Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಟ ಕಮಲ್ ಹಾಸನ್ ಗೆ ಬಿಗ್ ರಿಲೀಫ್ : ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್.!

17/06/2025 12:29 PM

BREAKING : BREAKING : ‘CM ಸಿದ್ದರಾಮಯ್ಯ’ ನಿವಾಸಕ್ಕೆ ಮುತ್ತಿಗೆ ಯತ್ನ : ಬಿ.ವೈವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

17/06/2025 12:27 PM

BREAKING : ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ : ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ | Bomb threat

17/06/2025 12:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳೇ ಗಮನಿಸಿ: ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯಲ್ಲಿ ಬಾಗಿಯಾಗಿ, 31,000 ಬಹುಮಾನ ಗೆಲ್ಲಿ
KARNATAKA

ವಿದ್ಯಾರ್ಥಿಗಳೇ ಗಮನಿಸಿ: ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯಲ್ಲಿ ಬಾಗಿಯಾಗಿ, 31,000 ಬಹುಮಾನ ಗೆಲ್ಲಿ

By kannadanewsnow0925/08/2024 5:09 AM

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಲಾಗಿದೆ. ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ 31 ಸಾವಿರ ರೂ., ದ್ವಿತೀಯ 21 ಸಾವಿರ ರೂ. ಮತ್ತು ತೃತೀಯ 11 ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ. ಮತ್ತು ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುವುದು.

ಪ್ರೌಢ ಶಾಲಾ ವಿಭಾಗ

1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, 4) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ

ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗ

1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, 3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, 4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗ್ಗೆ

ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ

1) ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, 2) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, 3) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, 4) ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, 5) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

06-09-2024 ರೊಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಸ್ಪರ್ಧೆ ಏರ್ಪಡಿಸಿ 10-09-2024 ರೊಳಗಾಗಿ ಮೌಲ್ಯಮಾಪನ ಮಾಡಿ, ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಲಿದೆ. ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ, ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು.

ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು ಪ್ರಬಂಧಗಳಿಗೆ ಅಕ್ಟೋಬರ್ 2 ರಂದು ಜಿಲ್ಲಾ ಮಟ್ಟದ ಗಾಂಧಿ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರನ್ನು ಗೌರವಿಸಲಾಗುವುದು.

ನಿಬಂಧನೆಗಳು

– ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. – ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. – ಆಕರವಾಗಿ ಬಳಸಿದ ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. – ಪ್ರಬಂಧ ಬರೆಯುವ ಸ್ಥಳದಲ್ಲಿ ಪರಾಮರ್ಶನ/ಆಧಾರ ಗ್ರಂಥಗಳು/ಮೊಬೈಲ್ ಬಳಕೆಗೆ ಅವಕಾಶವಿರುವುದಿಲ್ಲ. – ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. – ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. – ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.

ಬಹುಮಾನ ವಿವರ

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಗೆದ್ದವರಿಗೆ ಪ್ರಥಮ ಬಹುಮಾನವಾಗಿ ರೂ.31,000 ಸಿಗಲಿದೆ. ದ್ವಿತೀಯ ಬಹುಮಾನವಾಗಿ ರೂ.21,000 ಹಾಗೂ ತೃತೀಯ ಸ್ಥಾನ ಪಡೆದವರಿಗೆ ರೂ.11,000 ನೀಡಲಾಗುತ್ತದೆ.

ಇನ್ನೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದಂತ ಪ್ರಬಂಧಕ್ಕೆ ರೂ.3,000, ದ್ವಿತೀಯ ಬಹುಮಾನಕ್ಕೆ ರೂ.2,000 ಹಾಗೂ ತೃತೀಯ ಬಹುಮಾನವಾಗಿ ರೂ.1000 ನೀಡಲಾಗುತ್ತದೆ.

Share. Facebook Twitter LinkedIn WhatsApp Email

Related Posts

BREAKING : ನಟ ಕಮಲ್ ಹಾಸನ್ ಗೆ ಬಿಗ್ ರಿಲೀಫ್ : ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್.!

17/06/2025 12:29 PM2 Mins Read

BREAKING : BREAKING : ‘CM ಸಿದ್ದರಾಮಯ್ಯ’ ನಿವಾಸಕ್ಕೆ ಮುತ್ತಿಗೆ ಯತ್ನ : ಬಿ.ವೈವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

17/06/2025 12:27 PM1 Min Read

BREAKING : ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ.!

17/06/2025 12:14 PM1 Min Read
Recent News

BREAKING : ನಟ ಕಮಲ್ ಹಾಸನ್ ಗೆ ಬಿಗ್ ರಿಲೀಫ್ : ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್.!

17/06/2025 12:29 PM

BREAKING : BREAKING : ‘CM ಸಿದ್ದರಾಮಯ್ಯ’ ನಿವಾಸಕ್ಕೆ ಮುತ್ತಿಗೆ ಯತ್ನ : ಬಿ.ವೈವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

17/06/2025 12:27 PM

BREAKING : ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ : ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ | Bomb threat

17/06/2025 12:19 PM

BREAKING : ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ.!

17/06/2025 12:14 PM
State News
KARNATAKA

BREAKING : ನಟ ಕಮಲ್ ಹಾಸನ್ ಗೆ ಬಿಗ್ ರಿಲೀಫ್ : ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್.!

By kannadanewsnow5717/06/2025 12:29 PM KARNATAKA 2 Mins Read

ಬೆಂಗಳೂರು : ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಕಮಲ್ ಹಾಸನ್…

BREAKING : BREAKING : ‘CM ಸಿದ್ದರಾಮಯ್ಯ’ ನಿವಾಸಕ್ಕೆ ಮುತ್ತಿಗೆ ಯತ್ನ : ಬಿ.ವೈವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

17/06/2025 12:27 PM

BREAKING : ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ.!

17/06/2025 12:14 PM

JOB ALERT : `NHM’ ಅಡಿಯಲ್ಲಿ ಗುತ್ತಿಗೆ ಆಧಾರದ ವೈದ್ಯಕೀಯ. ಅರೆವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

17/06/2025 12:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.