Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಏ.1ರಿಂದ ಸೆ.30ರವರೆಗೆ ಮೊದಲ ಹಂತದಲ್ಲಿ 2027ರ ಜನಗಣತಿ: ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ

08/01/2026 6:06 AM

ALERT : ರಾಜ್ಯದ ಜನರೇ ಗಮನಿಸಿ : `ಮಂಗನ ಕಾಯಿಲೆ’ ಬಗ್ಗೆ ಭಯ ಬೇಡ, ಎಚ್ಚರ ವಹಿಸಿ, ಜಾಗರೂಕರಾಗಿರಿ.!

08/01/2026 6:02 AM

BIG NEWS: ಇನ್ಮುಂದೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ರಜೆ: ರಾಜ್ಯ ಸರ್ಕಾರ ಸೂಚನೆ

08/01/2026 5:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಸಚಿವ ಎಂ.ಬಿ ಪಾಟೀಲ್
KARNATAKA

ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಸಚಿವ ಎಂ.ಬಿ ಪಾಟೀಲ್

By kannadanewsnow0919/09/2025 5:07 PM

ಬೆಂಗಳೂರು: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಆ ಜಿಲ್ಲೆಯ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ʻಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ, ಒಪ್ಪಿಗೆ ನೀಡಲಾಗಿದೆ. ಇದರಿಂದಾಗಿ ವಿಜಯಪುರ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿನ ಒಟ್ಟು ವೆಚ್ಚವು 618.75 ಕೋಟಿ ರೂ.ಗಳಾಗಲಿದೆ. ಎಟಿಆರ್‌ ಮಾದರಿಯ ನಾಗರಿಕ ವಿಮಾನ ಕಾರ್ಯಾಚರಣೆಗೆ ಸೀಮಿತವಾಗಿದ್ದ ವಿಮಾನ ನಿಲ್ದಾಣದ ಮೂಲ ವಿನ್ಯಾಸವನ್ನು ಏರ್‌ಬಸ್‌-320 ಮಾದರಿಯ ವಿಮಾನಗಳ ಕಾರ್ಯಾಚರಣೆಗೂ ಅನುಕೂಲವಾಗುವಂತೆ ಬದಲಿಸಿದ್ದರಿಂದ ವೆಚ್ಚ ಹೆಚ್ಚಾಗುತ್ತಿದೆʼ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಮೂಲವಿನ್ಯಾಸವನ್ನು ಚಿಕ್ಕ ವಿಮಾನಗಳನ್ನು ಗಮನದಲ್ಲಿ ಇಟ್ಟಿಕೊಂಡು ಮಾತ್ರ ಮಾಡಲಾಗಿತ್ತು. ಅದರಲ್ಲಿ ಏರ್‌ಬಸ್‌ ಮಾದರಿಯ ವಿಮಾನ ಕಾರ್ಯಾಚರಣೆಗಳಿಗಾಗಲಿ, ನೈಟ್‌ ಲ್ಯಾಂಡಿಂಗ್‌ಗಾಗಲಿ ಅವಕಾಶವಿರಲಿಲ್ಲ. ಆದರೆ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ಉತ್ತರ ಕರ್ನಾಟಕದ ನಗರಗಳು ಕ್ಷಿಪ್ರವಾಗಿ ಬೆಳೆಯುತ್ತಿವೆ. ಜೊತೆಗೆ ಮಹಾರಾಷ್ಟ್ರದ ಸೊಲ್ಲಾಪುರ, ಸತಾರಾ ಜಿಲ್ಲೆಗಳೂ ವಿಜಯಪುರಕ್ಕೆ ಹತ್ತಿರವಾಗಿವೆ. ಇತ್ತ ಬೆಳಗಾವಿ, ಕಲಬುರಗಿ ಜಿಲ್ಲೆಯ ಹಲವು ತಾಲ್ಲೂಕುಗಳ ಒಡನಾಟವೂ ವಿಜಯಪುರದೊಂದಿಗೆ ಹೆಚ್ಚಾಗಿದೆ. ಹೀಗಾಗಿ ಮುಂದಿನ ಐವತ್ತು ವರ್ಷಗಳ ಅಗತ್ಯವನ್ನು ಪರಿಗಣಿಸಿ, ಹಲವು ಹೆಚ್ಚುವರಿ ಸೌಲಭ್ಯಗಳನ್ನು ಈಗ ಸೇರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈಗ ಒದಗಿಸಲಾಗಿರುವ ಹಣದಲ್ಲಿ ನೈಟ್‌ ಲ್ಯಾಂಡಿಂಗ್‌ ಸಂಬಂಧಿತ ಕಾಮಗಾರಿಗಳು, ರನ್‌ವೇಯ ಎರಡೂ ಬದಿಗಳಿಗೆ ಪೇವ್ಡ್‌ ಶೋಲ್ಡರ್‌ ನಿರ್ಮಾಣ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ಪರಿಹಾರ ಬಾಬ್ತಿಗೆ 65 ಕೋಟಿ ರೂ. ವಿನಿಯೋಗಿಸಲಾಗುವುದು. ವಿಜಯಪುರ ವಿಮಾನ ನಿಲ್ದಾಣದಿಂದ ರಾ.ಹೆ.50ಕ್ಕೆ ಸಂಪರ್ಕ ಕಲ್ಪಿಸಲಿರುವ ಮೀಸಲು ರಸ್ತೆಯ ಅಭಿವೃದ್ಧಿಗೆ 52 ಕೋಟಿ ರೂ. ವೆಚ್ಚವಾಗಲಿದೆ. ವಿಮಾನ ನಿಲ್ದಾಣದ ಮೂಲವಿನ್ಯಾಸದಲ್ಲಿ ಇವುಗಳ ಪ್ರಸ್ತಾಪವೇ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದಲ್ಲದೆ 25 ಕೋಟಿ ರೂ. ವೆಚ್ಚದಲ್ಲಿ ಎರಡು ವಿಮಾನ ರಕ್ಷಣೆ ಮತ್ತು ಅಗ್ನಿಶಾಮಕ ವಾಹನಗಳು (ಎಆರ್‌ಎಫ್‌ಎಫ್‌) ಮತ್ತು ಉಪಕರಣಗಳನ್ನು ಖರೀದಿಸಲಾಗುವುದು. ಮಿಕ್ಕಂತೆ 2.76 ಕೋಟಿ ರೂ.ಗಳಲ್ಲಿ ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯಗೊಳಿಸುವ ಉಪಕರಣಗಳು (ಬಿಡಿಡಿಎಸ್‌) ಮತ್ತು 13.09 ಕೋಟಿ ರೂ. ವೆಚ್ಚದಲ್ಲಿ ಡಿವಿಒಆರ್‌ (ಡೋಪ್ಲರ್‌ ವೆರಿ ಹೈ ಫ್ರೀಕ್ವೆನ್ಸಿ ಓಮ್ನಿ ರೇಂಜ್‌) ಉಪಕರಣಗಳ ಖರೀದಿ ಮತ್ತು ಅಳವಡಿಕೆ ಕೆಲಸಗಳು ನಡೆಯಲಿವೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಕೇಂದ್ರ ಸರಕಾರದ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ತಂಡಗಳು ಕಾಲಕಾಲಕ್ಕೆ ಪರಿಶೀಲಿಸುತ್ತಿದೆ. ಅದು ನಿಗದಿತ ಮಾನದಂಡಗಳಿಗೆ ನೀಡಿದ ಸೂಚನೆಗಳನ್ನು ಪಾಲಿಸಲಾಗುತ್ತಿದೆ. ಹೆಚ್ಚಿನ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚುವರಿ ಹಣಕಾಸು ನೆರವು ಕೋರಿ ಈ ವರ್ಷದ ಫೆಬ್ರವರಿಯಲ್ಲೇ ರಾಜ್ಯ ಮಟ್ಟದ ತಾಂತ್ರಿಕ ಸಲಹೆ ಮತ್ತು ಅಂದಾಜು ಪಟ್ಟಿ ಪರಿಶೀಲನಾ ಸಮಿತಿಗೆ ಪರಿಷ್ಕೃತ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದು ತನ್ನ ಒಪ್ಪಿಗೆ ನೀಡಿದ ನಂತರ ಸಂಪುಟ ಸಭೆಯ ಮುಂದೆ ಬಂದಿತ್ತು ಎಂದು ಅವರು ವಿವರಿಸಿದ್ದಾರೆ.

ವಿಮಾನ ನಿಲ್ದಾಣವನ್ನು ವಿಜಯಪುರ ಮತ್ತು ನೆರೆಹೊರೆಯ ಜಿಲ್ಲೆಗಳಲ್ಲಿ ಕೈಗಾರಿಕಾ, ಆರ್ಥಿಕ, ಶೈಕ್ಷಣಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಯನ್ನು ಗಮನದಲ್ಲಿ ಇಟ್ಟುಕೊಂಡು ದೂರದೃಷ್ಟಿಯಿಂದ ನಿರ್ಮಿಸಲಾಗುತ್ತಿದೆ. ಈ ನಿಲ್ದಾಣವು ಕಾರ್ಯಾಚರಣೆ ಆರಂಭಿಸಿದ ನಂತರ ಕರ್ನಾಟಕ ಮತ್ತು ಉತ್ತರ ಭಾರತದ ನಡುವೆ ಸೇತುವೆಯಾಗಿ ಪರಿಣಮಿಸಲಿದೆ ಎಂದು ಪಾಟೀಲ ಅಭಿಪ್ರಾಯ ಪಟ್ಟಿದ್ದಾರೆ.

ರಾಜ್ಯದ ಜನತೆಗೆ ಗುಡ್ ನ್ಯೂಸ್: 186 ಆಸ್ಪತ್ರೆಗಳಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ವಿಸ್ತರಣೆ

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

Share. Facebook Twitter LinkedIn WhatsApp Email

Related Posts

ALERT : ರಾಜ್ಯದ ಜನರೇ ಗಮನಿಸಿ : `ಮಂಗನ ಕಾಯಿಲೆ’ ಬಗ್ಗೆ ಭಯ ಬೇಡ, ಎಚ್ಚರ ವಹಿಸಿ, ಜಾಗರೂಕರಾಗಿರಿ.!

08/01/2026 6:02 AM1 Min Read

BIG NEWS: ಇನ್ಮುಂದೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ರಜೆ: ರಾಜ್ಯ ಸರ್ಕಾರ ಸೂಚನೆ

08/01/2026 5:58 AM1 Min Read

ರಾಜ್ಯದ ಗ್ರಾಮೀಣ ಜನರು ದಾಖಲೆಗಾಗಿ ಅಲೆದಾಡುವ ಅಗತ್ಯ ಇನ್ನಿಲ್ಲ : ಮನೆಯಲ್ಲೇ ಕುಳಿತು `ಜಮೀನಿನ `ಇ-ಖಾತಾ’ ಪಡೆದುಕೊಳ್ಳಿ.!

08/01/2026 5:54 AM1 Min Read
Recent News

BIG NEWS : ಏ.1ರಿಂದ ಸೆ.30ರವರೆಗೆ ಮೊದಲ ಹಂತದಲ್ಲಿ 2027ರ ಜನಗಣತಿ: ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ

08/01/2026 6:06 AM

ALERT : ರಾಜ್ಯದ ಜನರೇ ಗಮನಿಸಿ : `ಮಂಗನ ಕಾಯಿಲೆ’ ಬಗ್ಗೆ ಭಯ ಬೇಡ, ಎಚ್ಚರ ವಹಿಸಿ, ಜಾಗರೂಕರಾಗಿರಿ.!

08/01/2026 6:02 AM

BIG NEWS: ಇನ್ಮುಂದೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ರಜೆ: ರಾಜ್ಯ ಸರ್ಕಾರ ಸೂಚನೆ

08/01/2026 5:58 AM

BREAKING: ಏ.1ರಿಂದ ಜನಗಣತಿಯ ಭಾಗವಾಗಿ ‘ಮನೆ ಪಟ್ಟಿ’ ಆರಂಭ: ಕೇಂದ್ರದಿಂದ ಅಧಿಸೂಚನೆ | Census 2027

08/01/2026 5:55 AM
State News
KARNATAKA

ALERT : ರಾಜ್ಯದ ಜನರೇ ಗಮನಿಸಿ : `ಮಂಗನ ಕಾಯಿಲೆ’ ಬಗ್ಗೆ ಭಯ ಬೇಡ, ಎಚ್ಚರ ವಹಿಸಿ, ಜಾಗರೂಕರಾಗಿರಿ.!

By kannadanewsnow5708/01/2026 6:02 AM KARNATAKA 1 Min Read

ಮ೦ಗನ ಕಾಯಿಲೆ (ಕೆಎಫ್ಡಿ) ಎಂಬುದು ಉಣ್ಣೆಗಳ ಕಡಿತದಿಂದ ಮನುಷ್ಯರಿಗೆ ಹರಡುವ ವೈರಲ್ ಜ್ವರವಾಗಿದೆ. ಹೀಗಾಗಿ ಜನರು ಮಂಗನ ಕಾಯಿಲೆ ಬಗ್ಗೆ…

BIG NEWS: ಇನ್ಮುಂದೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ರಜೆ: ರಾಜ್ಯ ಸರ್ಕಾರ ಸೂಚನೆ

08/01/2026 5:58 AM

ರಾಜ್ಯದ ಗ್ರಾಮೀಣ ಜನರು ದಾಖಲೆಗಾಗಿ ಅಲೆದಾಡುವ ಅಗತ್ಯ ಇನ್ನಿಲ್ಲ : ಮನೆಯಲ್ಲೇ ಕುಳಿತು `ಜಮೀನಿನ `ಇ-ಖಾತಾ’ ಪಡೆದುಕೊಳ್ಳಿ.!

08/01/2026 5:54 AM

ರಾಜ್ಯದ 12 ತಾಲೂಕುಗಳ, ಜಿ.ಪಂ,ತಾ.ಪಂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ತಕ್ಷಣ ಜಾರಿಗೆ ಬರುವಂತೆ ಹಿಂಪಡೆದ ಸರ್ಕಾರ.!

08/01/2026 5:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.