ಬೆಂಗಳೂರು: ನನ್ನ ಪತ್ನಿ ಆರ್ ಸಿ ಬಿಯ ನಿಖಿಲ್ ಸೋಸಲೆಯನ್ನು ಸಿಎಂ ಸಿದ್ಧರಾಮಯ್ಯ ಆದೇಶ ಅನುಸಾರವಾಗಿ ಕಾನೂನು ಭಾಹಿರವಾಗಿ ಬಂಧಿಸಿದ್ದಾರೆ. ಅವರನ್ನು ಬಿಡುಗಡೆಗೆ ಆದೇಶಿಸುವಂತೆ ನಿಖಿಲ್ ಸೋಸಲೆ ಪತ್ನಿ ಮಾಳವಿಕಾ ನಾಯ್ಕ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಂತೆ ಅವರು ಸಿಎಂ ಆದೇಶಾನುಸಾರ ತಮ್ಮ ಪತ್ನಿಯನ್ನು ಕಾನೂನು ಭಾಹಿರವಾಗಿ ಬಂಧನ ಮಾಡಲಾಗಿದೆ. ಹೀಗಾಗಿ ಬಿಡುಗಡೆ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.
ಸಿಎಂ ಸಿದ್ಧರಾಮಯ್ಯ ಆದೇಶದ ಅನುಸಾರವಾಗಿ ಆರ್ ಸಿ ಬಿಯ ನಿಖಿಲ್ ಸೋಸಲೆ ಬಂಧನ ಮಾಡಲಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಭಾಗಿಯಾಗಿದ್ದರು ಎಂಬುದಾಗಿ ರಿಟ್ ಅರ್ಜಿಯಲ್ಲಿ ನಿಖಿಲ್ ಸೋಸಲೆ ಪತ್ನಿ ಮಾಳವಿಕಾ ನಾಯ್ಕ್ ಗಂಭೀರ ಆರೋಪ ಮಾಡಿದ್ದಾರೆ.
ಪತ್ನಿ, ಎರಡು ವರ್ಷದ ಮಗುವಿನೊಂದಿಗೆ ಪ್ರಯಾಣಿಸುವ ವೇಳೆಯಲ್ಲಿ ಕೆ ಐ ಎಎಲ್ ನಲ್ಲಿ ಪೊಲೀಸರು ಕಾನೂನು ಬಾಹಿರವಾಗಿ ಬಂಧಿಸಿದ್ದಾರೆ. ಯಾವುದೇ ತನಿಖೆಯನ್ನೂ ನಡೆಸದೇ ಸಿಎಂ ಆದೇಶಾನುಸಾರ ಬಂಧಿಸಿದ್ದಾರೆ. ತಮ್ಮ ಪತ್ನಿಯನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಗೆ ಮನವಿ ಮಾಡಲಾಗಿದೆ ಎಂದರು.