Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

1.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ KIADB ಸರ್ವೇ ಸೂಪರ್ ವೈಸರ್ ಲೋಕಾಯುಕ್ತ ಬಲೆಗೆ

06/06/2025 1:30 PM

BIG NEWS: ಬಾಲಿವುಡ್ ಖ್ಯಾತ ನಟ ‘ಡಿನೋ ಮೋರಿಯಾ’ ಮನೆ ಮೇಲೆ ‘ED’ ದಾಳಿ | ED Raid

06/06/2025 1:19 PM

BIG NEWS : ಮೈಸೂರು ರಾಜ್ಯಕ್ಕೆ `ಕರ್ನಾಟಕ’ ಎಂದು ನಾಮಕರಣ ಮಾಡಿದ ಮುತ್ಸದ್ದಿ ದೇವರಾಜ ಅರಸು : CM ಸಿದ್ದರಾಮಯ್ಯ

06/06/2025 1:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಫೆ.1ರಿಂದ ‘ಕಂದಾಯ ಇಲಾಖೆ’ಯಲ್ಲಿ ‘ಇ-ಕಚೇರಿ’ಯಲ್ಲಿ ಮಾತ್ರ ಅರ್ಜಿ ಸ್ವೀಕಾರ- ಸಚಿವ ಕೃಷ್ಣ ಬೈರೇಗೌಡ
KARNATAKA

BIG NEWS: ಫೆ.1ರಿಂದ ‘ಕಂದಾಯ ಇಲಾಖೆ’ಯಲ್ಲಿ ‘ಇ-ಕಚೇರಿ’ಯಲ್ಲಿ ಮಾತ್ರ ಅರ್ಜಿ ಸ್ವೀಕಾರ- ಸಚಿವ ಕೃಷ್ಣ ಬೈರೇಗೌಡ

By kannadanewsnow0924/01/2024 4:42 PM

ಕಲಬುರಗಿ : ಆಡಳಿತದಲ್ಲಿ ಪಾರದರ್ಶಕತೆ ತರಲು ಇ-ಆಫೀಸ್ ಅನುಷ್ಟಾನಗೊಳಿಸಿದೆ. ಫೆಬ್ರವರಿ 1 ರಿಂದ ಜಿಲ್ಲೆಯ ಎಲ್ಲಾ ತಹಶೀಲ್ದಾರ ಕಚೇರಿಯಲ್ಲಿ ಇ-ಕಚೇರಿ ಮೂಲಕವೇ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಸ್ವೀಕೃತಿ ಸಂಖ್ಯೆ ನೀಡಬೇಕು. ಯಾವುದೇ ಕಾರಣಕ್ಕೂ ಭೌತಿಕ ಕಡತ ಪ್ರಕ್ರಿಯೆ ಇರಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಅಲ್ಲದೆ ಫೆ.1 ರಿಂದ ಆವಕ ಸಿಬ್ಬಂದಿಗೆ ಸ್ಟ್ಯಾಂಪ್, ಸೀಲು ಸಹ ನೀಡಬಾರದು ಎಂದರು.

ಜಿಲ್ಲೆಯ ಶಹಾಬಾದ, ಯಡ್ರಾಮಿ, ಕಾಳಗಿ ತಹಶೀಲ್ದಾರ ಕಚೇರಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಇ-ಕಚೇರಿ ಅನುಷ್ಟಾನ ಮಾಡದಿರುವುದಕ್ಕೆ ಸಿಡಿಮಿಡಿಗೊಂಡ ಅವರು, ಪಾರದರ್ಶಕ, ಸಮಯ ಉಳಿತಾಯ, ಅಕೌಂಟೇಬಿಲಿಟಿ ಇರಲೆಂದೇ ನೂತನ ಸಾಫ್ಟವೇರ್ ಅಭಿವೃದ್ಧಿಪಡಿಸಿದೆ. ಹೊಸ ವ್ಯವಸ್ಥೆಗೆ ಹೊಂದಿಕೊಂಡು ಕಡ್ಡಾಯವಾಗಿ ಅನುಷ್ಠನಾಗೊಳಿಸಬೇಕು ಎಂದು ತಹಶೀಲ್ದಾರ, ಕಂದಾಯ ಸಿಬ್ಬಂದಿಗಳಿಗೆ ತಾಕೀತು ಮಾಡಿದರು.

ಯಡ್ರಾಮಿ ತಹಶೀಲ್ದಾರ ಕಚೇರಿಯಲ್ಲಿ ಕಳೆದ‌ 6 ತಿಂಗಳಲ್ಲಿ ಕೇವಲ 42 ಕಡತ ಸೃಜಿಸಿದ್ದು, ಇ-ಆಫೀಸ್ ಸಮರ್ಪಕವಾಗಿ ಅನುಷ್ಠಾನ ಮಾಡದ ಕಾರಣ ತಹಶೀಲ್ದಾರರಿಗೆ ನೋಟಿಸ್ ನೀಡುವಂತೆ ಡಿ.ಸಿ.ಗೆ ನಿರ್ದೇಶನ‌ ನೀಡಿದ ಸಚಿವರು, ಜನವರಿ ಅಂತ್ಯಕ್ಕೆ ಎಲ್ಲಾ ತಹಶೀಲ್ದಾರ ಕಚೇರಿಯಲ್ಲಿ ಇ-ಕಚೇರಿಯಲ್ಲಿ ಸೃಜಿಸಿದ ಕಡತ ಪರಿಶೀಲಿಸಬೇಕು. ಶೇ.75 ರಷ್ಟು ಅರ್ಜಿಗಳು ಇ-ಕಚೇರಿಯಲ್ಲಿ ಇನ್ ವಾರ್ಡ್ ಮಾಡದಿದ್ದಲ್ಲಿ ಅಂತಹವರಿಗೆ ನೋಟಿಸ್ ಜಾರಿಗೊಳಿಸಿ ಎಂದರು.

ಕೆಸ್ವಾನ್ ಸಂಪರ್ಕ ಇಲ್ಲ, ಸರ್ವರ್ ಇಲ್ಲ ಎಂಬ ಕುಂಟು ನೆಪ ಬೇಡ. ನಾನು ಅದೆ‌ ಸರ್ವರ್ ಮೂಲಕವೇ ಕಡತ ವಿಲೇವಾರಿ‌ ಮಾಡುತ್ತಿದ್ದೇನೆ. ಡಿ.ಸಿ. ಕಚೇರಿಯಿಂದ ಕಂದಾಯ ಆಯುಕ್ತರಿಗೆ ಕಡತ ಕಳುಹಿಸಿದಲ್ಲಿ 2-3 ದಿನದಲ್ಲಿ ಸೂಕ್ತ ಆದೇಶದ ಜೊತೆಗೆ ವಿಲೇವಾರಿ ಮಾಡಲಾಗುತ್ತಿದೆ. ಅಷ್ಟೊಂದು ತ್ವರಿತಗತಿಯಲ್ಲಿ ಸರ್ಕಾರದ ಮಟ್ಟದಲ್ಲಿ ಕಡತ ವಿಲೇವಾರಿ ಪ್ರಕ್ರಿಯೆ ನಡೆದಿದೆ. ಹಳೇ ಫೈಲ್ ಪದ್ದತಿ ವಿಲೇವಾರಿಯಿಂದ ಹೊರ‌ಬನ್ನಿ. ತಂತ್ರಜ್ಞಾನ ಸಮರ್ಪಕವಾಗಿ ಬಳಸಬೇಕು‌ ಎಂದು ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ ಜಿಲ್ಲೆಯಲ್ಲಿ ಇ-ಆಫೀಸ್ ಅನುಷ್ಟಾನ ಏಕೆ ಸಮರ್ಪಕವಾಗಿ ಜಾರಿ ಮಾಡುತ್ತಿಲ್ಲ. ಸಮಸ್ಯೆ ಇದ್ದರೆ ಹೇಳಿ, ಐ.ಟಿ-ಬಿ.ಟಿ‌ ಸಚಿನಾಗಿರುವುದರಿಂದ ನಮ್ಮ ಇಲಾಖೆಯಿಂದ‌ ಸಮಸ್ಯೆ ಬಗೆಹರಿಸಬಹುದಾದರೆ ಪ್ರಯತ್ನಿಸುವೆ ಎಂದ‌ ಅವರು, ಸಾರ್ವಜನಿಕರು ಕಚೇರಿಗೆ ಅಲಿಯಬೇಕು, ತಮ್ಮನ್ನು ಬಂದು ಕಾಣಬೇಕು ಎಂಬ ಹಳೇ ಪದ್ದತಿಯಿಂದ ಹೊರಬನ್ನಿ ಎಂದರು.

ಸತ್ತ ಮೇಲೂ ಜಾತಿ ಬೇಕಾ?

ಸಭೆಯಲ್ಲಿ ಸ್ಮಶಾನ ಭೂಮಿ ಚರ್ಚೆ ವೇಳೆಯಲ್ಲಿ ಜಿಲ್ಲೆಯಲ್ಲಿ 9 ಅರ್ಜಿ ಸ್ಮಶಾನ ಭೂಮಿ ಮಂಜೂರಾತಿಗೆ ಬಾಕಿ ಉಳಿದಿವೆ. ಜಾತಿಗೊಂದು ರುದ್ರ ಭೂಮಿ ಕೇಳುತ್ತಿದ್ದು, ಮಂಜೂರಾತಿಗೆ ಸಮಸ್ಯೆಯಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಚಿವ ಕೃಷ್ಣ ಬೈರೇಗೌಡ ಅವರಿಗೆ ಹೇಳಿದರು. ಅಗ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ ಬದುಕಿರುವಾಗ ಜಾತಿ-ಜಾತಿ ಎಂದು ಬೈದಾಡಿಕೊಳ್ಳುತ್ತೇವೆ. ಸತ್ತ ಮೇಲು ಹೂಳಕ್ಕೂ ಜಾತಿ ಬೇಕಾ? ಎಂದ ಅವರು ಕಾನೂನಿನಲ್ಲಿ ಪ್ರತಿ ಧರ್ಮಕ್ಕೆ ಪ್ರತ್ಯೇಕ ರುದ್ರ ಭೂಮಿಗೆ ಅವಕಾಶ ಇದೆ. ಜಾತಿಗೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬಗರ್ ಹುಕುಂ ಸಾಗುವಳಿ ಚೀಟಿ ವಿತರಣೆ ಮೇಲೆ ನಿಗಾ ಇಡಿ

ರಾಜ್ಯದಲ್ಲಿ ಬಗರ್ ಹುಕುಂ ಸಾಗುವಳಿ ಇದ್ದಿದ್ದು, 50 ಲಕ್ಷ‌ ಎಕರೆ. ಸಾಗುವಳಿ ಚೀಟಿಗೆ ಅರ್ಜಿ ಬಂದಿರೋದು 54 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ. ಸಾಗುವಳಿ ಅಲ್ಲದವರು ಅರ್ಜಿ ಹಾಕಿದ್ದಾರೆ. ಸೂಕ್ತವಾಗಿ ಪರಿಶೀಲಿಸಿ ರೆಸೋಲುಷನ್ ಪಾಸ್ ಮಾಡಿ ಸಾಗುವಳಿ ಚೀಟಿ ವಿತರಿಸಬೇಕು. ಇನ್ನು ಮುಂದೆ ಸಾಗುವಳಿ ‌ಚೀಟಿ ಜೊತೆಗೆ ಪೋಡಿ ಸ್ಕೆಚ್ ನೀಡುವ ಚಿಂತನೆ ನಡೆದಿದೆ. ಮುಮದೆ ಅನ್ ಲೈನ್ ಮೂಲಕವೇ ಸಾಗುವಳಿ ಚೀಟಿ ನೀಡಲಾಗುವುದು ಎಂದರು.

ಶಾಸಕರಾದ ಎಂ.ವೈ.ಪಾಟೀಲ, ಕನೀಜ್ ಫಾತಿಮಾ, ಕಂದಾಯ ಇಲಾಖೆಯ ಆಯುಕ್ತ ಸುನೀಲ ಕುಮಾರ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಸೇರಿದಂತೆ ತಹಶೀಲ್ದಾರರು, ಸಬ್ ರಿಜಿಸ್ಟ್ರಾರ್, ಇತರೆ ಅಧಿಕಾರಿಗಳು ಇದ್ದರು.

BREAKING : ಇಂಡಿಯಾ ಮೈತ್ರಿಕೂಟಕ್ಕೆ ಬಿಗ್ ಶಾಕ್ : ಪಂಜಾಬ್’ನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದು ‘AAP’ ಘೋಷಣೆ

BREAKING : ಇಂಗ್ಲೆಂಡ್ ವಿರುದ್ಧದ ಮೊದಲ 2 ಟೆಸ್ಟ್ ಪಂದ್ಯಗಳಿಗೆ ‘ಕೊಹ್ಲಿ’ ಬದಲಿಗೆ ಯುವ ಆಟಗಾರ ‘ರಜತ್ ಪಾಟಿದಾರ್’ಗೆ ಸ್ಥಾನ

Share. Facebook Twitter LinkedIn WhatsApp Email

Related Posts

1.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ KIADB ಸರ್ವೇ ಸೂಪರ್ ವೈಸರ್ ಲೋಕಾಯುಕ್ತ ಬಲೆಗೆ

06/06/2025 1:30 PM1 Min Read

BIG NEWS : ಮೈಸೂರು ರಾಜ್ಯಕ್ಕೆ `ಕರ್ನಾಟಕ’ ಎಂದು ನಾಮಕರಣ ಮಾಡಿದ ಮುತ್ಸದ್ದಿ ದೇವರಾಜ ಅರಸು : CM ಸಿದ್ದರಾಮಯ್ಯ

06/06/2025 1:15 PM1 Min Read

BIG NEWS : 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ಹೊಂದಿರುವವರೇ ಗಮನಿಸಿ: ಉಚಿತ ನವೀಕರಣಕ್ಕೆ ಜೂ.14 ಲಾಸ್ಟ್ ಡೇಟ್.!

06/06/2025 12:55 PM2 Mins Read
Recent News

1.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ KIADB ಸರ್ವೇ ಸೂಪರ್ ವೈಸರ್ ಲೋಕಾಯುಕ್ತ ಬಲೆಗೆ

06/06/2025 1:30 PM

BIG NEWS: ಬಾಲಿವುಡ್ ಖ್ಯಾತ ನಟ ‘ಡಿನೋ ಮೋರಿಯಾ’ ಮನೆ ಮೇಲೆ ‘ED’ ದಾಳಿ | ED Raid

06/06/2025 1:19 PM

BIG NEWS : ಮೈಸೂರು ರಾಜ್ಯಕ್ಕೆ `ಕರ್ನಾಟಕ’ ಎಂದು ನಾಮಕರಣ ಮಾಡಿದ ಮುತ್ಸದ್ದಿ ದೇವರಾಜ ಅರಸು : CM ಸಿದ್ದರಾಮಯ್ಯ

06/06/2025 1:15 PM

ವಿಶ್ವದಲ್ಲಿ ಅನಾನಸ್ ನ ಅತಿದೊಡ್ಡ ಉತ್ಪಾದಕ ದೇಶ ಯಾವುದು ? Pineapple

06/06/2025 1:07 PM
State News
KARNATAKA

1.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ KIADB ಸರ್ವೇ ಸೂಪರ್ ವೈಸರ್ ಲೋಕಾಯುಕ್ತ ಬಲೆಗೆ

By kannadanewsnow0906/06/2025 1:30 PM KARNATAKA 1 Min Read

ಬೆಂಗಳೂರು: ವ್ಯಕ್ತಿಯೊಬ್ಬರು ಕೆಐಎಡಿಬಿಗೆ ಸಲ್ಲಿಸಿದ್ದಂತ ಸ್ಕೆಚ್ ಗೆ ಅನುಮೋದನೆ ನೀಡಲು 1.50 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟು, ಪಡೆಯುತ್ತಿದ್ದಂತ ವೇಳೆಯಲ್ಲಿ…

BIG NEWS : ಮೈಸೂರು ರಾಜ್ಯಕ್ಕೆ `ಕರ್ನಾಟಕ’ ಎಂದು ನಾಮಕರಣ ಮಾಡಿದ ಮುತ್ಸದ್ದಿ ದೇವರಾಜ ಅರಸು : CM ಸಿದ್ದರಾಮಯ್ಯ

06/06/2025 1:15 PM

BIG NEWS : 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ಹೊಂದಿರುವವರೇ ಗಮನಿಸಿ: ಉಚಿತ ನವೀಕರಣಕ್ಕೆ ಜೂ.14 ಲಾಸ್ಟ್ ಡೇಟ್.!

06/06/2025 12:55 PM

BREAKING : ಬೆಂಗಳೂರು `ಕಾಲ್ತುಳಿತ ದುರಂತ ಕೇಸ್’ : `KSCA’ ನ ಇಬ್ಬರು ಸಿಬ್ಬಂದಿಗಳು ಅರೆಸ್ಟ್.!

06/06/2025 12:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.