ಶಿವಮೊಗ್ಗ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಭದ್ರಾವತಿ ನಗರ ಸಭೆಯಲ್ಲಿ ಯು.ಆರ್.ಡಬ್ಲ್ಯೂ 02 ಹುದ್ದೆ ಹಾಗೂ ಭದ್ರಾವತಿ ತಾಲೂಕಿನ ತಡಸ, ಕಲ್ಲಹಳ್ಳಿ, ಬಾರಂದೂರು, ಗುಡಮಘಟ್ಟ, ಹನುಮಂತಪುರ, ಸನ್ಯಾಸಿಕೊಡಮಗ್ಗಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಆಯ್ಕೆ ಮಾಡಲು 18 ರಿಂದ 45 ವರ್ಷ ವಯೋಮಿತಿಯೊಳಗಿನ 10ನೇ ತರಗತಿ ಪಾಸಾಗಿರುವ ಸ್ಥಳೀಯ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

Crime News: ಬೆಂಗಳೂರಿನಲ್ಲಿ ಕುಖ್ಯಾತ ಮೊಬೈಲ್ ಕಳ್ಳನ ಬಂಧನ: ಸಿಕ್ಕ ಪೋನ್ ಗಳು ಎಷ್ಟು ಗೊತ್ತಾ.?

ಆಸಕ್ತರು ನಿಗಧಿತ ನಮೂನೆ ಅರ್ಜಿಗಳನ್ನು ಭದ್ರಾವತಿ ತಾಲೂಕು ಪಂಚಾಯತಿ ಕಚೇರಿಯ ಎಂ.ಆರ್.ಡಬ್ಲ್ಯೂ ರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ:17/12/2022 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿಗಧಿತ ನಮೂನೆ ಅರ್ಜಿ ಮತ್ತು ಮಾಹಿತಿಗಾಗಿ ಎಂ.ಆರ್.ಡಬ್ಲ್ಯೂ ದಿನೇಶ್ ಮೊ.ಸಂ.: 7899137243 ನ್ನು ಸಂಪರ್ಕಿಸುವುದು.

BIG NEWS: ಬಡ್ತಿ ನಿರೀಕ್ಷೆಯಲ್ಲಿದ್ದ ತಹಶೀಲ್ದಾರ್ ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ KAS ಹುದ್ದೆಗೆ ಬಡ್ತಿ ನೀಡಿ ಆದೇಶ

Share.
Exit mobile version