Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ಮಹಾತ್ಮ ಗಾಂಧಿಯವರ ಉಪನಾಮವನ್ನೂ ಕದ್ದಿದ್ದಾರೆ” : ರಾಜ್ಯಸಭೆಯಲ್ಲಿ ‘ಪ್ರಧಾನಿ ಮೋದಿ’ ಭಾಷಣದ ಮುಖ್ಯಾಂಶಗಳು ಇಲ್ಲಿವೆ!

05/02/2026 7:59 PM

ಶುಕ್ರವಾರದಿಂದು ಸಂಜೆ ಈ ಕುಬೇರ ಮಂತ್ರ ಪಠಿಸಿ: ಹಣ, ಯಶಸ್ಸು ಗ್ಯಾರಂಟಿ

05/02/2026 7:42 PM

ಕರ್ನಾಟಕ ಮಾಹಿತಿ ಆಯೋಗದಿಂದ 1 ವರ್ಷದಲ್ಲಿ 36474 ಮೇಲ್ಮನವಿಗಳ ವಿಲೇವಾರಿ: ಮಾಹಿತಿ ನೀಡದ ಅಧಿಕಾರಿಗಳಿಗೆ 45.29 ಲಕ್ಷ ದಂಡ

05/02/2026 7:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ
KARNATAKA

ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ

By kannadanewsnow0910/09/2024 5:02 PM

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ.

ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಾಗೂ ಪರಿಸರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ನೀಡಲು 2001ರಲ್ಲಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿತು. ಅದರಂತೆ 2001ರಿಂದ 2016ರ ವರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಅರ್ಹ ಪತ್ರಕರ್ತರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ.

2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅರ್ಹ ಪತ್ರಕರ್ತರಿಗೆ ಈ ಪ್ರಶಸ್ತಿಗಳನ್ನು ನೀಡುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.

ಪರಿಸರ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಅನುಪಮ ಕೊಡುಗೆ ನೀಡಿರುವ ಹಾಗೂ ಪತ್ರಿಕೋದ್ಯಮದಲ್ಲಿ ಕನಿಷ್ಠ 10 ವರ್ಷಗಳ ಅನುಭವ ಹೊಂದಿರುವ ಅರ್ಹ ಪತ್ರಕರ್ತರನ್ನು ಸಾರ್ವಜನಿಕರು, ಸಂಘ ಸಂಸ್ಥೆಗಳು ನಾಮನಿರ್ದೇಶನ ಮಾಡಬಹುದು ಅಥವಾ ವೈಯುಕ್ತಿಕವಾಗಿ ಸ್ವಯಂ ಅರ್ಜಿ ಸಲ್ಲಿಸಬಹುದು.

2017 ರಿಂದ 2023 ರ ಅವಧಿಯ ಎರಡೂ ವಿಭಾಗಗಳ ಪ್ರಶಸ್ತಿಗಳಿಗೆ ತಲಾ 7 ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲಾಗುವುದು. ಈ ಪ್ರಶಸ್ತಿಯ ಮೊತ್ತ ಒಂದು ಲಕ್ಷ ರೂ. ನಗದು ಪುರಸ್ಕಾರ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಹೊಂದಿರುತ್ತದೆ.

ಅರ್ಜಿಗಳು / ನಾಮನಿರ್ದೇಶನಗಳನ್ನು ಮಾನ್ಯ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾಸೌಧ, ಭಗವಾನ್ ಮಹಾವೀರ ರಸ್ತೆ, (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು 560001 ಇಲ್ಲಿಗೆ ಅಥವಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ ಇ-ಮೇಲ್ ವಿಳಾಸ tsraward@gmail.com ಗೆ ದಿನಾಂಕ:30-09-2024ರ ಸಂಜೆ 5.00 ಗಂಟೆಯ ಒಳಗಾಗಿ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ‘ಭೂರಹಿತ SC ಸಮುದಾಯ’ದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್: ಜಮೀನಿಗಾಗಿ ಅರ್ಜಿ ಆಹ್ವಾನ

BREAKING: ಮಣಿಪುರ ಭುಗಿಲೆದ್ದ ಹಿಂಸಾಚಾರ: 5 ದಿನಗಳ ಕಾಲ ಇಂಟರ್ನೆಟ್ ಸ್ಥಗಿತ, ಕರ್ಫ್ಯೂ ಜಾರಿ | Manipur violence

BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!

Share. Facebook Twitter LinkedIn WhatsApp Email

Related Posts

ಶುಕ್ರವಾರದಿಂದು ಸಂಜೆ ಈ ಕುಬೇರ ಮಂತ್ರ ಪಠಿಸಿ: ಹಣ, ಯಶಸ್ಸು ಗ್ಯಾರಂಟಿ

05/02/2026 7:42 PM3 Mins Read

ಕರ್ನಾಟಕ ಮಾಹಿತಿ ಆಯೋಗದಿಂದ 1 ವರ್ಷದಲ್ಲಿ 36474 ಮೇಲ್ಮನವಿಗಳ ವಿಲೇವಾರಿ: ಮಾಹಿತಿ ನೀಡದ ಅಧಿಕಾರಿಗಳಿಗೆ 45.29 ಲಕ್ಷ ದಂಡ

05/02/2026 7:32 PM3 Mins Read

2026ನೇ ಸಾಲಿನ ರಾಜ್ಯ ಮಟ್ಟ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

05/02/2026 7:18 PM1 Min Read
Recent News

“ಮಹಾತ್ಮ ಗಾಂಧಿಯವರ ಉಪನಾಮವನ್ನೂ ಕದ್ದಿದ್ದಾರೆ” : ರಾಜ್ಯಸಭೆಯಲ್ಲಿ ‘ಪ್ರಧಾನಿ ಮೋದಿ’ ಭಾಷಣದ ಮುಖ್ಯಾಂಶಗಳು ಇಲ್ಲಿವೆ!

05/02/2026 7:59 PM

ಶುಕ್ರವಾರದಿಂದು ಸಂಜೆ ಈ ಕುಬೇರ ಮಂತ್ರ ಪಠಿಸಿ: ಹಣ, ಯಶಸ್ಸು ಗ್ಯಾರಂಟಿ

05/02/2026 7:42 PM

ಕರ್ನಾಟಕ ಮಾಹಿತಿ ಆಯೋಗದಿಂದ 1 ವರ್ಷದಲ್ಲಿ 36474 ಮೇಲ್ಮನವಿಗಳ ವಿಲೇವಾರಿ: ಮಾಹಿತಿ ನೀಡದ ಅಧಿಕಾರಿಗಳಿಗೆ 45.29 ಲಕ್ಷ ದಂಡ

05/02/2026 7:32 PM

2026ನೇ ಸಾಲಿನ ರಾಜ್ಯ ಮಟ್ಟ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

05/02/2026 7:18 PM
State News
KARNATAKA

ಶುಕ್ರವಾರದಿಂದು ಸಂಜೆ ಈ ಕುಬೇರ ಮಂತ್ರ ಪಠಿಸಿ: ಹಣ, ಯಶಸ್ಸು ಗ್ಯಾರಂಟಿ

By kannadanewsnow0905/02/2026 7:42 PM KARNATAKA 3 Mins Read

ಮಾರ್ವಾಡಿಗಳು ಈ ಲಕ್ಷ್ಮೀ ಕುಬೇರ ಪೂಜೆಯನ್ನು ಬಹಳ ವಿಮರ್ಶಾತ್ಮಕವಾಗಿ ನೆರವೇರಿಸುತ್ತಾರೆ. ನಮ್ಮ ಮನೆಯಲ್ಲಿ ಲಕ್ಷ್ಮೀ ಕುಬೇರ ಪೂಜೆಯನ್ನು ಅತ್ಯಂತ ವಿಮರ್ಶಾತ್ಮಕವಾಗಿ…

ಕರ್ನಾಟಕ ಮಾಹಿತಿ ಆಯೋಗದಿಂದ 1 ವರ್ಷದಲ್ಲಿ 36474 ಮೇಲ್ಮನವಿಗಳ ವಿಲೇವಾರಿ: ಮಾಹಿತಿ ನೀಡದ ಅಧಿಕಾರಿಗಳಿಗೆ 45.29 ಲಕ್ಷ ದಂಡ

05/02/2026 7:32 PM

2026ನೇ ಸಾಲಿನ ರಾಜ್ಯ ಮಟ್ಟ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

05/02/2026 7:18 PM

ಬೆಂಗಳೂರು ಜನತೆ ಗಮನಕ್ಕೆ: ಫೆ.7ರ ಶನಿವಾರದಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

05/02/2026 6:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.