Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಸಿಲಿಂಡರ್ ಅಭಾವ : ಹಾವೇರಿಯಲ್ಲಿ ಶಾಲೆಯ ಅಡುಗೆ ಕೋಣೆ ಬೀಗ ಮರಿದು, ಸಿಲಿಂಡರ್ ಕದ್ದೋಯ್ದ ಕಿಡಿಗೇಡಿಗಳು!

02/04/2026 12:22 PM

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಊಟ, ತಿಂಡಿ ಬೆಲೆಯಲ್ಲಿ ಭಾರೀ ಹೆಚ್ಚಳ.!

02/04/2026 12:10 PM

SHOCKING : ಬೆಂಗಳೂರಲ್ಲಿ ಬಕೆಟ್ ನಲ್ಲಿ ಮುಳುಗಿ ಮಗು ಸಾವು : ಮನನೊಂದು ಡೆತ್ ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ!

02/04/2026 12:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » RGUHS ಕುಲಪತಿಯಾಗಿ ಭ್ರಷ್ಟಾತೀತ ವ್ಯಕಿಯನ್ನೇ ನೇಮಕ ಮಾಡಿ: ರಾಜ್ಯ ಸರ್ಕಾರಕ್ಕೆ ‘CRF’ ಪತ್ರ
KARNATAKA

RGUHS ಕುಲಪತಿಯಾಗಿ ಭ್ರಷ್ಟಾತೀತ ವ್ಯಕಿಯನ್ನೇ ನೇಮಕ ಮಾಡಿ: ರಾಜ್ಯ ಸರ್ಕಾರಕ್ಕೆ ‘CRF’ ಪತ್ರ

By kannadanewsnow0926/01/2025 3:57 PM

ಬೆಂಗಳೂರು: ಹಗರಣಗಳ ಆಗರವಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಈ ಬಾರಿಯಾದರೂ ಭ್ರಷ್ಟಾಚಾರ-ಮುಕ್ತ, ಸೂಕ್ತ ವ್ಯಕ್ತಿಯನ್ನು ಕುಲಪತಿಗಳನ್ನಾಗಿ ನೇಮಕ ಮಾಡುವಂತೆ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಸಿಎಂ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಲಹೆ ನೀಡಿದೆ. ಈ ಸಂಬಂಧ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಅಧ್ಯಕ್ಷ ಕೆ.ಎ.ಪಾಲ್ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ ಪಾಟೀಲ್ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿರುವ ಬೆಳವಣಿಗೆ ಕುತೂಹಲ ಕೆರಳಿಸಿದೆ.

ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಒಂದಿಲ್ಲೊಂದು ಹಗರಣಗಳಿಂದಾಗಿ ದೇಶದಲ್ಲೇ ವಿವಾದದ ಕೇಂದ್ರ ಬಿಂದುವಾಗುತ್ತಿದೆ. ಹತ್ತಾರು ಅಕ್ರಮ ಆರೋಪಗಳು ಸುದ್ದಿಯಾಗುತ್ತಲೇ ಇವೆ. ವೈದ್ಯಕೀಯ ಕಾಲೇಜುಗಳ ಅಕ್ರಮ, ನರ್ಸಿಂಗ್ ಕಾಲೇಜ್ ಭ್ರಷ್ಟಾಚಾರ ಪ್ರಕರಣಗಳಿಂದಾಗಿ RGUHS ಪ್ರತಿಷ್ಠೆಗೆ ಧಕ್ಕೆ ಬಂದಿದೆ. ಹಾಗಾಗಿ ಭ್ರಷ್ಟಾತೀತ, ಸಮರ್ಥ ವ್ಯಕ್ತಿಯನ್ನು ಕುಲಪತಿಯನ್ನಾಗಿ ನೇಮಕ ಮಾಡಬೇಕೆಂದು ಕೆ.ಎ.ಪಾಲ್ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ವಿಸಿ ಪೋಸ್ಟ್ ಬಿಕರಿಯಾಗದಿರಲಿ:

RGUHSನಲ್ಲಿ ನೇಮಕಾತಿ ಅಕ್ರಮಗಳು ಮಾರ್ಚ್ 2024 ರಲ್ಲಿನ ಆಂತರಿಕ ಲೆಕ್ಕಪರಿಶೋಧನೆಯು ನೇಮಕಾತಿ ದಾಖಲೆಗಳಲ್ಲಿ ಬಹಿರಂಗಗೊಂಡಿದೆ. ವಿದ್ಯಾರ್ಥಿವೇತನ, ಸಂಶೋಧನಾ ಅನುದಾನ, ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ವಿವಿಯಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿರುವ ಆರೋಪಗಳೂ ಇವೆ. ಪ್ರವೇಶ ಪ್ರಕ್ರಿಯೆ ಗೋಲ್ಮಾಲ್ ಕೂಡಾ ಗಂಭೀರ ಆರೋಪಗಳಾಗಿವೆ. ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರ ವಿರುದ್ಧ ಕಾನೂನು ಹೋರಾಟ ಮಾಡುತ್ತಾ ಬಂದಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಈ ಹಗರಣಗಳ ಬಗ್ಗೆಯೂ ಕಳವಳ ವ್ಯಕ್ತಪಡಿಸಿದೆ. ಕೆಲವು ವಿಚಾರಗಳಲ್ಲಿ ಕಾನೂನು ಹೋರಾಟವನ್ನೂ ನಡೆಸಿದೆ ಎಂದು ಕೆ.ಎ.ಪಾಲ್ ಗಮನಸೆಳೆದಿದ್ದಾರೆ.

ಆರೋಗ್ಯ ವೃತ್ತಿಪರರನ್ನು ರೂಪಿಸಬೇಕಾದ ಜವಾಬ್ದಾರಿಯುತ ಪ್ರಮುಖ ಸಂಸ್ಥೆ RGUHSನ ಅವಾಂತರಗಳಿಗೆ ಭ್ರಷ್ಟ ಅಧಿಕಾರಿಗಳೇ ಕಾರಣವಾಗಿದ್ದು, ಕುಲಪತಿಗಳು ಕೂಡಾ ಅಂಥವರಿಗೆ ಬೆಂಗಾವಲಾಗಿ ನಿಂತಂತಿದೆ. ಇನ್ನಾದರೂ ವ್ಯವಸ್ಥೆ ಸುಧಾರಣೆಯಾಗಬೇಕಾದರೆ ಭ್ರಷ್ಟಾತೀತ ಹಾಗೂ ಕಳಂಕ ರಹಿತ ವ್ಯಕ್ತಿಯನ್ನು ಸರ್ಕಾರ ನೇಮಕ ಮಾಡಬೇಕಿದೆ. ಇದು ರಾಜ್ಯದ ಜನತೆಯ ಆಶಯವೂ ಆಗಿದೆ ಎಂದು ಅವರು ಪತ್ರದಲ್ಲಿ ಹೇಳಿಕೊಂಡಿದ್ದಾರೆ.

ಪ್ರಸಕ್ತ ಕುಲಪತಿಯ ಅಧಿಕಾರಾವಧಿ 10.02.2025 ರಂದು ಕೊನೆಗೊಳ್ಳಲಿದ್ದು, ಹೊಸ ನೇಮಕಾತಿ ಸಂಬಂಧ ಸರ್ಕಾರ ಅರ್ಜಿಗಳನ್ನು ಆಹ್ವಾನಿಸಿದೆ. ಮತ್ತೊಂದೆಡೆ ಹುದ್ದೆ ಬಯಸಿ ಪ್ರಭಾವಿಗಳು ಲಾಭಿ ನಡೆಸುತ್ತಿದ್ದಾರೆ. ಇಂತಹಾ ಸಂದರ್ಭದಲ್ಲಿ ಭ್ರಷ್ಟರಿಗೆ ಮನೆ ಹಾಕಿದ್ದೇ ಆದಲ್ಲಿ ವಿಶ್ವವಿದ್ಯಾಲಯದ ಬಗ್ಗೆ ಜನರಿಗೆ ಇರುವ ವಿಶ್ವಾಸ ಕಳೆದುಕೊಳ್ಳಬಹುದು ಎಂದವರು ಎಚ್ಚರಿಕೆ ನೀಡಿದ್ದಾರೆ.

RGUHSಗೆ ಭ್ರಷ್ಟಾಚಾರ-ಮುಕ್ತ, ಸೂಕ್ತ ವ್ಯಕ್ತಿಯ ಅವಶ್ಯಕತೆ ಇದ್ದು, ಕುಲಪತಿ ನೇಮಕ ಸಂದರ್ಭದಲ್ಲಿ ಲಾಭಿಗೆ ಮಣಿಯದೆ, ಅಕ್ರಮ ನೇಮಕಾತಿಗೂ ಅವಕಾಶ ಕೊಡದೆ ಅರ್ಹತೆಯನ್ನು ಖಚಿತಪಡಿಸಿಕೊಂಡು, ಶೈಕ್ಷಣಿಕ ಮತ್ತು ಸಾಂಸ್ಥಿಕ ಸುಧಾರಣೆಗಾಗಿ ಒಂದು ದೃಷ್ಟಿಕೋನವುಳ್ಳವರನ್ನೇ ನೇಮಕ ಮಾಡಬೇಕೆಂಬ ಸಲಹೆಯನ್ನು ಕೆ.ಎ.ಪಾಲ್ ಅವರು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ.

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಪತ್ರಕರ್ತನ ನೆರವಿಗಾಗಿ ಮನವಿ

ಸುಡಾನ್ ನಲ್ಲಿ ಆಸ್ಪತ್ರೆ ಮೇಲೆ ದಾಳಿ: 70 ಮಂದಿ ಸಾವು | Attack on Hospital

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಸಿಲಿಂಡರ್ ಅಭಾವ : ಹಾವೇರಿಯಲ್ಲಿ ಶಾಲೆಯ ಅಡುಗೆ ಕೋಣೆ ಬೀಗ ಮರಿದು, ಸಿಲಿಂಡರ್ ಕದ್ದೋಯ್ದ ಕಿಡಿಗೇಡಿಗಳು!

02/04/2026 12:22 PM1 Min Read

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಊಟ, ತಿಂಡಿ ಬೆಲೆಯಲ್ಲಿ ಭಾರೀ ಹೆಚ್ಚಳ.!

02/04/2026 12:10 PM1 Min Read

SHOCKING : ಬೆಂಗಳೂರಲ್ಲಿ ಬಕೆಟ್ ನಲ್ಲಿ ಮುಳುಗಿ ಮಗು ಸಾವು : ಮನನೊಂದು ಡೆತ್ ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ!

02/04/2026 12:04 PM1 Min Read
Recent News

ರಾಜ್ಯದಲ್ಲಿ ಸಿಲಿಂಡರ್ ಅಭಾವ : ಹಾವೇರಿಯಲ್ಲಿ ಶಾಲೆಯ ಅಡುಗೆ ಕೋಣೆ ಬೀಗ ಮರಿದು, ಸಿಲಿಂಡರ್ ಕದ್ದೋಯ್ದ ಕಿಡಿಗೇಡಿಗಳು!

02/04/2026 12:22 PM

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಊಟ, ತಿಂಡಿ ಬೆಲೆಯಲ್ಲಿ ಭಾರೀ ಹೆಚ್ಚಳ.!

02/04/2026 12:10 PM

SHOCKING : ಬೆಂಗಳೂರಲ್ಲಿ ಬಕೆಟ್ ನಲ್ಲಿ ಮುಳುಗಿ ಮಗು ಸಾವು : ಮನನೊಂದು ಡೆತ್ ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ!

02/04/2026 12:04 PM

SHOCKING : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಬಕೆಟ್ ನಲ್ಲಿ ಮುಳುಗಿ ಮಗು ಸಾವು, ಮನನೊಂದು ತಾಯಿ ಆತ್ಮಹತ್ಯೆ!

02/04/2026 12:02 PM
State News
KARNATAKA

ರಾಜ್ಯದಲ್ಲಿ ಸಿಲಿಂಡರ್ ಅಭಾವ : ಹಾವೇರಿಯಲ್ಲಿ ಶಾಲೆಯ ಅಡುಗೆ ಕೋಣೆ ಬೀಗ ಮರಿದು, ಸಿಲಿಂಡರ್ ಕದ್ದೋಯ್ದ ಕಿಡಿಗೇಡಿಗಳು!

By kannadanewsnow0502/04/2026 12:22 PM KARNATAKA 1 Min Read

ಹಾವೇರಿ : ರಾಜ್ಯದಲ್ಲಿ ಸಿಲಿಂಡರ್ ಅಭಾವದಿಂದ ಜನರು ಸೌದೆ ಒಲೆ ಮೊರೆ ಹೋಗಿದ್ದಾರೆ. ಆದರೆ ಶಾಲೆ ಅಡುಗೆ ಕೋಣೆ ಬೀಗ…

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಊಟ, ತಿಂಡಿ ಬೆಲೆಯಲ್ಲಿ ಭಾರೀ ಹೆಚ್ಚಳ.!

02/04/2026 12:10 PM

SHOCKING : ಬೆಂಗಳೂರಲ್ಲಿ ಬಕೆಟ್ ನಲ್ಲಿ ಮುಳುಗಿ ಮಗು ಸಾವು : ಮನನೊಂದು ಡೆತ್ ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ!

02/04/2026 12:04 PM

SHOCKING : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಬಕೆಟ್ ನಲ್ಲಿ ಮುಳುಗಿ ಮಗು ಸಾವು, ಮನನೊಂದು ತಾಯಿ ಆತ್ಮಹತ್ಯೆ!

02/04/2026 12:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.