Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : ‘IDBI’ ಬ್ಯಾಂಕ್ ನಲ್ಲಿ 675 ಹುದ್ದೆಗಳಿಗೆ ಅರ್ಜಿ ಆಹ್ವಾನ | IDBI Bank Recruitment 2025

12/05/2025 8:37 AM

BIG NEWS : `ಆಪರೇಷನ್ ಸಿಂಧೂರ್ ಮೂಲಕ ಭಾರತ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿದೆ : `DGMO’ ಪತ್ರಿಕಾಗೋಷ್ಠಿಯ 15 ಪ್ರಮುಖ ಅಂಶಗಳು ಹೀಗಿವೆ | Operation Sindoor

12/05/2025 8:29 AM

ಬಾರ್ಮರ್ನಲ್ಲಿ ಡ್ರೋನ್ ಚಟುವಟಿಕೆ ಪತ್ತೆ, ನಿವಾಸಿಗಳಿಗೆ ಮನೆಯೊಳಗೆ ಇರಲು ಸೂಚನೆ | India – Pak Tensions

12/05/2025 8:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹೆದರಲ್ಲ: ಸಿಎಂ ಸಿದ್ಧರಾಮಯ್ಯ
KARNATAKA

ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹೆದರಲ್ಲ: ಸಿಎಂ ಸಿದ್ಧರಾಮಯ್ಯ

By kannadanewsnow0922/10/2024 3:21 PM

ವರುಣಾ : ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹರದರಲ್ಲ. ಎಲ್ಲಾ ಷಡ್ಯಂತ್ರ ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದರು.

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ಕ್ಷೇತ್ರದ ಮತದಾರರಿಗೆ ಅನಂತ ಅನಂತ ಧನ್ಯವಾದ ಅರ್ಪಿಸಿದರು.

ವರುಣಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ಕೊಡಲಾಗುತ್ತಿದೆ. ನಾನು ಉಪಕಾರ ಮಾಡುತ್ತಿಲ್ಲ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಮಾಡುವ ನನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ ಎಂದರು.

ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೆಲ್ಲಾ ವರುಣ ಕ್ಷೇತ್ರ ಮಾತ್ರವಲ್ಲದೆ ರಾಜ್ಯದ ಎಲ್ಲ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇನೆ. ಹತ್ತು ಹಲವು ಭಾಗ್ಯಗಳನ್ನು ಕೊಡುವ ಜೊತೆಗೆ ಹಲವು ನಿಗಮಗಳ ಸಾಲ ಮನ್ನಾ ಮಾಡಿದ್ದೇನೆ. ಅಂಬೇಡ್ಕರ್ ಅವರ ಆಶಯದಂತೆ ಬಡವರಿಗೆ ಆರ್ಥಿಕ‌ ಶಕ್ತಿ ಕೊಡುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇನೆ.

ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ, ಮಧ್ಯಮ ವರ್ಗದವರ ಬದುಕಿಗೆ ಆಸರೆ ಆಗುವ ಐದೂ ಗ್ಯಾರಂಟಿ ಯೋಜನೆಗಳನ್ನು ಜನಪರವಾಗಿ ರೂಪಿದಿ ಜಾರಿ ಮಾಡಿದ್ದೇವೆ. ಪ್ರತೀ ವರ್ಷ ಈ ಗ್ಯಾರಂಟಿಗಳ ಮೂಲಕ 56 ಸಾವಿರ ಕೋಟಿ ರೂಪಾಯಿಗಳನ್ನು ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗೆ ದೇಶದಲ್ಲಿ ನುಡಿದಂತೆ ನಡೆದುಕೊಂಡಿರುವ ಪಕ್ಷ ನಿಮ್ಮ ಪಕ್ಷ. ನಿಮ್ಮದೇ ಕಾಂಗ್ರೆಸ್ ಪಕ್ಷ ಎಂದರು.

ಕೇಂದ್ರದಲ್ಲಿರುವ ಮೋದಿ ಸರ್ಕಾರವಾಗಲಿ, ರಾಜ್ಯದಲ್ಲಿದ್ದ ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಜನರ ಕಲ್ಯಾಣ ಮಾಡದೆ ಲೂಟಿ ಮಾಡಿ ಹೋದರು ಎಂದರು.

ಬಿಜೆಪಿ: ಸಾಮಾಜಿಕ ನ್ಯಾಯದ, ಬಡವರ ವಿರೋಧಿ

ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ. ಬಡವರ ವಿರೋಧಿ. ಮೂರು ಬಾರಿ ಪ್ರಧಾನಿ ಆಗಿರುವ ಮೋದಿ ಕೊಟ್ಟ ಮಾತಿನಂತೆ ನಡೆದ ಉದಾಹರಣೆ ಇದೆಯಾ ಹೇಳಿ.‌ ಇಷ್ಟು ವರ್ಷ ಪ್ರಧಾನಿಯಾಗಿ ಮೋದಿ ಬಡಪರ ಪರವಾಗಿ ಒಂದೇ ಒಂದು ಯೋಜನೆ ಜಾರಿ ಮಾಡಿದ್ದಾರಾ ಹೇಳಿ ಅಂದರು.

ಕೇಂದ್ರದಿಂದ ರಾಜ್ಯಕ್ಕೆ ನಿರಂತರ ದ್ರೋಹ

ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವವರು ನಾವು. ನಾವು ನಮ್ಮ ಪಾಲಿನ ತೆರಿಗೆ ಪಡೆಯಲು ಭಿಕ್ಷೆ ಬೇಡಬೇಕಾ? ಮೊನ್ನೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳಿಗೆ ಅತಿ ಹೆಚ್ಚು ತೆರಿಗೆ ಪಾಲು ಕೊಟ್ಟಿರುವ ಕೇಂದ್ರಕ್ಕೆ ರಾಜ್ಯಕ್ಕೆ ಮಾತ್ರ ಕೇವಲ ಆರು ಸಾವಿರ ಕೋಟಿ ಕೊಟ್ಟು ಭಯಾನಕ ಅನ್ಯಾಯ ಮಾಡಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಅನ್ಯಾಯದ ವಿರುದ್ದ ದೆಹಲಿಗೇ ಹೋಗಿ ನಾವು ಪ್ರತಿಭಟನೆ ಮಾಡಿದೆವು. ಬಿಜೆಪಿ-ಜೆಡಿಎಸ್ ಒಬ್ಬೇ ಒಬ್ಬ ಲೋಕಸಭಾ ಸದಸ್ಯ ರಾಜ್ಯದ ಪಾಲನ್ನು ಕೇಳುವ ಧೈರ್ಯ ಮಾಡಿಲ್ಲ. ಮಾಡುವುದೂ ಇಲ್ಲ. ಆದ್ದರಿಂದ ಕೇಂದ್ರದ ದ್ರೋಹದ ವಿರುದ್ಧ ರಾಜ್ಯದ ಜನತೆ ಮಾತನಾಡಬೇಕು ಎಂದು ಕರೆ ನೀಡಿದರು.

ರಾಜ್ಯಕ್ಕೆ ವಿಶೇಷ ಅನುದಾನದ ಜೊತೆಗೆ ನೀರಾವರಿ ಯೋಜನೆಗೆ 5495 ಕೋಟಿ ನೀಡಲು ಶಿಫಾರಸ್ಸು ಮಾಡಿದ್ದ ನಿರ್ಮಲಾ ಸೀತಾರಾಮನ್ ಈ ಹಣವನ್ನೂ ಕೊಡಲಿಲ್ಲ. ರಾಜ್ಯದ ಫೆರಿಫೆರಲ್ ರಸ್ತೆಗೆ, ಕೆರೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ಕೊಡ್ತೀವಿ ಅಂದು ಘೋಷಿಸಿದರು. ಆದರೆ ನಯಾಪೈಸೆ ಕೊಡಲಿಲ್ಲ. ಈ ಅನ್ಯಾಯಗಳ ವಿರುದ್ಧ ರಾಜ್ಯದ ಜನತೆ ಮಾತನಾಡಿದರೆ ತಪ್ಪಾ, ನಾವು ಪ್ರತಿಭಟಿಸಿದರೆ ತಪ್ಪಾ ಎಂದು ಗುಡುಗಿದರು.

ಲೋಕಸಭಾ ಯೋಜನೆ ಬಳಿಕ ನಮ್ಮ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎಂದು ದೆಹಲಿಯ ಮೋದಿಯಿಂದ, ಇಲ್ಲಿನ ಆರ್.ಅಶೋಕ್ ವರೆಗೂ ಸುಳ್ಳುಗಳ ಮೇಲೆ ಸುಳ್ಳು ಹೇಳಿದರು. ಇದುವರೆಗೂ ಗ್ಯಾರಂಟಿಗಳು ನಿಂತಿಲ್ಲ. ನಿಲ್ಲುವುದೂ ಇಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ನಿಲ್ಲಲ್ಲ ಎಂದು ಘೋಷಿಸಿದರು.‌

ಸಿದ್ದರಾಮಯ್ಯ ಒಂದೇ ಒಂದು ರೂಪಾಯಿ ಲಂಚ ಪಡೆದ ಉದಾಹರಣೆ ಇದೆಯಾ: ನನ್ನ ಮೇಲಿನ ಸುಳ್ಳು ಆರೋಪ ಸಹಿಸ್ತೀರಾ ಎಂದು ಪ್ರಶ್ನಿಸಿದರು.

ನಾನು ಮಂತ್ರಿಯಾಗಿ 45 ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ಹಿಂದುಳಿದ ವರ್ಗದ ನಾನು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿಗೆ ಹೊಟ್ಟೆಕಿಚ್ಚು. ಇದನ್ನು ನೀವು ಸಹಿಸ್ತೀರಾ ಎಂದು ಮರು ಪ್ರಶ್ನಿಸಿದರು.

ನಾನು ಎರಡು ಬಾರಿ ಸಿಎಂ ಆಗಿ ಮೈಸೂರಲ್ಲಿ ಒಂದೂ ಮನೆ ಇಲ್ಲ. ಮರಿಸ್ವಾಮಿ ಮನೇಲಿ ಇದೀನಿ. ಕುವೆಂಪು ರಸ್ತೇಲಿ 3 ವರ್ಷದಿಂದ ಮನೆ ಕಟ್ಟುತ್ತಲೇ ಇದ್ದೀನಿ. ಇದುವರೆಗೂ ಪೂರ್ತಿ ಆಗಿಲ್ಲ. ನನಗೆ ವರ್ಚಸ್ಸು ಕೊಡುವವರು ನೀವು. ನಿಮ್ಮ ಎದುರಿಗೆ ಪ್ರಾಮಾಣಿಕವಾಗಿ ಇದ್ದೇನೆ ಎಂದರು.

ನೀವೇ ನನ್ನ ಮಾಲೀಕರು. ನೀವೇ ನನ್ನ ಯಜಮಾನರು. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದರು.

ಬಿಜೆಪಿ-ಜೆಡಿಎಸ್ ನಾಯಕರ ಹೊಟ್ಟೆಕಿಚ್ಚಿನಿಂದ ನನ್ನ ವರ್ಚಸ್ಸು ಕಡಿಮೆ ಆಗಲ್ಲ. ನನ್ನ ವರ್ಚಸ್ಸು ವರುಣಾ ಜನತೆ, ನನ್ನ ವರ್ಚಸ್ಸು ರಾಜ್ಯದ ಜನತೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಸಚಿವರುಗಳಾದ ಕೆ.ವೆಂಕಟೇಶ್, ರಹೀಂಖಾನ್, ಬೋಸ್ ರಾಜ್, ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ವಿಧಾನಸಭೆ ಮತ್ತು ವಿಧಾನ‌ ಪರಿಷತ್ ಶಾಸಕರುಗಳಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ದ್ರುವನಾರಾಯಣ್, ತಿಮ್ಮಯ್ಯ, ವರುಣಾ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು, ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಸೇರಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದಿಂದ ‘ಮಹಿಳಾ ವೈದ್ಯಕೀಯ ಸಿಬ್ಬಂದಿ’ ಸುರಕ್ಷತೆಗೆ ಮಹತ್ವದ ಕ್ರಮ: ಇನ್ಮುಂದೆ ‘ರಕ್ಷಾ ಕೋಟೆ’ ಕಣ್ಗಾವಲು

ಮೈಸೂರು ವಿಭಾಗದ ’15 ರೈಲ್ವೆ ನಿಲ್ದಾಣ’ಗಳಲ್ಲಿ ಭರದಿಂದ ಸಾಗಿದ ‘ಮೂಲ ಸೌಕರ್ಯ ಅಭಿವೃದ್ಧಿ’ ಕಾಮಗಾರಿ

Share. Facebook Twitter LinkedIn WhatsApp Email

Related Posts

ALERT : ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಪ್ರಕಟಣೆ.!

12/05/2025 7:16 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು.!

12/05/2025 7:09 AM1 Min Read

BREAKING : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ `ರಾಕೇಶ್ ಪೂಜಾರಿ’ ನಿಧನ | Rakesh Poojary passes away

12/05/2025 6:59 AM1 Min Read
Recent News

ಉದ್ಯೋಗವಾರ್ತೆ : ‘IDBI’ ಬ್ಯಾಂಕ್ ನಲ್ಲಿ 675 ಹುದ್ದೆಗಳಿಗೆ ಅರ್ಜಿ ಆಹ್ವಾನ | IDBI Bank Recruitment 2025

12/05/2025 8:37 AM

BIG NEWS : `ಆಪರೇಷನ್ ಸಿಂಧೂರ್ ಮೂಲಕ ಭಾರತ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿದೆ : `DGMO’ ಪತ್ರಿಕಾಗೋಷ್ಠಿಯ 15 ಪ್ರಮುಖ ಅಂಶಗಳು ಹೀಗಿವೆ | Operation Sindoor

12/05/2025 8:29 AM

ಬಾರ್ಮರ್ನಲ್ಲಿ ಡ್ರೋನ್ ಚಟುವಟಿಕೆ ಪತ್ತೆ, ನಿವಾಸಿಗಳಿಗೆ ಮನೆಯೊಳಗೆ ಇರಲು ಸೂಚನೆ | India – Pak Tensions

12/05/2025 8:25 AM

BIG NEWS : `ಆಪರೇಷನ್ ಸಿಂಧೂರ್’ ಬಳಿಕ ಭಾರತದಲ್ಲಿ ಪಾಕಿಸ್ತಾನದ 8000 `X’ ಖಾತೆಗಳು ನಿಷೇಧ : ಕೇಂದ್ರ ಸರ್ಕಾರ ಮಹತ್ವದ ಆದೇಶ.!

12/05/2025 8:23 AM
State News
KARNATAKA

ALERT : ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಪ್ರಕಟಣೆ.!

By kannadanewsnow5712/05/2025 7:16 AM KARNATAKA 1 Min Read

ಬೆಂಗಳೂರು : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಪಾಕ್ ಸೈಬರ್ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು.!

12/05/2025 7:09 AM

BREAKING : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ `ರಾಕೇಶ್ ಪೂಜಾರಿ’ ನಿಧನ | Rakesh Poojary passes away

12/05/2025 6:59 AM

BREAKING : ಲೋ ಬಿಪಿಯಿಂದ ಕಾಮಿಡಿ ಕಿಲಾಡಿಗಳು ಖ್ಯಾತಿಯ `ರಾಕೇಶ್ ಪೂಜಾರಿ’ ಸಾವು.!

12/05/2025 6:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.