09/08/2025 7:48 PM

ಪ್ರಧಾನಿ ಮೋದಿ ಕೈ ಬಲಪಡಿಸಿ, ದೇಶದ್ರೋಹಿಗಳಿಗೆ ಪಾಠ ಕಲಿಸಿ: ಬೊಮ್ಮಾಯಿ ಕರೆ

09/08/2025 7:29 PM

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ ಹಿನ್ನಲೆ: ವಾಹನ ಸವಾರರಿಗೆ ಈ ಸಂಚಾರ ಸಲಹೆ | Bengaluru Traffic Update

09/08/2025 7:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.