Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಗಾವಿಯಲ್ಲಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ ಪ್ರಕರಣ : ಮತ್ತೆ ನಾಲ್ವರು ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

08/01/2026 3:23 PM

JOB ALERT: ಹೊರ ಗುತ್ತಿಗೆ ಆಧಾರ ಮೇಲೆ ವಿವಿಧ ಖಾಲಿ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನ

08/01/2026 3:23 PM

GOOD NEWS: ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅವಧಿ ವಿಸ್ತರಣೆ

08/01/2026 3:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT: ಹೊರ ಗುತ್ತಿಗೆ ಆಧಾರ ಮೇಲೆ ವಿವಿಧ ಖಾಲಿ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನ
KARNATAKA

JOB ALERT: ಹೊರ ಗುತ್ತಿಗೆ ಆಧಾರ ಮೇಲೆ ವಿವಿಧ ಖಾಲಿ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನ

By kannadanewsnow0908/01/2026 3:23 PM

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ “ಸಖಿ” ಒನ್ ಸ್ಟಾಪ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸಲು ಗುತ್ತಿಗೆ ಆಧಾರ ಮೇಲೆ ಘಟಕ ಆಡಳಿತಾಧಿಕಾರಿಗಳು 03 ಹುದ್ದೆ, ಆಪ್ತ ಸಮಾಲೋಚಕರ 03 ಹುದ್ದೆ, ಸಮಾಜ ಸೇವಾ ಕಾರ್ಯಕರ್ತರ / ಕೇಸ್ ವರ್ಕರ್ 07 ಹುದ್ದೆ, ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) 03 ಹುದ್ದೆ ಮತ್ತು ವಿವಿದೋದ್ದೇಶ ಸ್ವಚ್ಛತಗಾರರು / ಸೆಕ್ಯೂರಿಟಿ 08 ಹುದ್ದೆಗೆ ಆಯ್ಕೆ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ :

ಘಟಕ ಆಡಳಿತಾಧಿಕಾರಿಗಳು ಹುದ್ದೆಗೆ ಎಂ.ಎಸ್ ಡಬ್ಲೂ., ಸ್ನಾತಕೋತ್ತರ ಕಾನೂನು ಪದವಿ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಹೊಂದಿರಬೇಕು. ಸರ್ಕಾರಿ / ಸ್ವಯಂ ಸೇವಾಸಂಸ್ಥೆಗಳಲ್ಲಿ ಕನಿಷ್ಠ 05 ವರ್ಷಗಳ ಸಮಾಲೋಚನ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ / ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ ಪ್ರವೀಣ್ಯತೆ ಹೊಂದಿರಬೇಕು. ಸ್ಥಳೀಯ ಭಾಷೆ ಮತ್ತು ಆಂಗ್ಲ ಭಾಷೆಯಲ್ಲಿ ಪ್ರವೀಣ್ಯತೆ ಹೊಂದಿರಬೇಕು. 24/7 ಹುದ್ದೆಯಾಗಿರುತ್ತದೆ (Residential Staff). ಆಪ್ತ ಸಮಾಲೋಚಕರ ಹುದ್ದೆಗೆ ಎಂ.ಎಸ್ ಡಬ್ಲೂ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಪದವಿ ಹೊಂದಿರಬೇಕು. ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 03 ವರ್ಷಗಳ ಸಮಾಲೋಚನ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ / ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ ಪ್ರವೀಣ್ಯತೆ ಹೊಂದಿರಬೇಕು.

ಸಮಾಜ ಸೇವಾ ಕಾರ್ಯಕರ್ತರ / ಕೇಸ್ ವರ್ಕರ್ ಹುದ್ದೆಗೆ ಬಿ.ಎಸ್.ಡಬ್ಲ್ಯೂ, ಬಿ.ಎ (ಸೋಷಿಯಾಲಜಿ, ಮಹಿಳಾ ಅಧ್ಯಯನ) ಪದವಿ ಹೊಂದಿರಬೇಕು. ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 02 ವರ್ಷಗಳ ಸಮಾಜ ಕಾರ್ಯ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ / ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ ಪ್ರವೀಣ್ಯತೆ ಹೊಂದಿರಬೇಕು. ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) ಹುದ್ದೆಗೆ ಕಾನೂನು ಪದವಿ ಹೊಂದಿರಬೇಕು. ಕಾನೂನು ಸೇವೆಯಲ್ಲಿ 02 ವರ್ಷಗಳ ಅನುಭವ ಹೊಂದಿರಬೇಕು. ಕನ್ನಡ ಭಾಷೆ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ವಿವಿದೋದ್ದೇಶ ಸ್ವಚ್ಛತಗಾರರು / ಸೆಕ್ಯೂರಿಟಿ (ರಾತ್ರಿ ಕಾವಲು) ಹುದ್ದೆಗೆ 7ನೇ ತರಗತಿ ವಿದ್ಯಾರ್ಹತೆ ಹೊಂದಿದ್ದು, ಸಂಬಂಧಿಸಿದ ಅನುಭವ ಹೊಂದಿರಬೇಕು. ವಯೋಮಿತಿ : 18 ರಿಂದ 45 ವರ್ಷ ಒಳಗಿರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಅದ್ಯತೆ ನೀಡಲಾಗುವುದು.

ಆಸಕ್ತ ಮಹಿಳಾ ಅಭ್ಯರ್ಥಿಗಳು ಉಪ ನಿರ್ದೇಶಕರವರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್. ಮರಿಗೌಡ ರಸ್ತೆ, ಬೆಂಗಳೂರು -560029 ಇಲ್ಲಿಗೆ ತಮ್ಮ ವ್ಯಕ್ತಿಗತ ವಿವರ (Resume) ಅನ್ನು ಎಲ್ಲಾ ದಾಖಲೆಗಳೊಂದಿಗೆ ಜನವರಿ 30 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-29578688 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಬೆಳಗಾವಿಯಲ್ಲಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ ಪ್ರಕರಣ : ಮತ್ತೆ ನಾಲ್ವರು ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

08/01/2026 3:23 PM1 Min Read

GOOD NEWS: ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅವಧಿ ವಿಸ್ತರಣೆ

08/01/2026 3:20 PM1 Min Read

BIG NEWS : ಬೆಂಗಳೂರಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತು, ಮರಕ್ಕೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ!

08/01/2026 3:16 PM1 Min Read
Recent News

ಬೆಳಗಾವಿಯಲ್ಲಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ ಪ್ರಕರಣ : ಮತ್ತೆ ನಾಲ್ವರು ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

08/01/2026 3:23 PM

JOB ALERT: ಹೊರ ಗುತ್ತಿಗೆ ಆಧಾರ ಮೇಲೆ ವಿವಿಧ ಖಾಲಿ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನ

08/01/2026 3:23 PM

GOOD NEWS: ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅವಧಿ ವಿಸ್ತರಣೆ

08/01/2026 3:20 PM

BIG NEWS : ಬೆಂಗಳೂರಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತು, ಮರಕ್ಕೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ!

08/01/2026 3:16 PM
State News
KARNATAKA

ಬೆಳಗಾವಿಯಲ್ಲಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ ಪ್ರಕರಣ : ಮತ್ತೆ ನಾಲ್ವರು ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

By kannadanewsnow0508/01/2026 3:23 PM KARNATAKA 1 Min Read

ಬೆಳಗಾವಿ : ನಿನ್ನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇನಾಮದಾರ ಸಕ್ಕರೆ ಕಾರ್ಖಾನೆ ದುರಂತದಲ್ಲಿ ನಿನ್ನೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು.…

JOB ALERT: ಹೊರ ಗುತ್ತಿಗೆ ಆಧಾರ ಮೇಲೆ ವಿವಿಧ ಖಾಲಿ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನ

08/01/2026 3:23 PM

GOOD NEWS: ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅವಧಿ ವಿಸ್ತರಣೆ

08/01/2026 3:20 PM

BIG NEWS : ಬೆಂಗಳೂರಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತು, ಮರಕ್ಕೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ!

08/01/2026 3:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.