Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

BREAKING: KSSIDC, BWSSB ನೇಮಕಾತಿ ಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದಲ್ಲಿ ಹೊಸ `APL-BPL’ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮತ್ತೆ ಆರಂಭ : ಈ ದಾಖಲೆಗಳು ಕಡ್ಡಾಯ
KARNATAKA

GOOD NEWS : ರಾಜ್ಯದಲ್ಲಿ ಹೊಸ `APL-BPL’ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮತ್ತೆ ಆರಂಭ : ಈ ದಾಖಲೆಗಳು ಕಡ್ಡಾಯ

By kannadanewsnow57

ಬೆಂಗಳೂರು: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಈಗ ಮತ್ತೆ ಅವಕಾಶ ನೀಡಲಾಗಿದೆ. ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ.

ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಫಲಾನುಭವಿಗಳು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ahara.kar.nic.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್‌ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಇನ್ನು ಯಾರೆಲ್ಲಾ ಅರ್ಹರನ್ನು ಎಪಿಎಲ್ಗೆ ಸೇರಿಸಲಾಗಿದೆಯೋ ಅವರು ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪರಿಶೀಲನೆ ಬಳಿಕ ಅರ್ಹರು ಎಂದು ತಿಳಿದರೆ ಮಾತ್ರ ಅವರಿಗೆ ಮತ್ತೆ ಬಿಪಿಎಲ್ ಕಾರ್ಡನ್ನು ನೀಡಲಾಗುತ್ತದೆ.

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು

ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದು

ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತವಾಗಿರಲಿದೆ.

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು

ವೋಟರ್ ಐಡಿ

ಆಧಾರ್ ಕಾರ್ಡ್

ವಯಸ್ಸಿನ ಪ್ರಮಾಣ ಪತ್ರ

ಡ್ರೈವಿಂಗ್ ಲೈಸೆನ್ಸ್

ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ

ಮೊಬೈಲ್ ಸಂಖ್ಯೆ

ಸ್ವಯಂ ಘೋಷಿತ ಪ್ರಮಾಣ ಪತ್ರ

ಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದ್ರೇ ಅರ್ಜಿ ಸಲ್ಲಿಸೋದು ಹೇಗೆ ಎನ್ನುವ ಹಂತ ಈ ಕೆಳಗಿದೆ.

ಹೊಸ ಪಡಿತರ ಚೀಟಿಗಾಗಿ ಈ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಿ

kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.

ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ ಕ್ಲಿಕ್ ಮಾಡಿ.

ಇದಲ್ಲದೇ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.

ಈ ಜಾಲತಾಣದಲ್ಲಿ ಕ್ಲಿಕ್ ಮಾಡಿದ ನಂತ್ರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದ್ರೇ..

ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿ

ಈ ಬಳಿಕ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.

ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.

ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ

Application for new `APL-BPL' ration card has resumed in the state: These documents are mandatory
Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

2 Mins Read

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

3 Mins Read

BREAKING: KSSIDC, BWSSB ನೇಮಕಾತಿ ಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

1 Min Read
Recent News

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

BREAKING: KSSIDC, BWSSB ನೇಮಕಾತಿ ಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

​’ಕಡಿಮೆ ವಿದ್ಯಾರ್ಹತೆಯ ಹುದ್ದೆಗೆ ಅತಿಯಾದ ಅರ್ಹತೆ ಹೊಂದಿದವರು ಹಕ್ಕು ಸಾಧಿಸುವಂತಿಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

State News
KARNATAKA

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ತಲೆನೋವಾಗಿ ಪರಿಣಮಿಸಿರುವ ಹಳೆಯ ಟ್ರಾಫಿಕ್ ಫೈನ್ ಮತ್ತು ಸಾರಿಗೆ ಇಲಾಖೆಯ ಬಾಕಿ ದಂಡಗಳನ್ನು ಪಾವತಿಸಲು ಕಾಯುತ್ತಿದ್ದ ವಾಹನ ಮಾಲೀಕರಿಗೆ…

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

BREAKING: KSSIDC, BWSSB ನೇಮಕಾತಿ ಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

ಜಮೀರ್‌ಗೆ ಡಿಸಿಎಂ ಸ್ಥಾನಕ್ಕಾಗಿ ಪಟ್ಟು: ಮಂಡ್ಯದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.